<p><strong>ನವದೆಹಲಿ</strong>: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇರುವ ವಸತಿ ನಿಲಯಗಳು ‘ಶೋಚನೀಯ’ ಸ್ಥಿತಿಯಲ್ಲಿವೆ. ಜೊತೆಗೆ, ಈ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ತಡವಾಗಿ ನೀಡಲಾಗುತ್ತಿದೆ’ ಎಂಬುದಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಈ ಎರಡು ಬಹಳ ಮುಖ್ಯವಾದ ಸಮಸ್ಯೆಗಳನ್ನು ಬಗೆಹರಿಸಿ. ದೇಶದಲ್ಲಿರುವ ಶೇಕಡ 90ರಷ್ಟು ತಳಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅವಕಾಶಗಳಿಗೆ ಈ ಸಮಸ್ಯೆಗಳು ಹಿನ್ನಡೆ ಮಾಡುತ್ತಿವೆ’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<p>‘ಮೊದಲನೆಯದಾಗಿ, ಇತ್ತೀಚೆಗೆ ನಾನು ಬಿಹಾರದ ದರ್ಬಾಂಗ್ನಲ್ಲಿರುವ ಅಂಬೇಡ್ಕರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದೆ. ಒಂದೇ ಕೊಠಡಿಯಲ್ಲಿ 6–7 ವಿದ್ಯಾರ್ಥಿಗಳನ್ನು ತುಂಬಲಾಗುತ್ತಿದೆ. ಶೌಚಾಲಯಗಳಲ್ಲಿ ಶುಚಿತ್ವವಿಲ್ಲ. ಕುಡಿಯುವ ನೀರು ಶುದ್ಧವಾಗಿಲ್ಲ. ಊಟದ ವ್ಯವಸ್ಥೆಯಂತೂ ಅವ್ಯವಸ್ಥೆಯಿಂದ ಕೂಡಿದೆ. ಗ್ರಂಥಾಲಯ ಮತ್ತು ಇಂಟರ್ನೆಟ್ ಸೌಲಭ್ಯವಿಲ್ಲ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಎರಡನೆಯದಾಗಿ, ತಳಸಮುದಾಯಕ್ಕೆ ಸೇರಿದ ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ವಿದ್ಯಾರ್ಥಿವೇತನ ದೊರಕುತ್ತಿಲ್ಲ. ಬಿಹಾರದಲ್ಲಂತೂ ವಿದ್ಯಾರ್ಥಿವೇತನ ಪೋರ್ಟಲ್ ಮೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿಲ್ಲ. 2021–22ರಲ್ಲಿ ಯಾರಿಗೂ ವಿದ್ಯಾರ್ಥಿವೇತನ ದೊರೆತಿಲ್ಲ’ ಎಂದಿದ್ದಾರೆ.</p>.<div><blockquote>ನಾನು ಬಿಹಾರದ ಉದಾಹರಣೆಯನ್ನು ನೀಡಿದ್ದೇನೆ. ಆದರೆ ಇದೇ ಸಮಸ್ಯೆಗಳು ದೇಶದಾದ್ಯಂತ ಇವೆ. ಆದ್ದರಿಂದ ಈ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರವು ತಕ್ಷಣವೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.</blockquote><span class="attribution">– ರಾಹುಲ್ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇರುವ ವಸತಿ ನಿಲಯಗಳು ‘ಶೋಚನೀಯ’ ಸ್ಥಿತಿಯಲ್ಲಿವೆ. ಜೊತೆಗೆ, ಈ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳನ್ನು ತಡವಾಗಿ ನೀಡಲಾಗುತ್ತಿದೆ’ ಎಂಬುದಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>‘ಈ ಎರಡು ಬಹಳ ಮುಖ್ಯವಾದ ಸಮಸ್ಯೆಗಳನ್ನು ಬಗೆಹರಿಸಿ. ದೇಶದಲ್ಲಿರುವ ಶೇಕಡ 90ರಷ್ಟು ತಳಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅವಕಾಶಗಳಿಗೆ ಈ ಸಮಸ್ಯೆಗಳು ಹಿನ್ನಡೆ ಮಾಡುತ್ತಿವೆ’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<p>‘ಮೊದಲನೆಯದಾಗಿ, ಇತ್ತೀಚೆಗೆ ನಾನು ಬಿಹಾರದ ದರ್ಬಾಂಗ್ನಲ್ಲಿರುವ ಅಂಬೇಡ್ಕರ್ ವಸತಿ ನಿಲಯಕ್ಕೆ ಭೇಟಿ ನೀಡಿದ್ದೆ. ಒಂದೇ ಕೊಠಡಿಯಲ್ಲಿ 6–7 ವಿದ್ಯಾರ್ಥಿಗಳನ್ನು ತುಂಬಲಾಗುತ್ತಿದೆ. ಶೌಚಾಲಯಗಳಲ್ಲಿ ಶುಚಿತ್ವವಿಲ್ಲ. ಕುಡಿಯುವ ನೀರು ಶುದ್ಧವಾಗಿಲ್ಲ. ಊಟದ ವ್ಯವಸ್ಥೆಯಂತೂ ಅವ್ಯವಸ್ಥೆಯಿಂದ ಕೂಡಿದೆ. ಗ್ರಂಥಾಲಯ ಮತ್ತು ಇಂಟರ್ನೆಟ್ ಸೌಲಭ್ಯವಿಲ್ಲ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಎರಡನೆಯದಾಗಿ, ತಳಸಮುದಾಯಕ್ಕೆ ಸೇರಿದ ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ವಿದ್ಯಾರ್ಥಿವೇತನ ದೊರಕುತ್ತಿಲ್ಲ. ಬಿಹಾರದಲ್ಲಂತೂ ವಿದ್ಯಾರ್ಥಿವೇತನ ಪೋರ್ಟಲ್ ಮೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿಲ್ಲ. 2021–22ರಲ್ಲಿ ಯಾರಿಗೂ ವಿದ್ಯಾರ್ಥಿವೇತನ ದೊರೆತಿಲ್ಲ’ ಎಂದಿದ್ದಾರೆ.</p>.<div><blockquote>ನಾನು ಬಿಹಾರದ ಉದಾಹರಣೆಯನ್ನು ನೀಡಿದ್ದೇನೆ. ಆದರೆ ಇದೇ ಸಮಸ್ಯೆಗಳು ದೇಶದಾದ್ಯಂತ ಇವೆ. ಆದ್ದರಿಂದ ಈ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರವು ತಕ್ಷಣವೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು.</blockquote><span class="attribution">– ರಾಹುಲ್ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>