<p><strong>ಭೋಪಾಲ್:</strong> ಖ್ಯಾತ ಬರಹಗಾರ ಖುಷ್ವಂತ್ ಸಿಂಗ್ ಅವರ, 'ವುಮೆನ್, ಸೆಕ್ಸ್, ಲವ್ ಆಂಡ್ ಲಸ್ಟ್' ಕಾದಂಬರಿಯಮಾರಾಟವನ್ನು ನಿಲ್ಲಿಸುವಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಭೋಪಾಲ್ ನಿಲ್ದಾಣದ ಪುಸ್ತಕ ಮಾರಾಟಗಾರರಿಗೆ ಆದೇಶಿಸಿದ್ದಾರೆ. ಇಂತಹ “ಅಶ್ಲೀಲ” ಸಾಹಿತ್ಯವು ಭವಿಷ್ಯದ ಪೀಳಿಗೆಯನ್ನು ಹಾಳುಮಾಡುತ್ತದೆ ಎಂದು ಅವರು ಹೇಳಿದ್ದಾರೆ.</p>.<p>ಭೋಪಾಲ್ ರೈಲು ನಿಲ್ದಾಣದಪುಸ್ತಕ ಮಳಿಗೆಗಳಲ್ಲಿ ‘ಅಶ್ಲೀಲ ಪುಸ್ತಕ’ಗಳನ್ನು ಮಾರಾಟ ಮಾಡದಂತೆ ನೋಡಿಕೊಳ್ಳಬೇಕೆಂದು ಅವರು ಕಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<p>ರೈಲ್ವೆ ಪ್ಯಾಸೆಂಜರ್ ಸರ್ವೀಸಸ್ ಕಮಿಟಿ (ಪಿಎಸ್ಸಿ) ಅಧ್ಯಕ್ಷರಾಗಿರುವ ರಮೇಶ್ ಚಂದ್ರ ರತನ್ ಅವರು ಭೋಪಾಲ್ ರೈಲು ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಅಲ್ಲಿನ ಪುಸ್ತಕ ಅಂಗಡಿಯೊಂದರಲ್ಲಿ ಖುಷ್ವಂತ್ ಸಿಂಗ್ ಅವರ ಕಾದಂಬರಿಯನ್ನು ಗಮನಿಸಿದ್ದಾರೆ. ತಕ್ಷಣವೇ ಆ ಪುಸ್ತಕವನ್ನು ಕಪಾಟಿನಿಂದ ತೆಗೆಯುವಂತೆ ಮಾರಾಟಗಾರನಿಗೆ ತಾಕೀತು ಮಾಡಿದ್ದಾರೆ. ಭವಿಷ್ಯದಲ್ಲಿ ಇಂಹಹಪುಸ್ತಕಗಳನ್ನು ಮಾರಾಟಕ್ಕೆ ಇಟ್ಟರೆ ದಂಡ ವಿಧಿಸಲಾಗುವುದು ಎಂದು ಅಂಗಡಿಯವನಿಗೆ ಅಧಿಕಾರಿ ರತನ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಖ್ಯಾತ ಬರಹಗಾರ ಖುಷ್ವಂತ್ ಸಿಂಗ್ ಅವರ, 'ವುಮೆನ್, ಸೆಕ್ಸ್, ಲವ್ ಆಂಡ್ ಲಸ್ಟ್' ಕಾದಂಬರಿಯಮಾರಾಟವನ್ನು ನಿಲ್ಲಿಸುವಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಭೋಪಾಲ್ ನಿಲ್ದಾಣದ ಪುಸ್ತಕ ಮಾರಾಟಗಾರರಿಗೆ ಆದೇಶಿಸಿದ್ದಾರೆ. ಇಂತಹ “ಅಶ್ಲೀಲ” ಸಾಹಿತ್ಯವು ಭವಿಷ್ಯದ ಪೀಳಿಗೆಯನ್ನು ಹಾಳುಮಾಡುತ್ತದೆ ಎಂದು ಅವರು ಹೇಳಿದ್ದಾರೆ.</p>.<p>ಭೋಪಾಲ್ ರೈಲು ನಿಲ್ದಾಣದಪುಸ್ತಕ ಮಳಿಗೆಗಳಲ್ಲಿ ‘ಅಶ್ಲೀಲ ಪುಸ್ತಕ’ಗಳನ್ನು ಮಾರಾಟ ಮಾಡದಂತೆ ನೋಡಿಕೊಳ್ಳಬೇಕೆಂದು ಅವರು ಕಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.<p>ರೈಲ್ವೆ ಪ್ಯಾಸೆಂಜರ್ ಸರ್ವೀಸಸ್ ಕಮಿಟಿ (ಪಿಎಸ್ಸಿ) ಅಧ್ಯಕ್ಷರಾಗಿರುವ ರಮೇಶ್ ಚಂದ್ರ ರತನ್ ಅವರು ಭೋಪಾಲ್ ರೈಲು ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಅಲ್ಲಿನ ಪುಸ್ತಕ ಅಂಗಡಿಯೊಂದರಲ್ಲಿ ಖುಷ್ವಂತ್ ಸಿಂಗ್ ಅವರ ಕಾದಂಬರಿಯನ್ನು ಗಮನಿಸಿದ್ದಾರೆ. ತಕ್ಷಣವೇ ಆ ಪುಸ್ತಕವನ್ನು ಕಪಾಟಿನಿಂದ ತೆಗೆಯುವಂತೆ ಮಾರಾಟಗಾರನಿಗೆ ತಾಕೀತು ಮಾಡಿದ್ದಾರೆ. ಭವಿಷ್ಯದಲ್ಲಿ ಇಂಹಹಪುಸ್ತಕಗಳನ್ನು ಮಾರಾಟಕ್ಕೆ ಇಟ್ಟರೆ ದಂಡ ವಿಧಿಸಲಾಗುವುದು ಎಂದು ಅಂಗಡಿಯವನಿಗೆ ಅಧಿಕಾರಿ ರತನ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>