<p><strong>ನವದೆಹಲಿ:</strong> ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ, ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ಪರಿಹಾರ ಕಾರ್ಯಗಳಿಗೆ ಕೇಂದ್ರದ ಕಡೆಗಣನೆಯನ್ನು ವಿರೋಧಿಸಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಸಂಸತ್ತಿನ ಒಳಗೂ, ಹೊರಗೂ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. </p><p>ಭೂಕುಸಿತ ಪ್ರದೇಶದ ಜನರಿಗೆ ಕೇಂದ್ರ ಸರ್ಕಾರವು ಆರ್ಥಿಕ ನೆರವು ನೀಡದಿರುವುದು 'ಅಮಾನವೀಯ' ಎಂದು ಕಲ್ಪೆಟ್ಟದ ಕಾಂಗ್ರೆಸ್ ಶಾಸಕ ಟಿ.ಸಿದ್ದೀಕ್ ಆರೋಪಿಸಿದ್ದಾರೆ. </p><p>'ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದಾಗ ಸಿಎಂ ಪಿಣರಾಯಿ ವಿಜಯನ್ ಅವರಲ್ಲದೆ ತಾವು ಕೂಡ ಭೂಕುಸಿತದಿಂದ ಬದುಕುಳಿದವರ ಪರಿಹಾರ ಹಾಗೂ ಪುನರ್ವಸತಿಗಾಗಿ ನೆರವು ಕೋರಿ ಮನವಿ ಸಲ್ಲಿಸಿದ್ದೇವೆ' ಎಂದು ಅವರು ತಿಳಿಸಿದ್ದಾರೆ. </p><p>'ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದರೂ ಪ್ರಧಾನಿ ಮೋದಿ ಅಥವಾ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಲ್ಲ' ಎಂದು ಅವರು ಆರೋಪಿಸಿದರು. </p><p>'ದುರಂತಕ್ಕೀಡಾದ ಜನರ ಮೇಲೆ ಕೇಂದ್ರವು ಅಮಾನವೀಯ ವರ್ತನೆಯನ್ನು ತೋರಿದೆ. ಇದರ ವಿರುದ್ಧ ರಾಹುಲ್, ಪ್ರಿಯಾಂಕಾ ನೇತೃತ್ವದಲ್ಲಿ ಸಂಸತ್ತಿನ ಒಳಗೂ, ಹೊರಗೂ ಪ್ರತಿಭಟಿಸಲಾಗುವುದು' ಎಂದು ಅವರು ಹೇಳಿದರು. </p><p>ವಯನಾಡಿನಲ್ಲಿ ಜುಲೈ 30ರಂದು ನಡೆದ ಭೂಕುಸಿತದಲ್ಲಿ 231 ಮಂದಿ ಮೃತಪಟ್ಟಿದ್ದರು. 47 ಮಂದಿ ನಾಪತ್ತೆಯಾಗಿದ್ದರು. </p>.ವಯನಾಡು ಭೂಕುಸಿತ ಸಂತ್ರಸ್ತರಿಗೆ ಕೇಂದ್ರದ ನೆರವಿಲ್ಲ: ಕೇರಳ ಸಿಎಂ ಪಿಣರಾಯಿ ಆರೋಪ.ವಯನಾಡು ದುರಂತಕ್ಕೆ ಪರಿಹಾರ ವಿಳಂಬ: ಕೇಂದ್ರದ ವಿರುದ್ಧ ಕೇರಳ ವಿಧಾನಸಭೆ ನಿರ್ಣಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ, ಸಂತ್ರಸ್ತರಿಗೆ ಪುನರ್ವಸತಿ ಸೇರಿದಂತೆ ಪರಿಹಾರ ಕಾರ್ಯಗಳಿಗೆ ಕೇಂದ್ರದ ಕಡೆಗಣನೆಯನ್ನು ವಿರೋಧಿಸಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಸಂಸತ್ತಿನ ಒಳಗೂ, ಹೊರಗೂ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. </p><p>ಭೂಕುಸಿತ ಪ್ರದೇಶದ ಜನರಿಗೆ ಕೇಂದ್ರ ಸರ್ಕಾರವು ಆರ್ಥಿಕ ನೆರವು ನೀಡದಿರುವುದು 'ಅಮಾನವೀಯ' ಎಂದು ಕಲ್ಪೆಟ್ಟದ ಕಾಂಗ್ರೆಸ್ ಶಾಸಕ ಟಿ.ಸಿದ್ದೀಕ್ ಆರೋಪಿಸಿದ್ದಾರೆ. </p><p>'ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದಾಗ ಸಿಎಂ ಪಿಣರಾಯಿ ವಿಜಯನ್ ಅವರಲ್ಲದೆ ತಾವು ಕೂಡ ಭೂಕುಸಿತದಿಂದ ಬದುಕುಳಿದವರ ಪರಿಹಾರ ಹಾಗೂ ಪುನರ್ವಸತಿಗಾಗಿ ನೆರವು ಕೋರಿ ಮನವಿ ಸಲ್ಲಿಸಿದ್ದೇವೆ' ಎಂದು ಅವರು ತಿಳಿಸಿದ್ದಾರೆ. </p><p>'ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದರೂ ಪ್ರಧಾನಿ ಮೋದಿ ಅಥವಾ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಲ್ಲ' ಎಂದು ಅವರು ಆರೋಪಿಸಿದರು. </p><p>'ದುರಂತಕ್ಕೀಡಾದ ಜನರ ಮೇಲೆ ಕೇಂದ್ರವು ಅಮಾನವೀಯ ವರ್ತನೆಯನ್ನು ತೋರಿದೆ. ಇದರ ವಿರುದ್ಧ ರಾಹುಲ್, ಪ್ರಿಯಾಂಕಾ ನೇತೃತ್ವದಲ್ಲಿ ಸಂಸತ್ತಿನ ಒಳಗೂ, ಹೊರಗೂ ಪ್ರತಿಭಟಿಸಲಾಗುವುದು' ಎಂದು ಅವರು ಹೇಳಿದರು. </p><p>ವಯನಾಡಿನಲ್ಲಿ ಜುಲೈ 30ರಂದು ನಡೆದ ಭೂಕುಸಿತದಲ್ಲಿ 231 ಮಂದಿ ಮೃತಪಟ್ಟಿದ್ದರು. 47 ಮಂದಿ ನಾಪತ್ತೆಯಾಗಿದ್ದರು. </p>.ವಯನಾಡು ಭೂಕುಸಿತ ಸಂತ್ರಸ್ತರಿಗೆ ಕೇಂದ್ರದ ನೆರವಿಲ್ಲ: ಕೇರಳ ಸಿಎಂ ಪಿಣರಾಯಿ ಆರೋಪ.ವಯನಾಡು ದುರಂತಕ್ಕೆ ಪರಿಹಾರ ವಿಳಂಬ: ಕೇಂದ್ರದ ವಿರುದ್ಧ ಕೇರಳ ವಿಧಾನಸಭೆ ನಿರ್ಣಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>