<p><strong>ಮುಂಬೈ/ ತಿರುವನಂತಪುರ:</strong> ಮಹಾರಾಷ್ಟ್ರ, ಕೇರಳ ಹಾಗೂ ಉತ್ತರಪ್ರದೇಶದ ವಿವಿಧೆಡೆ ಸೋಮವಾರವೂ ಭಾರಿ ಮಳೆಯಾಗಿದೆ. </p>.<p>ಜೂನ್ 1ರಿಂದ ಇಲ್ಲಿಯವರೆಗೆ ಮಳೆ ಪರಿಣಾಮದಿಂದಾಗಿ ಮಹಾರಾಷ್ಟ್ರದಲ್ಲಿ 18 ಮಂದಿ ಮೃತಪಟ್ಟಿದ್ದು, 65 ಮಂದಿ ಗಾಯಗೊಂಡಿದ್ದಾರೆ. 6 ಹಸುಗಳು ಮೃತಪಟ್ಟಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಭಾರಿ ಮಳೆ, ರಸ್ತೆ ಅಪಘಾತ, ಸೇತುವೆ ಕುಸಿತ, ಸಿಡಿಲು ಬಡಿದಿರುವುದು ಹಾಗೂ ಅಗ್ನಿ ಅನಾಹುತದಿಂದ ಮೃತಪಟ್ಟಿರುವವರ ಬಗ್ಗೆ ವರದಿಯಾಗಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮಹಾರಾಷ್ಟ್ರದಲ್ಲಿ ನೈಋತ್ಯ ಮಾರುತವು ಚುರುಕಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.</p>.<p>ಮುಂಬೈ ನಗರ, ರತ್ನಗಿರಿ, ಸಿಂಧುದುರ್ಗ, ರಾಯಗಢದಲ್ಲಿ ಗರಿಷ್ಠ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಎಸ್ಡಿಆರ್ಎಫ್ ತಿಳಿಸಿದೆ.</p>.<p>ಕೇರಳದಲ್ಲಿ ಭಾರಿ ಮಳೆ– ರೈಲು ಸಂಚಾರ ಅಸ್ತವ್ಯಸ್ತ: ಕೇರಳದಲ್ಲಿ ಸೋಮವಾರ ಭಾರಿ ಮಳೆ ಮುಂದುವರಿದಿದ್ದು, ರಸ್ತೆ, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. </p>.<p>ರಾಜ್ಯದ ಉತ್ತರ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ, ನದಿಗಳ ನೀರಿನ ಮಟ್ಟವು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಣ್ಣೂರು, ಕಾಸರಗೋಡು ಜಿಲ್ಲೆಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ನೂರಾರು ಮಂದಿಯನ್ನು ಮನೆಯಿಂದ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.</p>.<p>ಕಣ್ಣೂರಿನ ಕಕ್ಕಡ್ ಪ್ರದೇಶದ ಮುಖ್ಯ ರಸ್ತೆಯು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಶಾಲೆ ಹಾಗೂ ಕಚೇರಿಗೆ ತೆರಳುತ್ತಿದ್ದವರಿಗೆ ಸಮಸ್ಯೆ ಉಂಟಾಯಿತು. ರಸ್ತೆಯಲ್ಲಿ 1ರಿಂದ 2 ಅಡಿಗಳವರೆಗೆ ನೀರು ನಿಂತ ಕಾರಣ, ವಾಹನಗಳ ಸಂಚಾರಕ್ಕೂ ತೊಂದರೆ ಉಂಟಾಯಿತು.</p>.<p>ಸಿಡಿಲಿನ ಹೊಡೆತಕ್ಕೆ ಇಬ್ಬರು ಬಲಿ– ಗೊಂಡಾ, ಉತ್ತರ ಪ್ರದೇಶ (ಪಿಟಿಐ): ಗೊಂಡಾ ಜಿಲ್ಲೆಯಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ಮೃತಪಟ್ಟಿದ್ದಾರೆ.</p>.<p>ಜಿಲ್ಲೆಯ ದತ್ನಗರ ನಿವಾಸಿ ಕುನಾಲ್ ಶರ್ಮಾ (20) ಅವರು ಮನೆಯ ಮುಂಭಾಗದ ಕೈ ಪಂಪ್ನಲ್ಲಿ ನೀರು ಸಂಗ್ರಹಿಸುತ್ತಿದ್ದ ವೇಳೆ ಸಿಡಿಲಿನ ಹೊಡೆತದಿಂದಾಗಿ ಕುಸಿದುಬಿದ್ದರು. ತಕ್ಷಣವೇ ಗೊಂಡಾ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತಾದರೂ, ಅಷ್ಟು ಹೊತ್ತಿಗೆ ಅವರು ಮೃತಪಟ್ಟಿದ್ದರು. </p>.<p>ಖಾಜಿ ದೇವರ್ ಗ್ರಾಮದ ನಿವಾಸಿ ರಾಮ್ದೇವ್ ಯಾದವ್ (46) ಮಳೆ ವೇಳೆ ಮನೆಯ ಹೊರಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗ ಮಿಂಚಿನ ಹೊಡೆತಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<h2>ಮಳೆ ಅನಾಹುತ– ಎಲ್ಲೆಲ್ಲಿ ಏನು?:</h2>.<ul><li><p>ಮುಂಬೈನಲ್ಲಿ ಸಂಚಾರ ದಟ್ಟಣೆ, ಉಪನಗರ ರೈಲು, ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯ</p></li><li><p>ಪಶ್ಚಿಮ ರೈಲ್ವೆ ವಲಯದಲ್ಲಿ 30 ನಿಮಿಷ ತಡವಾಗಿ ಸಂಚರಿಸಿದ ರೈಲುಗಳು</p></li><li><p>ಮುಂಬೈನಲ್ಲಿ ಸರಾಸರಿ 9.5 ಸೆ.ಮೀ. ಮಳೆ ದಾಖಲು: ಐಎಂಡಿ</p></li></ul>.<ul><li><p>ಕೇರಳದ ಮಲಪ್ಪುರಂ ಥೆನ್ನಲದಲ್ಲಿ 21 ಸೆಂ.ಮೀ. ಮಳೆ </p></li><li><p>ವಡಕ್ಕರದಲ್ಲಿ 18 ಸೆಂ.ಮೀ. ಕಾಸರಗೋಡು, ಕಣ್ಣೂರಿನಲ್ಲಿ 16 ಸೆಂ.ಮೀ. ಮಳೆ </p></li><li><p>ಇಡುಕ್ಕಿಯಲ್ಲಿ ಗಂಟೆಗೆ 80 ಕಿ.ಮೀ. ವಯನಾಡ್–ಕೊಟ್ಟಾಯಂನಲ್ಲಿ ಗಂಟೆಗೆ 61 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ/ ತಿರುವನಂತಪುರ:</strong> ಮಹಾರಾಷ್ಟ್ರ, ಕೇರಳ ಹಾಗೂ ಉತ್ತರಪ್ರದೇಶದ ವಿವಿಧೆಡೆ ಸೋಮವಾರವೂ ಭಾರಿ ಮಳೆಯಾಗಿದೆ. </p>.<p>ಜೂನ್ 1ರಿಂದ ಇಲ್ಲಿಯವರೆಗೆ ಮಳೆ ಪರಿಣಾಮದಿಂದಾಗಿ ಮಹಾರಾಷ್ಟ್ರದಲ್ಲಿ 18 ಮಂದಿ ಮೃತಪಟ್ಟಿದ್ದು, 65 ಮಂದಿ ಗಾಯಗೊಂಡಿದ್ದಾರೆ. 6 ಹಸುಗಳು ಮೃತಪಟ್ಟಿವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಭಾರಿ ಮಳೆ, ರಸ್ತೆ ಅಪಘಾತ, ಸೇತುವೆ ಕುಸಿತ, ಸಿಡಿಲು ಬಡಿದಿರುವುದು ಹಾಗೂ ಅಗ್ನಿ ಅನಾಹುತದಿಂದ ಮೃತಪಟ್ಟಿರುವವರ ಬಗ್ಗೆ ವರದಿಯಾಗಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮಹಾರಾಷ್ಟ್ರದಲ್ಲಿ ನೈಋತ್ಯ ಮಾರುತವು ಚುರುಕಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.</p>.<p>ಮುಂಬೈ ನಗರ, ರತ್ನಗಿರಿ, ಸಿಂಧುದುರ್ಗ, ರಾಯಗಢದಲ್ಲಿ ಗರಿಷ್ಠ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಎಸ್ಡಿಆರ್ಎಫ್ ತಿಳಿಸಿದೆ.</p>.<p>ಕೇರಳದಲ್ಲಿ ಭಾರಿ ಮಳೆ– ರೈಲು ಸಂಚಾರ ಅಸ್ತವ್ಯಸ್ತ: ಕೇರಳದಲ್ಲಿ ಸೋಮವಾರ ಭಾರಿ ಮಳೆ ಮುಂದುವರಿದಿದ್ದು, ರಸ್ತೆ, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. </p>.<p>ರಾಜ್ಯದ ಉತ್ತರ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ, ನದಿಗಳ ನೀರಿನ ಮಟ್ಟವು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಣ್ಣೂರು, ಕಾಸರಗೋಡು ಜಿಲ್ಲೆಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ನೂರಾರು ಮಂದಿಯನ್ನು ಮನೆಯಿಂದ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.</p>.<p>ಕಣ್ಣೂರಿನ ಕಕ್ಕಡ್ ಪ್ರದೇಶದ ಮುಖ್ಯ ರಸ್ತೆಯು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಶಾಲೆ ಹಾಗೂ ಕಚೇರಿಗೆ ತೆರಳುತ್ತಿದ್ದವರಿಗೆ ಸಮಸ್ಯೆ ಉಂಟಾಯಿತು. ರಸ್ತೆಯಲ್ಲಿ 1ರಿಂದ 2 ಅಡಿಗಳವರೆಗೆ ನೀರು ನಿಂತ ಕಾರಣ, ವಾಹನಗಳ ಸಂಚಾರಕ್ಕೂ ತೊಂದರೆ ಉಂಟಾಯಿತು.</p>.<p>ಸಿಡಿಲಿನ ಹೊಡೆತಕ್ಕೆ ಇಬ್ಬರು ಬಲಿ– ಗೊಂಡಾ, ಉತ್ತರ ಪ್ರದೇಶ (ಪಿಟಿಐ): ಗೊಂಡಾ ಜಿಲ್ಲೆಯಲ್ಲಿ ಸಿಡಿಲಿನ ಹೊಡೆತಕ್ಕೆ ಇಬ್ಬರು ಮೃತಪಟ್ಟಿದ್ದಾರೆ.</p>.<p>ಜಿಲ್ಲೆಯ ದತ್ನಗರ ನಿವಾಸಿ ಕುನಾಲ್ ಶರ್ಮಾ (20) ಅವರು ಮನೆಯ ಮುಂಭಾಗದ ಕೈ ಪಂಪ್ನಲ್ಲಿ ನೀರು ಸಂಗ್ರಹಿಸುತ್ತಿದ್ದ ವೇಳೆ ಸಿಡಿಲಿನ ಹೊಡೆತದಿಂದಾಗಿ ಕುಸಿದುಬಿದ್ದರು. ತಕ್ಷಣವೇ ಗೊಂಡಾ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತಾದರೂ, ಅಷ್ಟು ಹೊತ್ತಿಗೆ ಅವರು ಮೃತಪಟ್ಟಿದ್ದರು. </p>.<p>ಖಾಜಿ ದೇವರ್ ಗ್ರಾಮದ ನಿವಾಸಿ ರಾಮ್ದೇವ್ ಯಾದವ್ (46) ಮಳೆ ವೇಳೆ ಮನೆಯ ಹೊರಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗ ಮಿಂಚಿನ ಹೊಡೆತಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<h2>ಮಳೆ ಅನಾಹುತ– ಎಲ್ಲೆಲ್ಲಿ ಏನು?:</h2>.<ul><li><p>ಮುಂಬೈನಲ್ಲಿ ಸಂಚಾರ ದಟ್ಟಣೆ, ಉಪನಗರ ರೈಲು, ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯ</p></li><li><p>ಪಶ್ಚಿಮ ರೈಲ್ವೆ ವಲಯದಲ್ಲಿ 30 ನಿಮಿಷ ತಡವಾಗಿ ಸಂಚರಿಸಿದ ರೈಲುಗಳು</p></li><li><p>ಮುಂಬೈನಲ್ಲಿ ಸರಾಸರಿ 9.5 ಸೆ.ಮೀ. ಮಳೆ ದಾಖಲು: ಐಎಂಡಿ</p></li></ul>.<ul><li><p>ಕೇರಳದ ಮಲಪ್ಪುರಂ ಥೆನ್ನಲದಲ್ಲಿ 21 ಸೆಂ.ಮೀ. ಮಳೆ </p></li><li><p>ವಡಕ್ಕರದಲ್ಲಿ 18 ಸೆಂ.ಮೀ. ಕಾಸರಗೋಡು, ಕಣ್ಣೂರಿನಲ್ಲಿ 16 ಸೆಂ.ಮೀ. ಮಳೆ </p></li><li><p>ಇಡುಕ್ಕಿಯಲ್ಲಿ ಗಂಟೆಗೆ 80 ಕಿ.ಮೀ. ವಯನಾಡ್–ಕೊಟ್ಟಾಯಂನಲ್ಲಿ ಗಂಟೆಗೆ 61 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>