<p><strong>ನವದೆಹಲಿ</strong>: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಮೃತಪಟ್ಟ ದುರ್ಘಟನೆ ನಡೆದ ವಾರಗಳ ನಂತರ, ಎಚ್ಚೆತ್ತಿರುವ ರೈಲ್ವೆ ಸಚಿವಾಲಯವು ದೇಶದ 60 ರೈಲ್ವೆ ನಿಲ್ದಾಣಗಳ ಹೊರಗೆ ಕಾಯುವ ಪ್ರದೇಶ ಸ್ಥಾಪನೆಗೆ ಮುಂದಾಗಿದೆ.</p><p>ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ದೇಶದಾದ್ಯಂತ 60 ನಿಲ್ದಾಣಗಳ ಹೊರಗೆ ಶಾಶ್ವತ ಕಾಯುವ ಪ್ರದೇಶಗಳನ್ನು ನಿರ್ಮಾಣ ಮಾಡುವ ನಿರ್ಧಾರವನ್ನು ಪ್ರಕಟಿಸಿದರು.</p><p>‘ನವದೆಹಲಿ, ಆನಂದ್ ವಿಹಾರ್, ವಾರಾಣಸಿ, ಅಯೋಧ್ಯೆ ಮತ್ತು ಪಟ್ನಾ ನಿಲ್ದಾಣಗಳಲ್ಲಿ ಪೈಲಟ್ ಯೋಜನೆಗಳು ಪ್ರಾರಂಭವಾಗಿವೆ’ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ರೈಲುಗಳು ಪ್ಲಾಟ್ಫಾರ್ಮ್ಗೆ ಬಂದಾಗ ಮಾತ್ರ ಪ್ರಯಾಣಿಕರಿಗೆ ಪ್ಲಾಟ್ಫಾರ್ಮ್ಗಳಿಗೆ ಹೋಗಲು ಅವಕಾಶ ನೀಡಲಾಗುವುದು. ಇದು ನಿಲ್ದಾಣಗಳಲ್ಲಿನ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಲಾಗಿದೆ.</p><p>ಟಿಕೆಟ್ ಅಥವಾ ವೇಟಿಂಗ್ ಲಿಸ್ಟ್ ಟಿಕೆಟ್ ಇಲ್ಲದ ಪ್ರಯಾಣಿಕರು ಹೊರಗಿನ 'ಕಾಯುವ ಪ್ರದೇಶ'ದಲ್ಲಿ ಕಾಯಬೇಕಾಗುತ್ತದೆ. ದೃಢೀಕೃತ ಟಿಕೆಟ್ ಹೊಂದಿರುವವರಿಗೆ ಪ್ಲಾಟ್ಫಾರ್ಮ್ಗಳಿಗೆ ನೇರ ಪ್ರವೇಶವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.</p>. <p>ಮಹಾಕುಂಭದ ವ್ಯವಸ್ಥೆಗಳಿಂದ ಸ್ಫೂರ್ತಿ ಪಡೆದು, 12 ಮೀಟರ್ ಅಗಲ (40 ಅಡಿ) ಮತ್ತು ಆರು ಮೀಟರ್ ಅಗಲದ(20 ಅಡಿ) ಪಾದಚಾರಿ ಸೇತುವೆಯ ಎರಡು ಹೊಸ ವಿನ್ಯಾಸಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನು ಎಲ್ಲಾ ನಿಲ್ದಾಣಗಳಲ್ಲಿ ಸ್ಥಾಪಿಸಲಾಗುವುದು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.</p><p>ಎಲ್ಲ ನಿಲ್ದಾಣಗಳು ಮತ್ತು ಪಕ್ಕದ ಪ್ರದೇಶಗಳಲ್ಲಿ ನಿಕಟ ಮೇಲ್ವಿಚಾರಣೆಗಾಗಿ ಹೆಚ್ಚಿನ ಸಂಖ್ಯೆಯ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದೂ ತಿಳಿಸಿದೆ.</p><p>ಇದಲ್ಲದೆ, ರೈಲ್ವೆ ಸಿಬ್ಬಂದಿಗೆ ಹೊಸ ಗುರುತಿನ ಚೀಟಿಗಳನ್ನು ನೀಡಲಾಗುವುದು ಇದರಿಂದ ಅಧಿಕೃತ ವ್ಯಕ್ತಿಗಳು ಮಾತ್ರ ನಿಲ್ದಾಣಕ್ಕೆ ಪ್ರವೇಶಿಸಬಹುದು ಎಂದು ಹೇಳಿದೆ.</p> .ಕಂದಾಯ ಇಲಾಖೆ: ಹೊಸ ಭೂಕಂದಾಯ ಕಾಯ್ದೆ, ಇ-ಪೌತಿ ಆಂದೋಲನ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಜನರು ಮೃತಪಟ್ಟ ದುರ್ಘಟನೆ ನಡೆದ ವಾರಗಳ ನಂತರ, ಎಚ್ಚೆತ್ತಿರುವ ರೈಲ್ವೆ ಸಚಿವಾಲಯವು ದೇಶದ 60 ರೈಲ್ವೆ ನಿಲ್ದಾಣಗಳ ಹೊರಗೆ ಕಾಯುವ ಪ್ರದೇಶ ಸ್ಥಾಪನೆಗೆ ಮುಂದಾಗಿದೆ.</p><p>ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ನಿಲ್ದಾಣಗಳಲ್ಲಿ ಜನಸಂದಣಿ ನಿಯಂತ್ರಣ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ದೇಶದಾದ್ಯಂತ 60 ನಿಲ್ದಾಣಗಳ ಹೊರಗೆ ಶಾಶ್ವತ ಕಾಯುವ ಪ್ರದೇಶಗಳನ್ನು ನಿರ್ಮಾಣ ಮಾಡುವ ನಿರ್ಧಾರವನ್ನು ಪ್ರಕಟಿಸಿದರು.</p><p>‘ನವದೆಹಲಿ, ಆನಂದ್ ವಿಹಾರ್, ವಾರಾಣಸಿ, ಅಯೋಧ್ಯೆ ಮತ್ತು ಪಟ್ನಾ ನಿಲ್ದಾಣಗಳಲ್ಲಿ ಪೈಲಟ್ ಯೋಜನೆಗಳು ಪ್ರಾರಂಭವಾಗಿವೆ’ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ರೈಲುಗಳು ಪ್ಲಾಟ್ಫಾರ್ಮ್ಗೆ ಬಂದಾಗ ಮಾತ್ರ ಪ್ರಯಾಣಿಕರಿಗೆ ಪ್ಲಾಟ್ಫಾರ್ಮ್ಗಳಿಗೆ ಹೋಗಲು ಅವಕಾಶ ನೀಡಲಾಗುವುದು. ಇದು ನಿಲ್ದಾಣಗಳಲ್ಲಿನ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಲಾಗಿದೆ.</p><p>ಟಿಕೆಟ್ ಅಥವಾ ವೇಟಿಂಗ್ ಲಿಸ್ಟ್ ಟಿಕೆಟ್ ಇಲ್ಲದ ಪ್ರಯಾಣಿಕರು ಹೊರಗಿನ 'ಕಾಯುವ ಪ್ರದೇಶ'ದಲ್ಲಿ ಕಾಯಬೇಕಾಗುತ್ತದೆ. ದೃಢೀಕೃತ ಟಿಕೆಟ್ ಹೊಂದಿರುವವರಿಗೆ ಪ್ಲಾಟ್ಫಾರ್ಮ್ಗಳಿಗೆ ನೇರ ಪ್ರವೇಶವನ್ನು ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.</p>. <p>ಮಹಾಕುಂಭದ ವ್ಯವಸ್ಥೆಗಳಿಂದ ಸ್ಫೂರ್ತಿ ಪಡೆದು, 12 ಮೀಟರ್ ಅಗಲ (40 ಅಡಿ) ಮತ್ತು ಆರು ಮೀಟರ್ ಅಗಲದ(20 ಅಡಿ) ಪಾದಚಾರಿ ಸೇತುವೆಯ ಎರಡು ಹೊಸ ವಿನ್ಯಾಸಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನು ಎಲ್ಲಾ ನಿಲ್ದಾಣಗಳಲ್ಲಿ ಸ್ಥಾಪಿಸಲಾಗುವುದು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.</p><p>ಎಲ್ಲ ನಿಲ್ದಾಣಗಳು ಮತ್ತು ಪಕ್ಕದ ಪ್ರದೇಶಗಳಲ್ಲಿ ನಿಕಟ ಮೇಲ್ವಿಚಾರಣೆಗಾಗಿ ಹೆಚ್ಚಿನ ಸಂಖ್ಯೆಯ ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದೂ ತಿಳಿಸಿದೆ.</p><p>ಇದಲ್ಲದೆ, ರೈಲ್ವೆ ಸಿಬ್ಬಂದಿಗೆ ಹೊಸ ಗುರುತಿನ ಚೀಟಿಗಳನ್ನು ನೀಡಲಾಗುವುದು ಇದರಿಂದ ಅಧಿಕೃತ ವ್ಯಕ್ತಿಗಳು ಮಾತ್ರ ನಿಲ್ದಾಣಕ್ಕೆ ಪ್ರವೇಶಿಸಬಹುದು ಎಂದು ಹೇಳಿದೆ.</p> .ಕಂದಾಯ ಇಲಾಖೆ: ಹೊಸ ಭೂಕಂದಾಯ ಕಾಯ್ದೆ, ಇ-ಪೌತಿ ಆಂದೋಲನ ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>