<p><strong>ನವದೆಹಲಿ</strong>: ರೈಲ್ವೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನಿರ್ಣಾಯಕವಾದ ದೋಷಾರೋಪ ಪಟ್ಟಿಯನ್ನು ಸಲ್ಲಿಸುವಲ್ಲಿನ ವಿಳಂಬಕ್ಕೆ ದೆಹಲಿಯ ನ್ಯಾಯಾಲಯವೊಂದು ಸಿಬಿಐ ಅಧಿಕಾರಿಗಳನ್ನು ಬುಧವಾರ ತರಾಟೆಗೆ ತೆಗೆದುಕೊಂಡಿದೆ.</p>.<p>ಈ ಹಗರಣದಲ್ಲಿ ಆರ್ಜೆಡಿ ನಾಯಕ ಲಾಲು ಪ್ರಸಾದ್ ಮತ್ತು ಅವರ ಕುಟುಂಬದ ಕೆಲವು ಸದಸ್ಯರು ಕೂಡ ಆರೋಪಿಗಳಾಗಿದ್ದಾರೆ. ದೋಷಾರೋಪ ಪಟ್ಟಿಯನ್ನು ಸಲ್ಲಿಸಲು ಸಿಬಿಐ ಅಧಿಕಾರಿಗಳು ಪ್ರತಿಬಾರಿಯೂ ಹೆಚ್ಚುವರಿ ಕಾಲಾವಕಾಶ ಕೋರುತ್ತಿರುವುದಕ್ಕೆ ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿತು.</p>.<p>ಅಂತಿಮ ವರದಿಯನ್ನು ಜೂನ್ 7ಕ್ಕೆ ಮೊದಲು ಸಲ್ಲಿಸಬೇಕು ಎಂದು ಸಿಬಿಐಗೆ ತಾಕೀತು ಮಾಡಿದೆ.</p>.<p>ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ 2004ರಿಂದ 2009ರ ನಡುವಿನ ಅವಧಿಯಲ್ಲಿ ನಡೆದ ನೇಮಕಾತಿಯಲ್ಲಿ ಹಲವರು ಜಮೀನನ್ನು ಲಾಲು ಅವರ ಕುಟುಂಬದ ಸದಸ್ಯರಿಗೆ ತೀರಾ ಕಡಿಮೆ ದರಕ್ಕೆ ಮಾಡಿದ್ದಕ್ಕೆ ‘ಡಿ’ ದರ್ಜೆ ನೌಕರಿ ಗಿಟ್ಟಿಸಿಕೊಂಡರು ಎಂದು ಸಿಬಿಐ ಆರೋಪಿಸಿದೆ. ಆ ಅವಧಿಯಲ್ಲಿ ಲಾಲು ಅವರು ರೈಲ್ವೆ ಸಚಿವರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರೈಲ್ವೆ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನಿರ್ಣಾಯಕವಾದ ದೋಷಾರೋಪ ಪಟ್ಟಿಯನ್ನು ಸಲ್ಲಿಸುವಲ್ಲಿನ ವಿಳಂಬಕ್ಕೆ ದೆಹಲಿಯ ನ್ಯಾಯಾಲಯವೊಂದು ಸಿಬಿಐ ಅಧಿಕಾರಿಗಳನ್ನು ಬುಧವಾರ ತರಾಟೆಗೆ ತೆಗೆದುಕೊಂಡಿದೆ.</p>.<p>ಈ ಹಗರಣದಲ್ಲಿ ಆರ್ಜೆಡಿ ನಾಯಕ ಲಾಲು ಪ್ರಸಾದ್ ಮತ್ತು ಅವರ ಕುಟುಂಬದ ಕೆಲವು ಸದಸ್ಯರು ಕೂಡ ಆರೋಪಿಗಳಾಗಿದ್ದಾರೆ. ದೋಷಾರೋಪ ಪಟ್ಟಿಯನ್ನು ಸಲ್ಲಿಸಲು ಸಿಬಿಐ ಅಧಿಕಾರಿಗಳು ಪ್ರತಿಬಾರಿಯೂ ಹೆಚ್ಚುವರಿ ಕಾಲಾವಕಾಶ ಕೋರುತ್ತಿರುವುದಕ್ಕೆ ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿತು.</p>.<p>ಅಂತಿಮ ವರದಿಯನ್ನು ಜೂನ್ 7ಕ್ಕೆ ಮೊದಲು ಸಲ್ಲಿಸಬೇಕು ಎಂದು ಸಿಬಿಐಗೆ ತಾಕೀತು ಮಾಡಿದೆ.</p>.<p>ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ 2004ರಿಂದ 2009ರ ನಡುವಿನ ಅವಧಿಯಲ್ಲಿ ನಡೆದ ನೇಮಕಾತಿಯಲ್ಲಿ ಹಲವರು ಜಮೀನನ್ನು ಲಾಲು ಅವರ ಕುಟುಂಬದ ಸದಸ್ಯರಿಗೆ ತೀರಾ ಕಡಿಮೆ ದರಕ್ಕೆ ಮಾಡಿದ್ದಕ್ಕೆ ‘ಡಿ’ ದರ್ಜೆ ನೌಕರಿ ಗಿಟ್ಟಿಸಿಕೊಂಡರು ಎಂದು ಸಿಬಿಐ ಆರೋಪಿಸಿದೆ. ಆ ಅವಧಿಯಲ್ಲಿ ಲಾಲು ಅವರು ರೈಲ್ವೆ ಸಚಿವರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>