<p><strong>ನವದೆಹಲಿ</strong>: ಉದ್ಯಮಗಳು ಮತ್ತು ಕೈಗಾರಿಕೆಗಳ ಸರಕುಗಳನ್ನು ಕಾಲಮಿತಿಯಲ್ಲಿ ನಿಗದಿತ ಸ್ಥಳಕ್ಕೆ ಸಾಗಣೆ ಮಾಡಲು ನೆರವಾಗುವ ನಿಟ್ಟಿನಲ್ಲಿ ಮೂರು ನೂತನ ಉಪಕ್ರಮಗಳಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ಚಾಲನೆ ನೀಡಿದರು.</p>.<p>ಉತ್ತರ ಪ್ರದೇಶದ ಸಮಗ್ರ ಲಾಜಿಸ್ಟಿಕ್ ಕೇಂದ್ರ, ದೆಹಲಿ–ಕೋಲ್ಕತ್ತ ಕಾಲಮಿತಿ ಸರಕುಸಾಗಣೆ ರೈಲು, ಮುಂಬೈ–ಕೋಲ್ಕತ್ತ ಮನೆಮನೆಗೆ ಪಾರ್ಸೆಲ್ ಸೇವೆಗೆ ಚಾಲನೆ ನೀಡಿದರು.</p>.<p>ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಸಿಒಎನ್ಸಿಒಆರ್) ಸಹಭಾಗಿತ್ವದಲ್ಲಿ ಈ ಉಪಕ್ರಮಗಳನ್ನು ಜಾರಿ ಮಾಡಲಾಗಿದೆ.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಸ್ತೆ ಮೂಲಕ ಸರಕು ಸಾಗಣೆ ಮಾಡುವ ವಿಧಾನಗಳಿಗೆ ಹೋಲಿಸಿದರೆ ಮನೆಮನೆಗೆ ಪಾರ್ಸೆಲ್ ಸೇವೆಯಿಂದ ಶೇ 7.5ರಷ್ಟು ಹಣ ಉಳಿತಾಯವಾಗುತ್ತದೆ ಮತ್ತು ಸರಕುಗಳನ್ನು ಶೇ 30ರಷ್ಟು ವೇಗವಾಗಿ ನಿರ್ದಿಷ್ಟ ಸ್ಥಳಕ್ಕೆ ತಲುಪಿಸಬಹುದು’ ಎಂದು ಅಶ್ವಿನಿ ವೈಷ್ಣವ್ ಅವರು ಹೇಳಿದರು.</p>.<p>ದೆಹಲಿ–ಕೋಲ್ಕತ್ತ ಸರಕುಸಾಗಣೆ ರೈಲುಗಳಂತೆ ಭವಿಷ್ಯದಲ್ಲಿ ಬೇರೆ ಮಾರ್ಗಗಳಲ್ಲಿಯೂ ಇದೇ ರೀತಿಯ ರೈಲು ಸೇವೆಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉದ್ಯಮಗಳು ಮತ್ತು ಕೈಗಾರಿಕೆಗಳ ಸರಕುಗಳನ್ನು ಕಾಲಮಿತಿಯಲ್ಲಿ ನಿಗದಿತ ಸ್ಥಳಕ್ಕೆ ಸಾಗಣೆ ಮಾಡಲು ನೆರವಾಗುವ ನಿಟ್ಟಿನಲ್ಲಿ ಮೂರು ನೂತನ ಉಪಕ್ರಮಗಳಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳವಾರ ಚಾಲನೆ ನೀಡಿದರು.</p>.<p>ಉತ್ತರ ಪ್ರದೇಶದ ಸಮಗ್ರ ಲಾಜಿಸ್ಟಿಕ್ ಕೇಂದ್ರ, ದೆಹಲಿ–ಕೋಲ್ಕತ್ತ ಕಾಲಮಿತಿ ಸರಕುಸಾಗಣೆ ರೈಲು, ಮುಂಬೈ–ಕೋಲ್ಕತ್ತ ಮನೆಮನೆಗೆ ಪಾರ್ಸೆಲ್ ಸೇವೆಗೆ ಚಾಲನೆ ನೀಡಿದರು.</p>.<p>ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಸಿಒಎನ್ಸಿಒಆರ್) ಸಹಭಾಗಿತ್ವದಲ್ಲಿ ಈ ಉಪಕ್ರಮಗಳನ್ನು ಜಾರಿ ಮಾಡಲಾಗಿದೆ.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಸ್ತೆ ಮೂಲಕ ಸರಕು ಸಾಗಣೆ ಮಾಡುವ ವಿಧಾನಗಳಿಗೆ ಹೋಲಿಸಿದರೆ ಮನೆಮನೆಗೆ ಪಾರ್ಸೆಲ್ ಸೇವೆಯಿಂದ ಶೇ 7.5ರಷ್ಟು ಹಣ ಉಳಿತಾಯವಾಗುತ್ತದೆ ಮತ್ತು ಸರಕುಗಳನ್ನು ಶೇ 30ರಷ್ಟು ವೇಗವಾಗಿ ನಿರ್ದಿಷ್ಟ ಸ್ಥಳಕ್ಕೆ ತಲುಪಿಸಬಹುದು’ ಎಂದು ಅಶ್ವಿನಿ ವೈಷ್ಣವ್ ಅವರು ಹೇಳಿದರು.</p>.<p>ದೆಹಲಿ–ಕೋಲ್ಕತ್ತ ಸರಕುಸಾಗಣೆ ರೈಲುಗಳಂತೆ ಭವಿಷ್ಯದಲ್ಲಿ ಬೇರೆ ಮಾರ್ಗಗಳಲ್ಲಿಯೂ ಇದೇ ರೀತಿಯ ರೈಲು ಸೇವೆಯನ್ನು ಒದಗಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>