<p><strong>ಭೋಪಾಲ್:</strong> ಅಯೋಧ್ಯೆಯ ರಾಮಮಂದಿರದಲ್ಲಿ ವರ್ಷಾರಂಭದಲ್ಲಿ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ಸ್ವೀಕರಿಸದ್ದಕ್ಕೆ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮಂಗಳವಾರ ಹೇಳಿದ್ದಾರೆ. </p><p>ಭಾರತ್ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ಸಿಎಂ ತವರು ಕ್ಷೇತ್ರವಾದ ಉಜ್ಜಯಿನಿ ನಗರದ ಮಹಾಕಾಳೇಶ್ವರ ದೇಗುಲಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ. </p><p>'ರಾಹುಲ್ ಅವರು ದೇವರ ದರ್ಶನ ಪಡೆಯಲಿ ಎಂದು ನಾನು ಹಾರೈಸುತ್ತೇನೆ. ಮಧ್ಯಪ್ರದೇಶದ ನಾಡಿನಲ್ಲಿ ದೇವರು ಅವರಿಗೆ ಬುದ್ದಿ ಕರುಣಿಸಲಿ. ಶ್ರೀರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮವನ್ನು ಅವರ ಪಕ್ಷ ತಿರಸ್ಕರಿಸಿರುವುದಕ್ಕೆ ಪಶ್ಚಾತ್ತಾಪಪಡಬೇಕು. ಅದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು' ಎಂದು ಮೋಹನ್ ಯಾದವ್ ಹೇಳಿದರು. </p><p>ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲಾಗಿದೆ ಎಂದು ಅವರು ಉಲ್ಲೇಖಿಸಿದರು. </p><p>ಅಧಿಕಾರದ ಅವಧಿಯಲ್ಲಿ ಅನ್ಯಾಯ ಎಸಗಿದ ಪಕ್ಷವೇ ಈಗ ನ್ಯಾಯಕ್ಕಾಗಿ ಯಾತ್ರೆ ನಡೆಸುತ್ತಿದೆ. ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಯು ಯಶಸ್ಸು ಕಾಣುವುದಿಲ್ಲ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಅಯೋಧ್ಯೆಯ ರಾಮಮಂದಿರದಲ್ಲಿ ವರ್ಷಾರಂಭದಲ್ಲಿ ನಡೆದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ಸ್ವೀಕರಿಸದ್ದಕ್ಕೆ ಪಕ್ಷದ ನಾಯಕ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮಂಗಳವಾರ ಹೇಳಿದ್ದಾರೆ. </p><p>ಭಾರತ್ ಜೋಡೊ ನ್ಯಾಯ ಯಾತ್ರೆಯ ಭಾಗವಾಗಿ ಸಿಎಂ ತವರು ಕ್ಷೇತ್ರವಾದ ಉಜ್ಜಯಿನಿ ನಗರದ ಮಹಾಕಾಳೇಶ್ವರ ದೇಗುಲಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ಪ್ರಾರ್ಥನೆ ಸಲ್ಲಿಸಲಿದ್ದಾರೆ. </p><p>'ರಾಹುಲ್ ಅವರು ದೇವರ ದರ್ಶನ ಪಡೆಯಲಿ ಎಂದು ನಾನು ಹಾರೈಸುತ್ತೇನೆ. ಮಧ್ಯಪ್ರದೇಶದ ನಾಡಿನಲ್ಲಿ ದೇವರು ಅವರಿಗೆ ಬುದ್ದಿ ಕರುಣಿಸಲಿ. ಶ್ರೀರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮವನ್ನು ಅವರ ಪಕ್ಷ ತಿರಸ್ಕರಿಸಿರುವುದಕ್ಕೆ ಪಶ್ಚಾತ್ತಾಪಪಡಬೇಕು. ಅದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು' ಎಂದು ಮೋಹನ್ ಯಾದವ್ ಹೇಳಿದರು. </p><p>ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಲಾಗಿದೆ ಎಂದು ಅವರು ಉಲ್ಲೇಖಿಸಿದರು. </p><p>ಅಧಿಕಾರದ ಅವಧಿಯಲ್ಲಿ ಅನ್ಯಾಯ ಎಸಗಿದ ಪಕ್ಷವೇ ಈಗ ನ್ಯಾಯಕ್ಕಾಗಿ ಯಾತ್ರೆ ನಡೆಸುತ್ತಿದೆ. ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಯು ಯಶಸ್ಸು ಕಾಣುವುದಿಲ್ಲ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>