2018ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಸರ್ಕಾರ ರಚಿಸುವ ವೇಳೆ ಸಚಿನ್ ಪೈಲಟ್ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಲು ಗುಜ್ಜಾರ್ ಸಮುದಾಯ ಬಯಸಿತ್ತು. ಆದರೆ, ಅಶೋಕ್ ಗೆಹಲೋತ್ ಅವರನ್ನು ಪಕ್ಷವು ಮುಖ್ಯಮಂತ್ರಿ ಸ್ಥಾನಕ್ಕೇರಿಸಿತು. ಇದನ್ನು ಸಮುದಾಯಕ್ಕೆ ಬಗೆದ ದ್ರೋಹ ಎಂದು ಪರಿಗಣಿಸಿದ ಹಲವರು ತಮ್ಮ ನಿಷ್ಠೆಯನ್ನು ಬಿಜೆಪಿಯತ್ತ ತಿರುಗಿಸಿದರು. ಪೈಲಟ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂದು ನಂಬಿದ ಇನ್ನೂ ಹಲವರು ಕಾಂಗ್ರೆಸ್ಗೇ ತಮ್ಮ ನಿಷ್ಠೆ ಮುಂದುವರೆಸಿದರು.