<p><strong>ನವದೆಹಲಿ</strong>: ಟಿಕೆಟ್ ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ರೈಲು ಹೊರಡುವ 24 ಗಂಟೆಗಳ ಮುನ್ನವೇ ಸೀಟು ಹಂಚಿಕೆ ಮಾಡಿ, ಖಚಿತಪಡಿಸುವ ವ್ಯವಸ್ಥೆಯನ್ನು ರೈಲ್ವೆ ಸಚಿವಾಲಯ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ. </p>.<p>ಸದ್ಯ ರೈಲು ಹೊರಡುವ ನಾಲ್ಕು ಗಂಟೆಗಳ ಮೊದಲಷ್ಟೇ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗುತ್ತಿದೆ. ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ಆಸನಗಳನ್ನು ತ್ವರಿತವಾಗಿ ಖಚಿತಪಡಿಸುವ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಪ್ರಕಟಿಸಿದೆ.</p>.<p>ಪ್ರಯಾಣಿಕರಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾದರೆ ಈ ವ್ಯವಸ್ಥೆಯನ್ನು ರೈಲ್ವೆ ನೀತಿಯ ಭಾಗವಾಗಿಸಿ, ದೇಶದಾದ್ಯಂತ ಜಾರಿಗೆ ತರಲಾಗುವುದು ಎಂದು ತಿಳಿಸಿದೆ.</p>.<p>‘ಬಿಕಾನೇರ್ ವಿಭಾಗದಲ್ಲಿ ಈ ಪ್ರಾಯೋಗಿಕ ಯೋಜನೆಯು ಆರಂಭಗೊಂಡಿದೆ’ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.</p>.<p>‘ಸೀಟು ಕಾಯ್ದಿರಿಸಿ ಟಿಕೆಟ್ ಪಡೆದಿದ್ದರೂ, ಆಸನ ಹಂಚಿಕೆಯಾಗಿ, ಖಾತರಿಯಾಗದೇ ಇರುವುದರಿಂದ ತಮ್ಮ ಪ್ರಯಾಣದ ಬಗ್ಗೆ ಅನಿಶ್ಚಿತತೆ ಹೊಂದಿದ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದರಿಂದ ಅವರಿಗೆ ಅನುಕೂಲವಾಗಲಿದೆ’ ಎಂದು ಅವರು ಹೇಳಿದ್ದಾರೆ.</p>.<p>ಪ್ರಯಾಣದ ಟಿಕೆಟ್ ಖಚಿತಗೊಂಡ ನಂತರ ಪ್ರಯಾಣಿಕರು ಅದನ್ನು ರದ್ದುಗೊಳಿಸಿದರೆ, ಪಾವತಿಸಿದ ಮೊತ್ತದಲ್ಲಿ ಹೆಚ್ಚಿನ ಭಾಗವನ್ನು ಕಳೆದುಕೊಳ್ಳಲಿದ್ದಾರೆ.</p>.<p>ರದ್ದತಿ ನೀತಿಯ ಪ್ರಕಾರ ರೈಲು ಹೊರಡುವ 12ರಿಂದ 48 ಗಂಟೆಗೂ ಮುನ್ನ ಟಿಕೆಟ್ ರದ್ದುಗೊಳಿಸಿದರೆ ಶೇಕಡ 50ರಷ್ಟು ಹಣವನ್ನಷ್ಟೆ ಪ್ರಯಾಣಿಕರು ಪಡೆಯಲಿದ್ದಾರೆ. ನಾಲ್ಕರಿಂದ 12 ಗಂಟೆ ಮುಂಚೆ ರದ್ದುಗೊಳಿಸಿದರೆ ಶೇ 25ರಷ್ಟನ್ನು ಮಾತ್ರ ಪಡೆಯಲಿದ್ದಾರೆ.</p>.<p>ರದ್ದತಿಯಿಂದ ಖಾಲಿಯಾಗುವ ಆಸನಗಳನ್ನು ಬುಕಿಂಗ್ ವ್ಯವಸ್ಥೆಯ ಮೂಲಕ ಭರ್ತಿ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಟಿಕೆಟ್ ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ರೈಲು ಹೊರಡುವ 24 ಗಂಟೆಗಳ ಮುನ್ನವೇ ಸೀಟು ಹಂಚಿಕೆ ಮಾಡಿ, ಖಚಿತಪಡಿಸುವ ವ್ಯವಸ್ಥೆಯನ್ನು ರೈಲ್ವೆ ಸಚಿವಾಲಯ ಪ್ರಾಯೋಗಿಕವಾಗಿ ಜಾರಿಗೊಳಿಸಿದೆ. </p>.<p>ಸದ್ಯ ರೈಲು ಹೊರಡುವ ನಾಲ್ಕು ಗಂಟೆಗಳ ಮೊದಲಷ್ಟೇ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗುತ್ತಿದೆ. ಕಾಯ್ದಿರಿಸಿದ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ಆಸನಗಳನ್ನು ತ್ವರಿತವಾಗಿ ಖಚಿತಪಡಿಸುವ ಉದ್ದೇಶದಿಂದ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಪ್ರಕಟಿಸಿದೆ.</p>.<p>ಪ್ರಯಾಣಿಕರಿಂದ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾದರೆ ಈ ವ್ಯವಸ್ಥೆಯನ್ನು ರೈಲ್ವೆ ನೀತಿಯ ಭಾಗವಾಗಿಸಿ, ದೇಶದಾದ್ಯಂತ ಜಾರಿಗೆ ತರಲಾಗುವುದು ಎಂದು ತಿಳಿಸಿದೆ.</p>.<p>‘ಬಿಕಾನೇರ್ ವಿಭಾಗದಲ್ಲಿ ಈ ಪ್ರಾಯೋಗಿಕ ಯೋಜನೆಯು ಆರಂಭಗೊಂಡಿದೆ’ ಎಂದು ರೈಲ್ವೆ ಮಂಡಳಿಯ ಮಾಹಿತಿ ಮತ್ತು ಪ್ರಚಾರ ಕಾರ್ಯನಿರ್ವಾಹಕ ನಿರ್ದೇಶಕ ದಿಲೀಪ್ ಕುಮಾರ್ ತಿಳಿಸಿದ್ದಾರೆ.</p>.<p>‘ಸೀಟು ಕಾಯ್ದಿರಿಸಿ ಟಿಕೆಟ್ ಪಡೆದಿದ್ದರೂ, ಆಸನ ಹಂಚಿಕೆಯಾಗಿ, ಖಾತರಿಯಾಗದೇ ಇರುವುದರಿಂದ ತಮ್ಮ ಪ್ರಯಾಣದ ಬಗ್ಗೆ ಅನಿಶ್ಚಿತತೆ ಹೊಂದಿದ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದರಿಂದ ಅವರಿಗೆ ಅನುಕೂಲವಾಗಲಿದೆ’ ಎಂದು ಅವರು ಹೇಳಿದ್ದಾರೆ.</p>.<p>ಪ್ರಯಾಣದ ಟಿಕೆಟ್ ಖಚಿತಗೊಂಡ ನಂತರ ಪ್ರಯಾಣಿಕರು ಅದನ್ನು ರದ್ದುಗೊಳಿಸಿದರೆ, ಪಾವತಿಸಿದ ಮೊತ್ತದಲ್ಲಿ ಹೆಚ್ಚಿನ ಭಾಗವನ್ನು ಕಳೆದುಕೊಳ್ಳಲಿದ್ದಾರೆ.</p>.<p>ರದ್ದತಿ ನೀತಿಯ ಪ್ರಕಾರ ರೈಲು ಹೊರಡುವ 12ರಿಂದ 48 ಗಂಟೆಗೂ ಮುನ್ನ ಟಿಕೆಟ್ ರದ್ದುಗೊಳಿಸಿದರೆ ಶೇಕಡ 50ರಷ್ಟು ಹಣವನ್ನಷ್ಟೆ ಪ್ರಯಾಣಿಕರು ಪಡೆಯಲಿದ್ದಾರೆ. ನಾಲ್ಕರಿಂದ 12 ಗಂಟೆ ಮುಂಚೆ ರದ್ದುಗೊಳಿಸಿದರೆ ಶೇ 25ರಷ್ಟನ್ನು ಮಾತ್ರ ಪಡೆಯಲಿದ್ದಾರೆ.</p>.<p>ರದ್ದತಿಯಿಂದ ಖಾಲಿಯಾಗುವ ಆಸನಗಳನ್ನು ಬುಕಿಂಗ್ ವ್ಯವಸ್ಥೆಯ ಮೂಲಕ ಭರ್ತಿ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>