‘ರಾಜಸ್ಥಾನ, ಮಧ್ಯಪ್ರದೇಶದಂಥ ರಾಜ್ಯಗಳಲ್ಲಿ ಬಿಜೆಪಿ– ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇದೆ. ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಅವರು ಈ ರಾಜ್ಯಗಳಿಗೆ ಹೋಗಿ ಪ್ರಚಾರ ನಡೆಸುವುದಿಲ್ಲವೇಕೆ? ದೆಹಲಿಯಲ್ಲಿ ಅವರು ಸಮಯ ವ್ಯರ್ಥ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಎಸ್ಪಿ–ಬಿಎಸ್ಪಿ ವಿರುದ್ಧ, ದೆಹಲಿಯಲ್ಲಿ ಎಎಪಿ ವಿರುದ್ಧ ರ್ಯಾಲಿಗಳನ್ನು ನಡೆಸುತ್ತಿದ್ದಾರೆ. ಪ್ರಿಯಾಂಕಾ ಮತ್ತು ರಾಹುಲ್ ಅವರು ಬಿಜೆಪಿ ಜೊತೆ ನೇರ ಸ್ಪರ್ಧೆ ಇರುವ ರಾಜ್ಯಗಳಿಗೆ ಯಾಕೆ ಹೋಗುತ್ತಿಲ್ಲ’ ಎಂದು ಕೇಜ್ರಿವಾಲ್ ಪ್ರಶ್ನಿಸಿದರು.