<p><strong>ನವದೆಹಲಿ</strong>: ರೈಲು ಪ್ರಯಾಣಿಕರಿಗೆ ಗುಣಮಟ್ಟದ ಆಹಾರವನ್ನು ಪೂರೈಸಲು ವಿಫಲವಾಗುವ ವ್ಯಾಪಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಬೇಕು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಪ್ರಯಾಣಿಕರ ಕುಂದುಕೊರತೆಗಳು ಹಾಗೂ ಸುರಕ್ಷತಾ ಕ್ರಮಗಳನ್ನು ಕುರಿತಂತೆ ಸಚಿವರು ಸೋಮವಾರ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.</p>.<p>ಆಹಾರದ ಗುಣಮಟ್ಟ ಉತ್ತಮಪಡಿಸಲು ಐಆರ್ಸಿಟಿಸಿ ಮತ್ತು ಅದರ ಏಜೆನ್ಸಿಗಳು ಸುಮಾರು ಸಾವಿರ ಸ್ಥಳಗಳಲ್ಲಿ ಅಡುಗೆ ತಯಾರಿಕೆ ತಾಣಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಈ ಕಾರ್ಯ ಪ್ರಗತಿಯಲ್ಲಿದ್ದು, 6 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ.</p>.<p>ರೈಲುಗಳಲ್ಲಿ ಅಡುಗೆ ಸಿದ್ಧಪಡಿಸುವ ಮತ್ತು ಆಹಾರ ಸಾಮಗ್ರಿ ದಾಸ್ತಾನು ಮಾಡುವ ಬೋಗಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಬೇಕು. ನಿಯಮಿತವಾಗಿ ಈ ಕಾರ್ಯ ನಡೆಸಲು ವೇಳಾಪಟ್ಟಿ ಸಿದ್ಧಪಡಿಸಬೇಕು ಎಂದು ಸೂಚಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.</p>.<p> ಸುರಕ್ಷತೆಗೆ ಒತ್ತು ನೀಡಲು, ವಿವಿಧ ಸುರಕ್ಷತಾ ಕ್ರಮಗಳ ಅಳವಡಿಕೆ, ನಿಯಮಿತ ತಪಾಸಣೆ ಕಾರ್ಯವನ್ನು ನಡೆಸಬೇಕು ಎಂದು ಸೂಚಿಸಲಾಯಿತು ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರೈಲು ಪ್ರಯಾಣಿಕರಿಗೆ ಗುಣಮಟ್ಟದ ಆಹಾರವನ್ನು ಪೂರೈಸಲು ವಿಫಲವಾಗುವ ವ್ಯಾಪಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಬೇಕು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಪ್ರಯಾಣಿಕರ ಕುಂದುಕೊರತೆಗಳು ಹಾಗೂ ಸುರಕ್ಷತಾ ಕ್ರಮಗಳನ್ನು ಕುರಿತಂತೆ ಸಚಿವರು ಸೋಮವಾರ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.</p>.<p>ಆಹಾರದ ಗುಣಮಟ್ಟ ಉತ್ತಮಪಡಿಸಲು ಐಆರ್ಸಿಟಿಸಿ ಮತ್ತು ಅದರ ಏಜೆನ್ಸಿಗಳು ಸುಮಾರು ಸಾವಿರ ಸ್ಥಳಗಳಲ್ಲಿ ಅಡುಗೆ ತಯಾರಿಕೆ ತಾಣಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಈ ಕಾರ್ಯ ಪ್ರಗತಿಯಲ್ಲಿದ್ದು, 6 ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ.</p>.<p>ರೈಲುಗಳಲ್ಲಿ ಅಡುಗೆ ಸಿದ್ಧಪಡಿಸುವ ಮತ್ತು ಆಹಾರ ಸಾಮಗ್ರಿ ದಾಸ್ತಾನು ಮಾಡುವ ಬೋಗಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಬೇಕು. ನಿಯಮಿತವಾಗಿ ಈ ಕಾರ್ಯ ನಡೆಸಲು ವೇಳಾಪಟ್ಟಿ ಸಿದ್ಧಪಡಿಸಬೇಕು ಎಂದು ಸೂಚಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.</p>.<p> ಸುರಕ್ಷತೆಗೆ ಒತ್ತು ನೀಡಲು, ವಿವಿಧ ಸುರಕ್ಷತಾ ಕ್ರಮಗಳ ಅಳವಡಿಕೆ, ನಿಯಮಿತ ತಪಾಸಣೆ ಕಾರ್ಯವನ್ನು ನಡೆಸಬೇಕು ಎಂದು ಸೂಚಿಸಲಾಯಿತು ಎಂದು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>