<p><strong>ಮುಂಬೈ:</strong> ಪ್ರಯಾಗರಾಜ್ನ ಗಂಗಾ ನದಿಯ ತಟದ ಸಂಗಮದಲ್ಲಿ ನಡೆದ ಮಹಾಕುಂಭಮೇಳದಿಂದ ಆಪ್ತರೊಬ್ಬರು ತಂದಿದ್ದ ಗಂಗಾಜಲವನ್ನು ಮುಟ್ಟಿ ನೋಡಲು ನಿರಾಕರಿಸಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾದ ಅಧ್ಯಕ್ಷ ರಾಜ್ ಠಾಕ್ರೆ ಹೇಳಿದ್ದಾರೆ.</p><p>ಪುಣೆಯ ಪಿಂಪ್ರಿ– ಚಿಂಚವಾಡ್ನಲ್ಲಿ ಏರ್ಪಡಿಸಿದ್ದ ಪಕ್ಷದ 19 ವರ್ಷಾಚರಣೆಯಲ್ಲಿ ಮಾತನಾಡಿದ ಅವರು, ಎಂಎನ್ಎಸ್ ಪಕ್ಷದ ನಾಯಕ ಬಾಲ ನಂದಗಾಂವ್ಕರ್ ಅವರು ಗಂಗಾಜಲವನ್ನು ತಂದುಕೊಟ್ಟಿದ್ದರು. ಅದನ್ನು ನಾನು ಮುಟ್ಟಿಯೂ ನೋಡಲಿಲ್ಲ ಎಂದರು.</p><p>ಜನರು ಮೂಢನಂಬಿಕೆ ಬಗ್ಗೆ ಎಚ್ಚರದಿಂದ ಇರಬೇಕು. ನಂಬಿಕೆ ಹಾಗೂ ಮೂಡನಂಬಿಕೆಯ ವ್ಯತ್ಯಾಸವನ್ನು ತಿಳಿದಿರಬೇಕು’ ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.</p><p>ಬಿಜೆಪಿ ಜೊತೆಗೆ ನಿಕಟ ಸಂಪರ್ಕ ಹೊಂದಿರುವ ರಾಜ್ ಅವರ ಈ ಹೇಳಿಕೆಗೆ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಹಾಗೂ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಪ್ರಯಾಗರಾಜ್ನ ಗಂಗಾ ನದಿಯ ತಟದ ಸಂಗಮದಲ್ಲಿ ನಡೆದ ಮಹಾಕುಂಭಮೇಳದಿಂದ ಆಪ್ತರೊಬ್ಬರು ತಂದಿದ್ದ ಗಂಗಾಜಲವನ್ನು ಮುಟ್ಟಿ ನೋಡಲು ನಿರಾಕರಿಸಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾದ ಅಧ್ಯಕ್ಷ ರಾಜ್ ಠಾಕ್ರೆ ಹೇಳಿದ್ದಾರೆ.</p><p>ಪುಣೆಯ ಪಿಂಪ್ರಿ– ಚಿಂಚವಾಡ್ನಲ್ಲಿ ಏರ್ಪಡಿಸಿದ್ದ ಪಕ್ಷದ 19 ವರ್ಷಾಚರಣೆಯಲ್ಲಿ ಮಾತನಾಡಿದ ಅವರು, ಎಂಎನ್ಎಸ್ ಪಕ್ಷದ ನಾಯಕ ಬಾಲ ನಂದಗಾಂವ್ಕರ್ ಅವರು ಗಂಗಾಜಲವನ್ನು ತಂದುಕೊಟ್ಟಿದ್ದರು. ಅದನ್ನು ನಾನು ಮುಟ್ಟಿಯೂ ನೋಡಲಿಲ್ಲ ಎಂದರು.</p><p>ಜನರು ಮೂಢನಂಬಿಕೆ ಬಗ್ಗೆ ಎಚ್ಚರದಿಂದ ಇರಬೇಕು. ನಂಬಿಕೆ ಹಾಗೂ ಮೂಡನಂಬಿಕೆಯ ವ್ಯತ್ಯಾಸವನ್ನು ತಿಳಿದಿರಬೇಕು’ ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.</p><p>ಬಿಜೆಪಿ ಜೊತೆಗೆ ನಿಕಟ ಸಂಪರ್ಕ ಹೊಂದಿರುವ ರಾಜ್ ಅವರ ಈ ಹೇಳಿಕೆಗೆ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಹಾಗೂ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>