<p><strong>ಇಂದೋರ್</strong>: ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ ಹಲವು ಮಂದಿ ಮೃತಪಟ್ಟು, ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಧ್ಯಪ್ರದೇಶದ ಇಂದೋರ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.</p><p>ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 4 ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಕುಟುಂಬ ಸದಸ್ಯರನ್ನೂ ಭೇಟಿಯಾದರು.</p><p>ಮಧ್ಯಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೀತು ಪಟ್ವಾರಿ ಮತ್ತು ಪಕ್ಷದ ಮುಖಂಡ ಉಮಂಗ್ ಸಿಂಗಾರ್ ರಾಹುಲ್ ಜೊತೆಗಿದ್ದರು.</p><p>ಕಲುಷಿತ ನೀರಿನ ದುರಂತ ಸಂಭವಿಸಿದ ಭಗೀರಥಪುರ ಪ್ರದೇಶಕ್ಕೂ ಭೇಟಿ ನೀಡಿದ ರಾಹುಲ್, ಮೃತರ ಸಂಬಂಧಿಕರನ್ನು ಭೇಟಿಯಾಗಿ ಸಂತೈಸಿದರು. </p><p>ಕಲುಷಿತ ನೀರು ಸೇವನೆಯಿಂದ ವಾಂತಿ ಮತ್ತು ಭೇದಿ ಸಂಭವಿಸಿ 24 ಮಂದಿ ಮೃತಪಟ್ಟಿದ್ದಾರೆ ಎಂದು ಭಗೀರಥಪುರದ ನಿವಾಸಿಗಳು ರಾಹುಲ್ಗೆ ತಿಳಿಸಿದ್ದಾರೆ. ಆದರೆ, ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಮಧ್ಯ ಪ್ರದೇಶ ಹೈಕೋರ್ಟ್ಗೆ ಮಾಹಿತಿ ನೀಡಿದೆ.</p><p>ಈ ನಡುವೆ ಸರ್ಕಾರಿ ಸ್ವಾಮ್ಯದ ಮಹಾತ್ಮ ಗಾಂಧಿ ಮೆಮೊರಿಯಲ್ ಮೆಡಿಕಲ್ ಕಾಲೇಜಿನ ವೈದ್ಯರ ತಂಡ ನಡೆಸಿದ ಆಡಿಟ್ನಲ್ಲಿ 15 ಮಂದಿ ಮಾತ್ರ ವಾಂತಿ ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಲಾಗಿತ್ತು.</p><p>ಮೃತರ ಕುಟುಂಬಗಳಿಗೆ ಸರ್ಕಾರ ತಲಾ ₹2 ಲಕ್ಷ ಪರಿಹಾರ ನೀಡಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್</strong>: ಕಲುಷಿತ ನೀರು ಕುಡಿದು ವಾಂತಿ, ಭೇದಿಯಿಂದ ಹಲವು ಮಂದಿ ಮೃತಪಟ್ಟು, ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಧ್ಯಪ್ರದೇಶದ ಇಂದೋರ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.</p><p>ಬಾಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 4 ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಕುಟುಂಬ ಸದಸ್ಯರನ್ನೂ ಭೇಟಿಯಾದರು.</p><p>ಮಧ್ಯಪ್ರದೇಶದ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೀತು ಪಟ್ವಾರಿ ಮತ್ತು ಪಕ್ಷದ ಮುಖಂಡ ಉಮಂಗ್ ಸಿಂಗಾರ್ ರಾಹುಲ್ ಜೊತೆಗಿದ್ದರು.</p><p>ಕಲುಷಿತ ನೀರಿನ ದುರಂತ ಸಂಭವಿಸಿದ ಭಗೀರಥಪುರ ಪ್ರದೇಶಕ್ಕೂ ಭೇಟಿ ನೀಡಿದ ರಾಹುಲ್, ಮೃತರ ಸಂಬಂಧಿಕರನ್ನು ಭೇಟಿಯಾಗಿ ಸಂತೈಸಿದರು. </p><p>ಕಲುಷಿತ ನೀರು ಸೇವನೆಯಿಂದ ವಾಂತಿ ಮತ್ತು ಭೇದಿ ಸಂಭವಿಸಿ 24 ಮಂದಿ ಮೃತಪಟ್ಟಿದ್ದಾರೆ ಎಂದು ಭಗೀರಥಪುರದ ನಿವಾಸಿಗಳು ರಾಹುಲ್ಗೆ ತಿಳಿಸಿದ್ದಾರೆ. ಆದರೆ, ದುರಂತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಮಧ್ಯ ಪ್ರದೇಶ ಹೈಕೋರ್ಟ್ಗೆ ಮಾಹಿತಿ ನೀಡಿದೆ.</p><p>ಈ ನಡುವೆ ಸರ್ಕಾರಿ ಸ್ವಾಮ್ಯದ ಮಹಾತ್ಮ ಗಾಂಧಿ ಮೆಮೊರಿಯಲ್ ಮೆಡಿಕಲ್ ಕಾಲೇಜಿನ ವೈದ್ಯರ ತಂಡ ನಡೆಸಿದ ಆಡಿಟ್ನಲ್ಲಿ 15 ಮಂದಿ ಮಾತ್ರ ವಾಂತಿ ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಲಾಗಿತ್ತು.</p><p>ಮೃತರ ಕುಟುಂಬಗಳಿಗೆ ಸರ್ಕಾರ ತಲಾ ₹2 ಲಕ್ಷ ಪರಿಹಾರ ನೀಡಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>