<p><strong>ಕೋಲ್ಕತ್ತ:</strong> ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಘಟನೆ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಈ ಘಟನೆ ಬಳಿಕ ದೇಶಾದ್ಯಂತ ವೈದ್ಯಕೀಯ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ.</p><p>ರಾಹುಲ್ ಗಾಂಧಿ ಅವರು ಈ ಘಟನೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ಈ ಪ್ರಕರಣ ನಿಭಾಯಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ಅವರು ಪ್ರಶ್ನೆ ಮಾಡಿದ್ದಾರೆ.</p><p>ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯಿಂದ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಈ ಘಟನೆ ಬಳಿಕ ವೈದ್ಯ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆಯ ವಾತಾವರಣವಿದೆ ಎಂದು ಅವರು ಹೇಳಿದರು.</p><p>ವೈದ್ಯಕೀಯ ಕಾಲೇಜಿನಂತಹ ಸ್ಥಳಗಳಲ್ಲಿ ವೈದ್ಯರು ಸುರಕ್ಷಿತವಾಗಿಲ್ಲದಿದ್ದರೆ ಹೇಗೆ? ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಅಧ್ಯಯನಕ್ಕಾಗಿ ಹೊರಗೆ ಹೇಗೆ ಕಳುಹಿಸಬಹುದು? ಎಂದು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದರು.</p><p>ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಇದು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು.</p><p>ಈ ಪ್ರಕರಣ ಕುರಿತ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಕಲ್ಕತ್ತ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಘಟನೆ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಘಾತ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಈ ಘಟನೆ ಬಳಿಕ ದೇಶಾದ್ಯಂತ ವೈದ್ಯಕೀಯ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ.</p><p>ರಾಹುಲ್ ಗಾಂಧಿ ಅವರು ಈ ಘಟನೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರ ಈ ಪ್ರಕರಣ ನಿಭಾಯಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಣ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ಅವರು ಪ್ರಶ್ನೆ ಮಾಡಿದ್ದಾರೆ.</p><p>ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯಿಂದ ಇಡೀ ದೇಶವೇ ಆಘಾತಕ್ಕೊಳಗಾಗಿದೆ. ಈ ಘಟನೆ ಬಳಿಕ ವೈದ್ಯ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆಯ ವಾತಾವರಣವಿದೆ ಎಂದು ಅವರು ಹೇಳಿದರು.</p><p>ವೈದ್ಯಕೀಯ ಕಾಲೇಜಿನಂತಹ ಸ್ಥಳಗಳಲ್ಲಿ ವೈದ್ಯರು ಸುರಕ್ಷಿತವಾಗಿಲ್ಲದಿದ್ದರೆ ಹೇಗೆ? ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಅಧ್ಯಯನಕ್ಕಾಗಿ ಹೊರಗೆ ಹೇಗೆ ಕಳುಹಿಸಬಹುದು? ಎಂದು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದರು.</p><p>ಆರೋಪಿಗಳನ್ನು ರಕ್ಷಿಸುವ ಪ್ರಯತ್ನಗಳ ಬಗ್ಗೆಯೂ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು. ಇದು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು.</p><p>ಈ ಪ್ರಕರಣ ಕುರಿತ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಕಲ್ಕತ್ತ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>