<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. </p><p>'ಇಂಡಿಯಾ' ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶರದ್ ಪವಾರ್ ಹಾಗೂ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕರನ್ನು ರಾಹುಲ್ ಭೇಟಿಯಾಗಿ ಚರ್ಚಿಸಿದರು. </p><p>ಸಂಸತ್ತಿನಲ್ಲಿ ಲೋಕಸಭೆ ಅಧಿವೇಶನ ಮುಂದುವರಿದಿದೆ. ಈ ನಡುವೆ ಪವಾರ್-ರಾಹುಲ್ ಭೇಟಿ ನಡೆದಿದೆ. </p><p>ಮಹಾರಾಷ್ಟ್ರದ ಸಮಕಾಲೀನ ರಾಜಕೀಯ ಪರಿಸ್ಥಿತಿ ಹಾಗೂ 'ಮಹಾ ವಿಕಾಸ ಅಘಾಡಿ' ಮೈತ್ರಿಯನ್ನು ಬಲಪಡಿಸುವ ಕುರಿತಾಗಿಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ. </p><p>ಇತ್ತೀಚೆಗೆ ಅಂತ್ಯಗೊಂಡ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್ಸಿಪಿ (ಶರದ್ಚಂದ್ರ ಪವಾರ್ ಬಣ) ಹಾಗೂ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಮೈತ್ರಿ ಅತ್ಯುತ್ತಮ ಸಾಧನೆ ಮಾಡಿತು. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಯನ್ನು ಸೋಲಿಸುವ ಗುರಿ ಹೊಂದಿದೆ. </p>.ಲೋಕಸಭಾ ಕಡತದಿಂದ ಭಾಷಣಕ್ಕೆ ಕೊಕ್: ಸ್ಪೀಕರ್ಗೆ ಪತ್ರ ಬರೆದ ರಾಹುಲ್ ಗಾಂಧಿ.ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಯುದ್ಧೋಪಾದಿ ಕೆಲಸ: ಮೋದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. </p><p>'ಇಂಡಿಯಾ' ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶರದ್ ಪವಾರ್ ಹಾಗೂ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕರನ್ನು ರಾಹುಲ್ ಭೇಟಿಯಾಗಿ ಚರ್ಚಿಸಿದರು. </p><p>ಸಂಸತ್ತಿನಲ್ಲಿ ಲೋಕಸಭೆ ಅಧಿವೇಶನ ಮುಂದುವರಿದಿದೆ. ಈ ನಡುವೆ ಪವಾರ್-ರಾಹುಲ್ ಭೇಟಿ ನಡೆದಿದೆ. </p><p>ಮಹಾರಾಷ್ಟ್ರದ ಸಮಕಾಲೀನ ರಾಜಕೀಯ ಪರಿಸ್ಥಿತಿ ಹಾಗೂ 'ಮಹಾ ವಿಕಾಸ ಅಘಾಡಿ' ಮೈತ್ರಿಯನ್ನು ಬಲಪಡಿಸುವ ಕುರಿತಾಗಿಯೂ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ. </p><p>ಇತ್ತೀಚೆಗೆ ಅಂತ್ಯಗೊಂಡ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್ಸಿಪಿ (ಶರದ್ಚಂದ್ರ ಪವಾರ್ ಬಣ) ಹಾಗೂ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಮೈತ್ರಿ ಅತ್ಯುತ್ತಮ ಸಾಧನೆ ಮಾಡಿತು. ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಯನ್ನು ಸೋಲಿಸುವ ಗುರಿ ಹೊಂದಿದೆ. </p>.ಲೋಕಸಭಾ ಕಡತದಿಂದ ಭಾಷಣಕ್ಕೆ ಕೊಕ್: ಸ್ಪೀಕರ್ಗೆ ಪತ್ರ ಬರೆದ ರಾಹುಲ್ ಗಾಂಧಿ.ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಯುದ್ಧೋಪಾದಿ ಕೆಲಸ: ಮೋದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>