<p><strong>ನವದೆಹಲಿ:</strong> ದೂರ ಪ್ರಯಾಣದ ರೈಲುಗಳ ಸೀಟು ಕಾಯ್ದಿರಿಸಿದ ವಿವರಗಳ ಪಟ್ಟಿಯನ್ನು ರೈಲು ಹೊರಡುವ ಎಂಟು ಗಂಟೆಗೂ ಮುನ್ನ ಸಿದ್ಧಪಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈಗ ಇರುವ ವ್ಯವಸ್ಥೆಯ ಪ್ರಕಾರ ಪಟ್ಟಿಯನ್ನು ನಾಲ್ಕು ಗಂಟೆಗಳಿರುವಾಗ ಸಿದ್ಧಪಡಿಸಲಾಗುತ್ತದೆ.</p>.<p>ದೂರದ ಊರುಗಳಿಂದ ಪ್ರಯಾಣಿಸುವವರಿಗೆ ತಮ್ಮ ಪ್ರಯಾಣವನ್ನು ಇನ್ನಷ್ಟು ಉತ್ತಮವಾಗಿ ಯೋಜಿಸಲು ಅನುವು ಮಾಡಿಕೊಡಲು ಈ ತೀರ್ಮಾನ ತೆಗೆದುಕೊಂಡಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನೇತೃತ್ವದಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಮಧ್ಯಾಹ್ನ 2 ಗಂಟೆಗೂ ಮುನ್ನ ಹೊರಡುವ ರೈಲುಗಳ ಸೀಟು ಕಾಯ್ದಿರಿಸಿದ ವಿವರಗಳ ಪಟ್ಟಿಯನ್ನು ಹಿಂದಿನ ರಾತ್ರಿ 9 ಗಂಟೆಗೆ ಸಿದ್ಧಪಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ರೈಲುಗಳ ಸಂಚಾರಕ್ಕೆ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಹಂತ ಹಂತವಾಗಿ ಈ ಬದಲಾವಣೆಯನ್ನು ಜಾರಿಗೆ ತರಲು ಸಚಿವರು ಸೂಚಿಸಿದ್ದಾರೆ ಎಂದು ಹೇಳಿದೆ.</p>.<h2>ತತ್ಕಾಲ್ ಟಿಕೆಟ್ಗೆ ಆಧಾರ್:</h2>.<p>ಆಧಾರ್ ದೃಢೀಕರಿಸಿದ ಬಳಕೆದಾರರು ಮಾತ್ರ ತತ್ಕಾಲ್ ಯೋಜನೆಯಡಿ ಟಿಕೆಟ್ ಕಾಯ್ದಿರಿಸಬಹುದಾದ ವ್ಯವಸ್ಥೆಯೂ ಮಂಗಳವಾರದಿಂದ ಜಾರಿಗೆ ಬರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೂರ ಪ್ರಯಾಣದ ರೈಲುಗಳ ಸೀಟು ಕಾಯ್ದಿರಿಸಿದ ವಿವರಗಳ ಪಟ್ಟಿಯನ್ನು ರೈಲು ಹೊರಡುವ ಎಂಟು ಗಂಟೆಗೂ ಮುನ್ನ ಸಿದ್ಧಪಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈಗ ಇರುವ ವ್ಯವಸ್ಥೆಯ ಪ್ರಕಾರ ಪಟ್ಟಿಯನ್ನು ನಾಲ್ಕು ಗಂಟೆಗಳಿರುವಾಗ ಸಿದ್ಧಪಡಿಸಲಾಗುತ್ತದೆ.</p>.<p>ದೂರದ ಊರುಗಳಿಂದ ಪ್ರಯಾಣಿಸುವವರಿಗೆ ತಮ್ಮ ಪ್ರಯಾಣವನ್ನು ಇನ್ನಷ್ಟು ಉತ್ತಮವಾಗಿ ಯೋಜಿಸಲು ಅನುವು ಮಾಡಿಕೊಡಲು ಈ ತೀರ್ಮಾನ ತೆಗೆದುಕೊಂಡಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನೇತೃತ್ವದಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.</p>.<p>ಮಧ್ಯಾಹ್ನ 2 ಗಂಟೆಗೂ ಮುನ್ನ ಹೊರಡುವ ರೈಲುಗಳ ಸೀಟು ಕಾಯ್ದಿರಿಸಿದ ವಿವರಗಳ ಪಟ್ಟಿಯನ್ನು ಹಿಂದಿನ ರಾತ್ರಿ 9 ಗಂಟೆಗೆ ಸಿದ್ಧಪಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ರೈಲುಗಳ ಸಂಚಾರಕ್ಕೆ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಹಂತ ಹಂತವಾಗಿ ಈ ಬದಲಾವಣೆಯನ್ನು ಜಾರಿಗೆ ತರಲು ಸಚಿವರು ಸೂಚಿಸಿದ್ದಾರೆ ಎಂದು ಹೇಳಿದೆ.</p>.<h2>ತತ್ಕಾಲ್ ಟಿಕೆಟ್ಗೆ ಆಧಾರ್:</h2>.<p>ಆಧಾರ್ ದೃಢೀಕರಿಸಿದ ಬಳಕೆದಾರರು ಮಾತ್ರ ತತ್ಕಾಲ್ ಯೋಜನೆಯಡಿ ಟಿಕೆಟ್ ಕಾಯ್ದಿರಿಸಬಹುದಾದ ವ್ಯವಸ್ಥೆಯೂ ಮಂಗಳವಾರದಿಂದ ಜಾರಿಗೆ ಬರಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>