<p><strong>ತಿರುವನಂತಪುರ/ಚೆನ್ನೈ:</strong> ಕೇರಳ ಮತ್ತು ತಮಿಳುನಾಡಿನ ‘ರಾಜಭವನ’ವನ್ನು ‘ಲೋಕಭವನ’ ಎಂದು ಸೋಮವಾರ ಅಧಿಕೃತವಾಗಿ ಮರುನಾಮಕರಣ ಮಾಡಲಾಯಿತು.</p><p>ದೇಶದ ಎಲ್ಲ ರಾಜಭವನಗಳನ್ನು ಲೋಕಭವನ ಹಾಗೂ ರಾಜ್ಯನಿವಾಸವನ್ನು ‘ಲೋಕನಿವಾಸ’ (ಲೆಫ್ಟಿನೆಂಟ್ ಗವರ್ನರ್ ಅಧಿಕೃತ ನಿವಾಸ) ಎಂದು ಮರುನಾಮಕರಣ ಮಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ನೀಡಿರುವ ನಿರ್ದೇಶನದಂತೆ ಹೆಸರು ಬದಲಾವಣೆ ಮಾಡಲಾಗಿದೆ.</p><p>‘ಹೆಸರು ಬದಲಾವಣೆ ಪ್ರಕ್ರಿಯೆಯು ವಸಾಹತುಶಾಹಿ ಮನಸ್ಥಿತಿಯಿಂದ ಪ್ರಜಾಪ್ರಭುತ್ವ ಚಿಂತನೆಗಳ ಕಡೆಗಿನ ಪಯಣದಲ್ಲಿ ಮಹತ್ವದ ಮೈಲುಗಲ್ಲು ಆಗಿದೆ’ ಎಂದು ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ತಿಳಿಸಿದ್ದಾರೆ. </p><p>‘ಮರುನಾಮಕರಣದ ಮೂಲಕ ಜನಕೇಂದ್ರಿತ ಆಡಳಿತ ಮತ್ತು ಸಾರ್ವಜನಿಕ ಸಹಭಾಗಿತ್ವದ ಬದ್ಧತೆಯನ್ನು ಮುಂದುವರಿಸಲಾಗುತ್ತದೆ’ ಎಂದು ತಮಿಳುನಾಡು ರಾಜ್ಯಪಾಲರ ಕಚೇರಿ ತಿಳಿಸಿದೆ.</p><p>ರಾಜಭವನವನ್ನು ಲೋಕಭವನ ಎಂದು ನಾಮಕರಣ ಮಾಡುವ ಬಗ್ಗೆ 2022ರಲ್ಲಿ ನಡೆದ ಅಖಿಲ ಭಾರತ ರಾಜ್ಯಪಾಲರ ಸಮಾವೇಶದಲ್ಲಿ ಅರ್ಲೇಕರ್ ಮೊದಲ ಬಾರಿಗೆ ಪ್ರಸ್ತಾಪ ಮಾಡಿದ್ದರು. ಆಗ ಅವರು ಬಿಹಾರ ರಾಜ್ಯಪಾಲರಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ/ಚೆನ್ನೈ:</strong> ಕೇರಳ ಮತ್ತು ತಮಿಳುನಾಡಿನ ‘ರಾಜಭವನ’ವನ್ನು ‘ಲೋಕಭವನ’ ಎಂದು ಸೋಮವಾರ ಅಧಿಕೃತವಾಗಿ ಮರುನಾಮಕರಣ ಮಾಡಲಾಯಿತು.</p><p>ದೇಶದ ಎಲ್ಲ ರಾಜಭವನಗಳನ್ನು ಲೋಕಭವನ ಹಾಗೂ ರಾಜ್ಯನಿವಾಸವನ್ನು ‘ಲೋಕನಿವಾಸ’ (ಲೆಫ್ಟಿನೆಂಟ್ ಗವರ್ನರ್ ಅಧಿಕೃತ ನಿವಾಸ) ಎಂದು ಮರುನಾಮಕರಣ ಮಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯ ನೀಡಿರುವ ನಿರ್ದೇಶನದಂತೆ ಹೆಸರು ಬದಲಾವಣೆ ಮಾಡಲಾಗಿದೆ.</p><p>‘ಹೆಸರು ಬದಲಾವಣೆ ಪ್ರಕ್ರಿಯೆಯು ವಸಾಹತುಶಾಹಿ ಮನಸ್ಥಿತಿಯಿಂದ ಪ್ರಜಾಪ್ರಭುತ್ವ ಚಿಂತನೆಗಳ ಕಡೆಗಿನ ಪಯಣದಲ್ಲಿ ಮಹತ್ವದ ಮೈಲುಗಲ್ಲು ಆಗಿದೆ’ ಎಂದು ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ತಿಳಿಸಿದ್ದಾರೆ. </p><p>‘ಮರುನಾಮಕರಣದ ಮೂಲಕ ಜನಕೇಂದ್ರಿತ ಆಡಳಿತ ಮತ್ತು ಸಾರ್ವಜನಿಕ ಸಹಭಾಗಿತ್ವದ ಬದ್ಧತೆಯನ್ನು ಮುಂದುವರಿಸಲಾಗುತ್ತದೆ’ ಎಂದು ತಮಿಳುನಾಡು ರಾಜ್ಯಪಾಲರ ಕಚೇರಿ ತಿಳಿಸಿದೆ.</p><p>ರಾಜಭವನವನ್ನು ಲೋಕಭವನ ಎಂದು ನಾಮಕರಣ ಮಾಡುವ ಬಗ್ಗೆ 2022ರಲ್ಲಿ ನಡೆದ ಅಖಿಲ ಭಾರತ ರಾಜ್ಯಪಾಲರ ಸಮಾವೇಶದಲ್ಲಿ ಅರ್ಲೇಕರ್ ಮೊದಲ ಬಾರಿಗೆ ಪ್ರಸ್ತಾಪ ಮಾಡಿದ್ದರು. ಆಗ ಅವರು ಬಿಹಾರ ರಾಜ್ಯಪಾಲರಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>