<p><strong>ತಿರುವನಂತಪುರಂ</strong>: ಕೇರಳದ ಹಲವೆಡೆ ಬಿರುಗಾಳಿ ಸಹಿತ ನಿರಂತರ ಮಳೆ ಸುರಿಯುತ್ತಿದ್ದು, ಸೋಮವಾರ ಏಳು ಜಿಲ್ಲೆಯಲ್ಲಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಯಿತು.</p><p>ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉತ್ತರ ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು, ಉತ್ತರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. </p><p>ಐಎಂಡಿಯು ಎರ್ನಾಕುಲಂ, ತ್ರಿಶ್ಯೂರ್, ಪಾಲಕ್ಕಾಡ್, ಇಡುಕ್ಕಿ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.</p><p>ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು, ಕಾಸರಗೋಡು, ಎರ್ನಾಕುಲಂ ಮತ್ತು ವಯನಾಡ್ನ ಜಿಲ್ಲಾಧಿ<br>ಕಾರಿಗಳು ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.</p><p>ಮಳೆಯಿಂದಾಗಿ ವಿವಿಧ ಅಣೆಕಟ್ಟು<br>ಗಳ ಗೇಟ್ ತೆರೆಯಲಾಗಿದ್ದು, ಪತ್ತನಂತಿಟ್ಟದಲ್ಲಿ ಜಿಲ್ಲಾಡಳಿತವು ಮೂಳಿಯಾರ್ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಿದೆ. </p><p>ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ನೀರು ನಿಲ್ಲುವುದು, ಸಂಚಾರ ದಟ್ಟಣೆ ಮತ್ತು ವಿದ್ಯುತ್ ಕಂಬಗಳಿಗೆ ಹಾನಿಯಾಗಬಹುದು ಎಂದು ಕೇರಳ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಸಿದೆ.</p><p><strong>ಮನೆಗಳಿಗೆ ಹಾನಿ: ಕೊಟ್ಟಾಯಂ ಜಿಲ್ಲೆಯಲ್ಲಿ ಮುಂಜಾನೆಯಿಂದ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದ ಮರಗಳು ಬಿದ್ದಿದ್ದು, ಮನೆಗಳು ಮತ್ತು ವಾಹನಗಳಿಗೆ ಹಾನಿಯಾಗಿದೆ. ಒಂಚಿಯಂ, ಕೊಟ್ಟೂರು, ಪಯ್ಯೋಳಿ ಸೇರಿದಂತೆ ಉತ್ತರ ಕೋಯಿಕ್ಕೋಡ್ನ ಗ್ರಾಮಾಂತರ ಪ್ರದೇಶಗಳಲ್ಲಿ ಹಲವಾರು ಮನೆಗಳು ಭಾಗಶಃ ಹಾನಿಗೊಳಗಾಗಿವೆ.</strong></p> <p>ಭೂಕುಸಿತ: ಕೊಂಕಣ ರೈಲು ಸಂಚಾರ ಸ್ಥಗಿತ</p><p>ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಭಾರಿ ಮಳೆಯಿಂದಾಗಿ ರಾಯಗಡ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಕೊಂಕಣ ರೈಲ್ವೆಯ ರೈಲು ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿವೆ. </p><p>ಭಾನುವಾರ ಸಂಜೆ ದಿಬಾಣಖಾವಟಿ-ವಿನ್ಹೆರೆ ಭಾಗದಲ್ಲಿ ಭೂ ಕುಸಿತವಾಗಿದೆ.ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನ (ಕೆಆರ್ಸಿಎಲ್) ಉನ್ನತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ದುರಸ್ತಿ ಕಾರ್ಯ ಮಾಡುತ್ತಿದ್ದಾರೆ. ಮಂಗಳವಾರದ ವೇಳೆಗೆ ರೈಲು ಸೇವೆಗಳು ಪುನರಾರಂಭವಾಗಲಿರುವ ನಿರೀಕ್ಷೆ ಇದೆ. </p><p><strong>ದೆಹಲಿಯಲ್ಲಿ ಮಳೆ: ಸಂಚಾರ ಅಸ್ತವ್ಯಸ್ತ</strong></p><p>ದೆಹಲಿಯ ಕೆಲವು ಭಾಗಗಳು ಮಳೆಯಿಂದಾಗಿ ಜಲಾವೃತಗೊಂಡಿದ್ದು, ಸೋಮವಾರ ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸಲು ಪ್ರಯಾಣಿಕರು <br>ಹರಸಾಹಸಪಟ್ಟರು. </p><p>ಚೌಧರಿ ಫತೇಹ್ ಸಿಂಗ್ ಮಾರ್ಗವೂ ಜಲಾವೃತ<br>ಗೊಂಡಿದ್ದು, ಜನರು ಮಾಲ್ ರೋಡ್ ಸಿಗ್ನಲ್ನಿಂದ ಖೈಬರ್ ಪಾಸ್, ಮಜ್ನು ಕಾ ಟೀಲಾ, ವಜೀರಾ<br>ಬಾದ್ ಮೇಲ್ಸೇತುವೆ ಮೂಲಕ ಬುರಾಡಿಗೆ ಹೋಗಲು ದೆಹಲಿ ಪೊಲೀಸರು ಸಲಹೆ ನೀಡಿದರು.</p><p><strong>ಕೆಲವೆಡೆ ಮಳೆ: ಸೋಮವಾರ ದೆಹಲಿಯ ಕೆಲವೆಡೆ ಮಳೆ ಸುರಿದಿದ್ದು, ಕನಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಇದು ಈ ವರ್ಷದಲ್ಲಿ ದಾಖಲಾದ ಸರಾಸರಿ ತಾಪಮಾನಕ್ಕಿಂತ 1.8 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. </strong></p><p><strong>ಚೇತರಿಸಿಕೊಳ್ಳುತ್ತಿರುವ ಅಸ್ಸಾಂ</strong></p><p>ಪ್ರವಾಹದಿಂದ ತತ್ತರಿಸಿದ್ದ ಅಸ್ಸಾಂನಲ್ಲಿ ಸೋಮವಾರ ಪರಿಸ್ಥಿತಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಈ ಬಾರಿಯ ಪ್ರವಾಹ, ಭೂಕುಸಿತ, ಬಿರುಗಾಳಿ ಮತ್ತು ಸಿಡಿಲಿಗೆ ಬಲಿಯಾದವರ ಒಟ್ಟು ಸಂಖ್ಯೆ 109ಕ್ಕೆ ಏರಿಕೆಯಾಗಿದೆ.</p><p>‘ರಾಜ್ಯದ ಬಹುತೇಕ ಜಲಾವೃತ ಪ್ರದೇಶಗಲ್ಲಿ ನೀರು ಇಳಿಮುಖವಾಗುತ್ತಿದೆ. ಮಳೆ ನಿಂತಿರುವುದರಿಂದ ಪರಿಸ್ಥಿತಿ ಮತ್ತಷ್ಟು ಸುಧಾರಿಸುವ ಸಾಧ್ಯತೆಯಿದೆ’ ಎಂದು ಎಎಸ್ಡಿಎಂಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p><strong><br></strong></p>.<div><blockquote>ಪ್ರವಾಹ ಮತ್ತು ಭಾರಿ ಮಳೆಗೆ ತುತ್ತಾಗಿರುವ ಅಸ್ಸಾಂ, ಉತ್ತರ<br>ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು </blockquote><span class="attribution">-ಅಮಿತ್ ಶಾ, ಕೇಂದ್ರ ಗೃಹ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>: ಕೇರಳದ ಹಲವೆಡೆ ಬಿರುಗಾಳಿ ಸಹಿತ ನಿರಂತರ ಮಳೆ ಸುರಿಯುತ್ತಿದ್ದು, ಸೋಮವಾರ ಏಳು ಜಿಲ್ಲೆಯಲ್ಲಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಯಿತು.</p><p>ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಉತ್ತರ ಮಲಪ್ಪುರಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು, ಉತ್ತರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. </p><p>ಐಎಂಡಿಯು ಎರ್ನಾಕುಲಂ, ತ್ರಿಶ್ಯೂರ್, ಪಾಲಕ್ಕಾಡ್, ಇಡುಕ್ಕಿ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.</p><p>ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು, ಕಾಸರಗೋಡು, ಎರ್ನಾಕುಲಂ ಮತ್ತು ವಯನಾಡ್ನ ಜಿಲ್ಲಾಧಿ<br>ಕಾರಿಗಳು ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.</p><p>ಮಳೆಯಿಂದಾಗಿ ವಿವಿಧ ಅಣೆಕಟ್ಟು<br>ಗಳ ಗೇಟ್ ತೆರೆಯಲಾಗಿದ್ದು, ಪತ್ತನಂತಿಟ್ಟದಲ್ಲಿ ಜಿಲ್ಲಾಡಳಿತವು ಮೂಳಿಯಾರ್ ಅಣೆಕಟ್ಟಿನ ಜಲಾನಯನ ಪ್ರದೇಶದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಿದೆ. </p><p>ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ನೀರು ನಿಲ್ಲುವುದು, ಸಂಚಾರ ದಟ್ಟಣೆ ಮತ್ತು ವಿದ್ಯುತ್ ಕಂಬಗಳಿಗೆ ಹಾನಿಯಾಗಬಹುದು ಎಂದು ಕೇರಳ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಸಿದೆ.</p><p><strong>ಮನೆಗಳಿಗೆ ಹಾನಿ: ಕೊಟ್ಟಾಯಂ ಜಿಲ್ಲೆಯಲ್ಲಿ ಮುಂಜಾನೆಯಿಂದ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯಿಂದ ಮರಗಳು ಬಿದ್ದಿದ್ದು, ಮನೆಗಳು ಮತ್ತು ವಾಹನಗಳಿಗೆ ಹಾನಿಯಾಗಿದೆ. ಒಂಚಿಯಂ, ಕೊಟ್ಟೂರು, ಪಯ್ಯೋಳಿ ಸೇರಿದಂತೆ ಉತ್ತರ ಕೋಯಿಕ್ಕೋಡ್ನ ಗ್ರಾಮಾಂತರ ಪ್ರದೇಶಗಳಲ್ಲಿ ಹಲವಾರು ಮನೆಗಳು ಭಾಗಶಃ ಹಾನಿಗೊಳಗಾಗಿವೆ.</strong></p> <p>ಭೂಕುಸಿತ: ಕೊಂಕಣ ರೈಲು ಸಂಚಾರ ಸ್ಥಗಿತ</p><p>ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಭಾರಿ ಮಳೆಯಿಂದಾಗಿ ರಾಯಗಡ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಕೊಂಕಣ ರೈಲ್ವೆಯ ರೈಲು ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿವೆ. </p><p>ಭಾನುವಾರ ಸಂಜೆ ದಿಬಾಣಖಾವಟಿ-ವಿನ್ಹೆರೆ ಭಾಗದಲ್ಲಿ ಭೂ ಕುಸಿತವಾಗಿದೆ.ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನ (ಕೆಆರ್ಸಿಎಲ್) ಉನ್ನತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ದುರಸ್ತಿ ಕಾರ್ಯ ಮಾಡುತ್ತಿದ್ದಾರೆ. ಮಂಗಳವಾರದ ವೇಳೆಗೆ ರೈಲು ಸೇವೆಗಳು ಪುನರಾರಂಭವಾಗಲಿರುವ ನಿರೀಕ್ಷೆ ಇದೆ. </p><p><strong>ದೆಹಲಿಯಲ್ಲಿ ಮಳೆ: ಸಂಚಾರ ಅಸ್ತವ್ಯಸ್ತ</strong></p><p>ದೆಹಲಿಯ ಕೆಲವು ಭಾಗಗಳು ಮಳೆಯಿಂದಾಗಿ ಜಲಾವೃತಗೊಂಡಿದ್ದು, ಸೋಮವಾರ ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸಲು ಪ್ರಯಾಣಿಕರು <br>ಹರಸಾಹಸಪಟ್ಟರು. </p><p>ಚೌಧರಿ ಫತೇಹ್ ಸಿಂಗ್ ಮಾರ್ಗವೂ ಜಲಾವೃತ<br>ಗೊಂಡಿದ್ದು, ಜನರು ಮಾಲ್ ರೋಡ್ ಸಿಗ್ನಲ್ನಿಂದ ಖೈಬರ್ ಪಾಸ್, ಮಜ್ನು ಕಾ ಟೀಲಾ, ವಜೀರಾ<br>ಬಾದ್ ಮೇಲ್ಸೇತುವೆ ಮೂಲಕ ಬುರಾಡಿಗೆ ಹೋಗಲು ದೆಹಲಿ ಪೊಲೀಸರು ಸಲಹೆ ನೀಡಿದರು.</p><p><strong>ಕೆಲವೆಡೆ ಮಳೆ: ಸೋಮವಾರ ದೆಹಲಿಯ ಕೆಲವೆಡೆ ಮಳೆ ಸುರಿದಿದ್ದು, ಕನಿಷ್ಠ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಇದು ಈ ವರ್ಷದಲ್ಲಿ ದಾಖಲಾದ ಸರಾಸರಿ ತಾಪಮಾನಕ್ಕಿಂತ 1.8 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. </strong></p><p><strong>ಚೇತರಿಸಿಕೊಳ್ಳುತ್ತಿರುವ ಅಸ್ಸಾಂ</strong></p><p>ಪ್ರವಾಹದಿಂದ ತತ್ತರಿಸಿದ್ದ ಅಸ್ಸಾಂನಲ್ಲಿ ಸೋಮವಾರ ಪರಿಸ್ಥಿತಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಈ ಬಾರಿಯ ಪ್ರವಾಹ, ಭೂಕುಸಿತ, ಬಿರುಗಾಳಿ ಮತ್ತು ಸಿಡಿಲಿಗೆ ಬಲಿಯಾದವರ ಒಟ್ಟು ಸಂಖ್ಯೆ 109ಕ್ಕೆ ಏರಿಕೆಯಾಗಿದೆ.</p><p>‘ರಾಜ್ಯದ ಬಹುತೇಕ ಜಲಾವೃತ ಪ್ರದೇಶಗಲ್ಲಿ ನೀರು ಇಳಿಮುಖವಾಗುತ್ತಿದೆ. ಮಳೆ ನಿಂತಿರುವುದರಿಂದ ಪರಿಸ್ಥಿತಿ ಮತ್ತಷ್ಟು ಸುಧಾರಿಸುವ ಸಾಧ್ಯತೆಯಿದೆ’ ಎಂದು ಎಎಸ್ಡಿಎಂಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p><strong><br></strong></p>.<div><blockquote>ಪ್ರವಾಹ ಮತ್ತು ಭಾರಿ ಮಳೆಗೆ ತುತ್ತಾಗಿರುವ ಅಸ್ಸಾಂ, ಉತ್ತರ<br>ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು </blockquote><span class="attribution">-ಅಮಿತ್ ಶಾ, ಕೇಂದ್ರ ಗೃಹ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>