<p><strong>ತಿರುವನಂತಪುರ</strong>: ಭಾರತದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತಿಸುತ್ತಿದ್ದಾರೆ ಎಂದು ಕೇರಳ ಬಿಜೆಪಿ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.</p><p>ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಚಂದ್ರಶೇಖರ್, ಸಂವಿಧಾನವನ್ನು ಕೇವಲ ಸುಳ್ಳುಗಳಿಗಾಗಿ ದುರುಪಯೋಗಪಡಿಸಿಕೊಳ್ಳುವ ಬದಲು, ಸಂವಿಧಾನವನ್ನು ಅಧ್ಯಯನ ಮಾಡಲು ಸಲಹೆ ನೀಡಿದ್ದಾರೆ.</p><p>ಈ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಓಲೈಕೆ ರಾಜಕಾರಣಕ್ಕಾಗಿ ಅನೇಕ ತಿದ್ದುಪಡಿ ಮಸೂದೆಗಳನ್ನು ಜಾರಿಗೆ ತಂದಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಜನರ ಮತ್ತು ದೇಶದ ಹಿತದೃಷ್ಟಿಯಿಂದ ತಿದ್ದುಪಡಿಗಳನ್ನು ಮಾಡಿದೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.</p>.ಮೋದಿ ಭೇಟಿ ಬೆನ್ನಲ್ಲೇ ಭಾರತದ 11 ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ.ನಾಳೆ ಟ್ರಂಪ್–ನೆತನ್ಯಾಹು ಭೇಟಿ: ಗಾಜಾ ಬಿಕ್ಕಟ್ಟು, ಸುಂಕದ ಕುರಿತು ಚರ್ಚೆ. <p>ವಕ್ಫ್ ತಿದ್ದುಪಡಿ ಮಸೂದೆಯಿಂದಾಗಿ ದೇಶದ ಬಡ ಮುಸ್ಲಿಂ ಸಮುದಾಯದವರಿಗೆ ಅನುಕೂಲವಾಗಲಿದೆ. ಈ ತಿದ್ದುಪಡಿಯಿಂದಾಗಿ ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕತೆಯ ಆಡಳಿತಕ್ಕೆ ಸಹಕಾರಿಯಾಗಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ.</p><p>ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಲಾಗಿದೆ. ಇದು ದೇಶದ ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷಗಳು 'ಮುಸ್ಲಿಂ ವಿರೋಧಿ', 'ಅಸಂವಿಧಾನಿಕ ನಡೆ' ಎಂದು ಭಾರಿ ವಿರೋಧ ವ್ಯಕ್ತಪಡಿಸಿವೆ.</p><p>ಶನಿವಾರ ತಡರಾತ್ರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ವಕ್ಫ್ (ತಿದ್ದುಪಡಿ) ಮಸೂದೆ’ಗೆ ಅಂಕಿತ ಹಾಕಿದ್ದಾರೆ.</p>.ಜಾಮ್ನಗರದಿಂದ ದ್ವಾರಕಾ: 170 ಕಿ.ಮೀ ಪಾದಯಾತ್ರೆ ಪೂರ್ಣಗೊಳಿಸಿದ ಅನಂತ್ ಅಂಬಾನಿ.ರಾಮನವಮಿ: ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ, ಡಿಕೆಶಿ, ಹಲವು ಗಣ್ಯರು.RCB vs MI ಪಂದ್ಯ ನಾಳೆ: ರೋಹಿತ್ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ ಕೊಹ್ಲಿ.ನಾಳೆ ಟ್ರಂಪ್–ನೆತನ್ಯಾಹು ಭೇಟಿ: ಗಾಜಾ ಬಿಕ್ಕಟ್ಟು, ಸುಂಕದ ಕುರಿತು ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಭಾರತದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತಿಸುತ್ತಿದ್ದಾರೆ ಎಂದು ಕೇರಳ ಬಿಜೆಪಿ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ.</p><p>ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಚಂದ್ರಶೇಖರ್, ಸಂವಿಧಾನವನ್ನು ಕೇವಲ ಸುಳ್ಳುಗಳಿಗಾಗಿ ದುರುಪಯೋಗಪಡಿಸಿಕೊಳ್ಳುವ ಬದಲು, ಸಂವಿಧಾನವನ್ನು ಅಧ್ಯಯನ ಮಾಡಲು ಸಲಹೆ ನೀಡಿದ್ದಾರೆ.</p><p>ಈ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಓಲೈಕೆ ರಾಜಕಾರಣಕ್ಕಾಗಿ ಅನೇಕ ತಿದ್ದುಪಡಿ ಮಸೂದೆಗಳನ್ನು ಜಾರಿಗೆ ತಂದಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಜನರ ಮತ್ತು ದೇಶದ ಹಿತದೃಷ್ಟಿಯಿಂದ ತಿದ್ದುಪಡಿಗಳನ್ನು ಮಾಡಿದೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.</p>.ಮೋದಿ ಭೇಟಿ ಬೆನ್ನಲ್ಲೇ ಭಾರತದ 11 ಮೀನುಗಾರರನ್ನು ಬಿಡುಗಡೆ ಮಾಡಿದ ಶ್ರೀಲಂಕಾ.ನಾಳೆ ಟ್ರಂಪ್–ನೆತನ್ಯಾಹು ಭೇಟಿ: ಗಾಜಾ ಬಿಕ್ಕಟ್ಟು, ಸುಂಕದ ಕುರಿತು ಚರ್ಚೆ. <p>ವಕ್ಫ್ ತಿದ್ದುಪಡಿ ಮಸೂದೆಯಿಂದಾಗಿ ದೇಶದ ಬಡ ಮುಸ್ಲಿಂ ಸಮುದಾಯದವರಿಗೆ ಅನುಕೂಲವಾಗಲಿದೆ. ಈ ತಿದ್ದುಪಡಿಯಿಂದಾಗಿ ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕತೆಯ ಆಡಳಿತಕ್ಕೆ ಸಹಕಾರಿಯಾಗಲಿದೆ ಎಂದು ಚಂದ್ರಶೇಖರ್ ಹೇಳಿದ್ದಾರೆ.</p><p>ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಅಂಗೀಕರಿಸಲಾಗಿದೆ. ಇದು ದೇಶದ ಐತಿಹಾಸಿಕ ಕ್ಷಣ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷಗಳು 'ಮುಸ್ಲಿಂ ವಿರೋಧಿ', 'ಅಸಂವಿಧಾನಿಕ ನಡೆ' ಎಂದು ಭಾರಿ ವಿರೋಧ ವ್ಯಕ್ತಪಡಿಸಿವೆ.</p><p>ಶನಿವಾರ ತಡರಾತ್ರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ವಕ್ಫ್ (ತಿದ್ದುಪಡಿ) ಮಸೂದೆ’ಗೆ ಅಂಕಿತ ಹಾಕಿದ್ದಾರೆ.</p>.ಜಾಮ್ನಗರದಿಂದ ದ್ವಾರಕಾ: 170 ಕಿ.ಮೀ ಪಾದಯಾತ್ರೆ ಪೂರ್ಣಗೊಳಿಸಿದ ಅನಂತ್ ಅಂಬಾನಿ.ರಾಮನವಮಿ: ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ, ಡಿಕೆಶಿ, ಹಲವು ಗಣ್ಯರು.RCB vs MI ಪಂದ್ಯ ನಾಳೆ: ರೋಹಿತ್ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ ಕೊಹ್ಲಿ.ನಾಳೆ ಟ್ರಂಪ್–ನೆತನ್ಯಾಹು ಭೇಟಿ: ಗಾಜಾ ಬಿಕ್ಕಟ್ಟು, ಸುಂಕದ ಕುರಿತು ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>