<p><strong>ನವದೆಹಲಿ:</strong> ‘ದೆಹಲಿಯ ರೈಲು ನಿಲ್ದಾಣದಲ್ಲಿ ಫೆ. 15ರಂದು ಸಂಭವಿಸಿದ ಕಾಲ್ತುಳಿತ ಘಟನೆಯ ಸಂದರ್ಭದಲ್ಲಿ ಹಮಾಲ ವೃತ್ತಿ ನಡೆಸುವವರು ಸ್ವಯಂ ಪ್ರೇರಣೆಯಿಂದ ಕಾರ್ಯಪ್ರವೃತ್ತರಾಗಿ ಹಲವರ ಜೀವ ಉಳಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p><p>‘ಸಾಮಾನ್ಯವಾಗಿ ಮಾನವೀಯತೆಯ ಬೆಳಕು ಕತ್ತಲೆಯ ಸಮಯದಲ್ಲೇ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ. ಇದಕ್ಕೆ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಹಮಾಲ ವೃತ್ತಿಯ ಮೂಲಕ ಬದುಕು ಕಟ್ಟಿಕೊಂಡಿರುವ ಸೋದರರೇ ಸ್ಪಷ್ಟ ಉದಾಹರಣೆ. ಇಡೀ ದೇಶದ ಪರವಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದು ಹೇಳಿದ್ದಾರೆ.</p><p>‘ಈ ದುರ್ಘಟನೆಯಿಂದ ಕೇಂದ್ರ ಸರ್ಕಾರ ಪಾಠ ಕಲಿಯಬೇಕಿದೆ. ಭವಿಷ್ಯದಲ್ಲಿ ಇಂಥ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವುದು ಮತ್ತು ಯೋಜನಾಬದ್ಧ ಮುನ್ನೆಚ್ಚರಿಕಾ ಕ್ರಮ ಅಳವಡಿಸುವುದು ಸೂಕ್ತ. ಆ ಮೂಲಕ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ’ ಎಂದು ರಾಹುಲ್ ಆಗ್ರಹಿಸಿದ್ದಾರೆ.</p><p>‘ಇಂದು ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಇಂಥ ದುರ್ಘಟನೆಗಳನ್ನು ತಡೆಯಲು, ಹೆಚ್ಚು ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನವನ್ನು ರೈಲ್ವೆ ಇಲಾಖೆ ನಡೆಸಬೇಕು. ಮೂಲಸೌಕರ್ಯವನ್ನು ಇನ್ನಷ್ಟು ಉತ್ತಮಪಡಿಸಬೇಕು. ತುರ್ತು ಸಂದರ್ಭದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಬ ಭರವಸೆ ಇದೆ’ ಎಂದಿದ್ದಾರೆ.</p><p>ಉತ್ತರ ಪ್ರದೇಶದ ಪ್ರಯಾಗ್ರಾಜ್ ಬಳಿ ಆಯೋಜನೆಗೊಂಡಿದ್ದ ಮಹಾಕುಂಭ ಮೇಳಕ್ಕೆ ತೆರಳಲು ದೆಹಲಿ ರೈಲು ನಿಲ್ದಾಣದಲ್ಲಿ ಫೆ. 15ರಂದು ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 18 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ದೆಹಲಿಯ ರೈಲು ನಿಲ್ದಾಣದಲ್ಲಿ ಫೆ. 15ರಂದು ಸಂಭವಿಸಿದ ಕಾಲ್ತುಳಿತ ಘಟನೆಯ ಸಂದರ್ಭದಲ್ಲಿ ಹಮಾಲ ವೃತ್ತಿ ನಡೆಸುವವರು ಸ್ವಯಂ ಪ್ರೇರಣೆಯಿಂದ ಕಾರ್ಯಪ್ರವೃತ್ತರಾಗಿ ಹಲವರ ಜೀವ ಉಳಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.</p><p>‘ಸಾಮಾನ್ಯವಾಗಿ ಮಾನವೀಯತೆಯ ಬೆಳಕು ಕತ್ತಲೆಯ ಸಮಯದಲ್ಲೇ ಹೆಚ್ಚು ಪ್ರಕಾಶಮಾನವಾಗಿ ಕಾಣಿಸುತ್ತದೆ. ಇದಕ್ಕೆ ದೆಹಲಿ ರೈಲ್ವೆ ನಿಲ್ದಾಣದಲ್ಲಿ ಹಮಾಲ ವೃತ್ತಿಯ ಮೂಲಕ ಬದುಕು ಕಟ್ಟಿಕೊಂಡಿರುವ ಸೋದರರೇ ಸ್ಪಷ್ಟ ಉದಾಹರಣೆ. ಇಡೀ ದೇಶದ ಪರವಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ’ ಎಂದು ಹೇಳಿದ್ದಾರೆ.</p><p>‘ಈ ದುರ್ಘಟನೆಯಿಂದ ಕೇಂದ್ರ ಸರ್ಕಾರ ಪಾಠ ಕಲಿಯಬೇಕಿದೆ. ಭವಿಷ್ಯದಲ್ಲಿ ಇಂಥ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವುದು ಮತ್ತು ಯೋಜನಾಬದ್ಧ ಮುನ್ನೆಚ್ಚರಿಕಾ ಕ್ರಮ ಅಳವಡಿಸುವುದು ಸೂಕ್ತ. ಆ ಮೂಲಕ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ’ ಎಂದು ರಾಹುಲ್ ಆಗ್ರಹಿಸಿದ್ದಾರೆ.</p><p>‘ಇಂದು ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಇಂಥ ದುರ್ಘಟನೆಗಳನ್ನು ತಡೆಯಲು, ಹೆಚ್ಚು ಜನಸಂದಣಿಯನ್ನು ನಿಯಂತ್ರಿಸುವ ಪ್ರಯತ್ನವನ್ನು ರೈಲ್ವೆ ಇಲಾಖೆ ನಡೆಸಬೇಕು. ಮೂಲಸೌಕರ್ಯವನ್ನು ಇನ್ನಷ್ಟು ಉತ್ತಮಪಡಿಸಬೇಕು. ತುರ್ತು ಸಂದರ್ಭದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಬ ಭರವಸೆ ಇದೆ’ ಎಂದಿದ್ದಾರೆ.</p><p>ಉತ್ತರ ಪ್ರದೇಶದ ಪ್ರಯಾಗ್ರಾಜ್ ಬಳಿ ಆಯೋಜನೆಗೊಂಡಿದ್ದ ಮಹಾಕುಂಭ ಮೇಳಕ್ಕೆ ತೆರಳಲು ದೆಹಲಿ ರೈಲು ನಿಲ್ದಾಣದಲ್ಲಿ ಫೆ. 15ರಂದು ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 18 ಜನ ಮೃತಪಟ್ಟು ಹಲವರು ಗಾಯಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>