ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಭಾರಿ ಮಳೆ: ದೇಶದಾದ್ಯಂತ ಒಟ್ಟು 24 ಮಂದಿ ಸಾವು

Published : 1 ಆಗಸ್ಟ್ 2024, 14:08 IST
Last Updated : 1 ಆಗಸ್ಟ್ 2024, 14:08 IST
ಫಾಲೋ ಮಾಡಿ
Comments
ದೆಹಲಿಯಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣ ನಗರದ ಹ್ಯಾಪಿ ಶಾಲೆಯ ಗೋಡೆ ಕುಸಿದಿದೆ. ಇದರಿಂದಾಗಿ ಶಾಲೆಯ ಮುಂದೆ ನಿಲ್ಲಿಸಿದ್ದ ಕಾರುಗಳು ಜಖಂಗೊಂಡಿವೆ –ಪಿಟಿಐ ಚಿತ್ರ
ದೆಹಲಿಯಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣ ನಗರದ ಹ್ಯಾಪಿ ಶಾಲೆಯ ಗೋಡೆ ಕುಸಿದಿದೆ. ಇದರಿಂದಾಗಿ ಶಾಲೆಯ ಮುಂದೆ ನಿಲ್ಲಿಸಿದ್ದ ಕಾರುಗಳು ಜಖಂಗೊಂಡಿವೆ –ಪಿಟಿಐ ಚಿತ್ರ
ಕೇದಾರನಾಥಕ್ಕೆ ತೆರಳುವ ಮಾರ್ಗ ಮಧ್ಯದ ಭೀಮ್‌ಬಲಿ ಚೌಕಿ ಬಳಿ ಬೆಟ್ಟ ಕುಸಿದಿದೆ. ಎನ್‌ಡಿಆರ್‌ಎಫ್‌ ಸಿಬ್ಬಂದಿ ಗುರುವಾರ ರಕ್ಷಣಾ ಕಾರ್ಯಾಚರಣೆ ನಡೆಸಿದರು –ಪಿಟಿಐ ಚಿತ್ರ
ಕೇದಾರನಾಥಕ್ಕೆ ತೆರಳುವ ಮಾರ್ಗ ಮಧ್ಯದ ಭೀಮ್‌ಬಲಿ ಚೌಕಿ ಬಳಿ ಬೆಟ್ಟ ಕುಸಿದಿದೆ. ಎನ್‌ಡಿಆರ್‌ಎಫ್‌ ಸಿಬ್ಬಂದಿ ಗುರುವಾರ ರಕ್ಷಣಾ ಕಾರ್ಯಾಚರಣೆ ನಡೆಸಿದರು –ಪಿಟಿಐ ಚಿತ್ರ
ಮಾರ್ಗಮಧ್ಯೆ ಸಿಲುಕಿದ 450 ಕೇದಾರನಾಥ ಯಾತ್ರಿಗಳು
ಗೌರಿಕುಂಡ–ಕೇದಾರನಾಥ ಚಾರಣ ಮಾರ್ಗದಲ್ಲಿ ಸುಮಾರು 450 ಯಾತ್ರಿಗಳು ಸಿಲುಕಿಕೊಂಡಿದ್ದಾರೆ. ಈ ಮಾರ್ಗದ ಸುಮಾರು 20–25 ಮೀಟರ್‌ ಉದ್ದದ ರಸ್ತೆ ಮಾರ್ಗವು ಭೂಕುಸಿತದಿಂದ ಹಾನಿಗೊಳಗಾಗಿದೆ. ಸಂಚಾರ ರದ್ದುಗೊಂಡಿದೆ. ಕೇದಾರನಾಥ ಮಾರ್ಗದಲ್ಲಿನ ಭೀಮ್‌ಬಲಿ ಚೌಕಿ ಬಳಿ ಸುಮಾರು 200 ಯಾತ್ರಿಗಳು ಸಿಲುಕಿಕೊಂಡಿದ್ದರು. ಇವರನ್ನು ರಕ್ಷಿಸಲಾಗಿದ್ದು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಈ ಮಾರ್ಗದಲ್ಲಿ ರಸ್ತೆಗಳ ಮೇಲೆ ಬಂಡೆಗಳು ಉರುಳುತ್ತಿವೆ. ‘ಹವಾಮಾನವು ಸಹಜ ಸ್ಥಿತಿಗೆ ಬರುವವರೆಗೆ ಕೇದಾರನಾಥ ಯಾತ್ರಿಗಳು ಸುರಕ್ಷಿತ ಪ್ರದೇಶದಲ್ಲಿಯೇ ಇರಬೇಕು. ಕೇದಾರನಾಥ ಮಾರ್ಗದ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಈ ರಸ್ತೆಗಳು ಸಂಚಾರಕ್ಕೆ ಯೋಗ್ಯವಾಗುವವರೆಗೂ ಯಾವ ಯಾತ್ರಿಗಳೂ ಯಾತ್ರೆ ಹೊರಡಬಾರದು’ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT