<p><strong>ಹಾಥರಸ್:</strong> ಹಾಥರಸ್ನಲ್ಲಿ 2020ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಭೇಟಿ ಮಾಡಿದರು.</p><p>ರಾಹುಲ್ ಗಾಂಧಿ ಅವರು 11.15ರ ಸುಮಾರಿಗೆ ಬೂಲ್ಗಢಿ ಗ್ರಾಮ ತಲುಪಿದರು. ರಾಹುಲ್ ಗಾಂಧಿ ಭೇಟಿ ಕಾರಣ ಚಂದ್ಪಾ ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿತ್ತು.</p><p>ಸಂತ್ರಸ್ತೆಯ ನಿವಾಸದಲ್ಲಿ ಆಕೆಯ ಕುಟುಂಬದೊಂದಿಗೆ ಸುಮಾರು 35 ನಿಮಿಷ ಮಾತುಕತೆ ನಡೆಸಿದರು. ನಂತರ ಅಲ್ಲೇ ನಿಂತಿದ್ದ ಸುದ್ದಿಗಾರರೊಂದಿಗೆ ಏನನ್ನೂ ಮಾತನಾಡದೆ ಹೊರಟುಹೋದರು.</p><p>‘ಈ ಕುಟುಂಬದೊಂದಿಗೂ ರಾಹುಲ್ ಗಾಂಧಿ ಅವರು ಸಂಪರ್ಕದಲ್ಲಿದ್ದು, ಅವರ ಸಂಕಟವನ್ನು ಆಲಿಸಲು ಇಂದು ಬಂದಿದ್ದರು’ ಎಂದು ಸ್ಥಳೀಯ ಕಾಂಗ್ರೆಸ್ ನಾಯಕ ಚಂದ್ರಗುಪ್ತ ವಿಕ್ರಮಾದಿತ್ಯ ಹೇಳಿದರು.</p><p>ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 3, 2020ರಂದು ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿ, ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡಲು ಹೋರಾಡುವುದಾಗಿ ಹೇಳಿದ್ದರು.</p><p><strong>ಘಟನೆ ಏನು?</strong></p><p>2020 ಸೆಪ್ಟೆಂಬರ್ 14ರಂದು 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಚಿಕಿತ್ಸೆಗಾಗಿ ಆಕೆಯನ್ನು ಮೊದಲು ಅಲಿಗಢ ಆಸ್ಪತ್ರೆಗೆ ದಾಖಲಿಸಿ, ನಂತರ ದೆಹಲಿಗೆ ಸ್ಥಳಾಂತರಿಸಲಾಗಿತ್ತು. ಸೆಪ್ಟೆಂಬರ್ 29ರಂದು ಆಕೆ ಮೃತಪಟ್ಟಿದ್ದಳು. ಅಕ್ಟೋಬರ್ 30ರ ಮುಂಜಾನೆ ಅಂತ್ಯಕ್ರಿಯೆ ನಡೆದಿತ್ತು.</p><p>‘ತರಾತುರಿಯಲ್ಲಿ ಅಂತ್ಯಕ್ರಿಯೆ ನೆರವೇರಿಸುವಂತೆ ಪೊಲೀಸರು ಒತ್ತಾಯಿಸಿದ್ದರು’ ಎಂದು ಸಂತ್ರಸ್ತೆ ಕುಟುಂಬ ಆರೋಪಿಸಿತ್ತು. ಇದನ್ನು ಅಲ್ಲಗೆಳೆದಿದ್ದ ಪೊಲೀಸರು, ಕುಟುಂಬ ಹೇಳಿದಂತೆಯೇ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದಿದ್ದರು.</p> .<p><strong>ಪ್ರಚಾರಕ್ಕಾಗಿ ಭೇಟಿ: ಬ್ರಿಜೇಶ್ ಪಾಠಕ್</strong></p><p>‘ರಾಹುಲ್ ಗಾಂಧಿ ಅವರು ಸಂಭಲ್ ಅಥವಾ ಹಾಥರಸ್ಗೆ ಪ್ರಚಾರಕ್ಕಾಗಿ ಭೇಟಿ ನೀಡುತ್ತಾರೆಯೇ ವಿನಃ ಬೇರಾವುದೇ ಕಾರಣಕ್ಕಾಗಿ ಅಲ್ಲ’ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಟೀಕಿಸಿದರು. ‘ರಾಹುಲ್ ‘ಗೊಂದಲದಲ್ಲಿದ್ದಾರೆ’ ಮತ್ತು ಈ ಪ್ರಕರಣದ ಸ್ಥಿತಿಯ ಬಗ್ಗೆ ಅವರಿಗೆ ಅರಿವಿಲ್ಲ’ ಎಂದು ಹೇಳಿದರು. ‘ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ. ಬಿಜೆಪಿ ಆಡಳಿತದಲ್ಲಿ ಯಾವೊಬ್ಬ ತಪ್ಪಿತಸ್ಥನೂ ಶಿಕ್ಷೆ ಇಲ್ಲದೆ ಓಡಾಡಲು ಸಾಧ್ಯವಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಥರಸ್:</strong> ಹಾಥರಸ್ನಲ್ಲಿ 2020ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ದಲಿತ ಯುವತಿಯ ಕುಟುಂಬವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಭೇಟಿ ಮಾಡಿದರು.</p><p>ರಾಹುಲ್ ಗಾಂಧಿ ಅವರು 11.15ರ ಸುಮಾರಿಗೆ ಬೂಲ್ಗಢಿ ಗ್ರಾಮ ತಲುಪಿದರು. ರಾಹುಲ್ ಗಾಂಧಿ ಭೇಟಿ ಕಾರಣ ಚಂದ್ಪಾ ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿತ್ತು.</p><p>ಸಂತ್ರಸ್ತೆಯ ನಿವಾಸದಲ್ಲಿ ಆಕೆಯ ಕುಟುಂಬದೊಂದಿಗೆ ಸುಮಾರು 35 ನಿಮಿಷ ಮಾತುಕತೆ ನಡೆಸಿದರು. ನಂತರ ಅಲ್ಲೇ ನಿಂತಿದ್ದ ಸುದ್ದಿಗಾರರೊಂದಿಗೆ ಏನನ್ನೂ ಮಾತನಾಡದೆ ಹೊರಟುಹೋದರು.</p><p>‘ಈ ಕುಟುಂಬದೊಂದಿಗೂ ರಾಹುಲ್ ಗಾಂಧಿ ಅವರು ಸಂಪರ್ಕದಲ್ಲಿದ್ದು, ಅವರ ಸಂಕಟವನ್ನು ಆಲಿಸಲು ಇಂದು ಬಂದಿದ್ದರು’ ಎಂದು ಸ್ಥಳೀಯ ಕಾಂಗ್ರೆಸ್ ನಾಯಕ ಚಂದ್ರಗುಪ್ತ ವಿಕ್ರಮಾದಿತ್ಯ ಹೇಳಿದರು.</p><p>ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 3, 2020ರಂದು ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಿ, ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡಲು ಹೋರಾಡುವುದಾಗಿ ಹೇಳಿದ್ದರು.</p><p><strong>ಘಟನೆ ಏನು?</strong></p><p>2020 ಸೆಪ್ಟೆಂಬರ್ 14ರಂದು 19 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಚಿಕಿತ್ಸೆಗಾಗಿ ಆಕೆಯನ್ನು ಮೊದಲು ಅಲಿಗಢ ಆಸ್ಪತ್ರೆಗೆ ದಾಖಲಿಸಿ, ನಂತರ ದೆಹಲಿಗೆ ಸ್ಥಳಾಂತರಿಸಲಾಗಿತ್ತು. ಸೆಪ್ಟೆಂಬರ್ 29ರಂದು ಆಕೆ ಮೃತಪಟ್ಟಿದ್ದಳು. ಅಕ್ಟೋಬರ್ 30ರ ಮುಂಜಾನೆ ಅಂತ್ಯಕ್ರಿಯೆ ನಡೆದಿತ್ತು.</p><p>‘ತರಾತುರಿಯಲ್ಲಿ ಅಂತ್ಯಕ್ರಿಯೆ ನೆರವೇರಿಸುವಂತೆ ಪೊಲೀಸರು ಒತ್ತಾಯಿಸಿದ್ದರು’ ಎಂದು ಸಂತ್ರಸ್ತೆ ಕುಟುಂಬ ಆರೋಪಿಸಿತ್ತು. ಇದನ್ನು ಅಲ್ಲಗೆಳೆದಿದ್ದ ಪೊಲೀಸರು, ಕುಟುಂಬ ಹೇಳಿದಂತೆಯೇ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದಿದ್ದರು.</p> .<p><strong>ಪ್ರಚಾರಕ್ಕಾಗಿ ಭೇಟಿ: ಬ್ರಿಜೇಶ್ ಪಾಠಕ್</strong></p><p>‘ರಾಹುಲ್ ಗಾಂಧಿ ಅವರು ಸಂಭಲ್ ಅಥವಾ ಹಾಥರಸ್ಗೆ ಪ್ರಚಾರಕ್ಕಾಗಿ ಭೇಟಿ ನೀಡುತ್ತಾರೆಯೇ ವಿನಃ ಬೇರಾವುದೇ ಕಾರಣಕ್ಕಾಗಿ ಅಲ್ಲ’ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಟೀಕಿಸಿದರು. ‘ರಾಹುಲ್ ‘ಗೊಂದಲದಲ್ಲಿದ್ದಾರೆ’ ಮತ್ತು ಈ ಪ್ರಕರಣದ ಸ್ಥಿತಿಯ ಬಗ್ಗೆ ಅವರಿಗೆ ಅರಿವಿಲ್ಲ’ ಎಂದು ಹೇಳಿದರು. ‘ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ. ಬಿಜೆಪಿ ಆಡಳಿತದಲ್ಲಿ ಯಾವೊಬ್ಬ ತಪ್ಪಿತಸ್ಥನೂ ಶಿಕ್ಷೆ ಇಲ್ಲದೆ ಓಡಾಡಲು ಸಾಧ್ಯವಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>