<p><strong>ಮುಂಬೈ:</strong> ರೈಲ್ವೆ ನೇಮಕಾತಿ ಪರೀಕ್ಷೆ ವೇಳೆ ಹಿಂಸಾಚಾರ ನಡೆಸಿ ಆಕಾಂಕ್ಷಿಗಳ ಮೇಲೆ ದಾಳಿ ನಡೆಸಿದ್ದ ಪ್ರಕರಣದಲ್ಲಿ ಎಂಎನ್ಎಸ್ ಸ್ಥಾಪಕ ರಾಜ್ ಠಾಕ್ರೆ ಖುಲಾಸೆಗೊಂಡಿದ್ದಾರೆ. </p><p>ಎರಡು ದಶಕಗಳ ಹಳೆಯದಾದ ಈ ಪ್ರಕರಣದಲ್ಲಿ ರಾಜ್ ಠಾಕ್ರೆ ಅವರ ಹೆಸರನ್ನು ಕೈಬಿಡಲಾಗಿದೆ. ಈ ಮೂಲಕ ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಘಟನೆಗೆ ಕಾನೂನಾತ್ಮಕ ತೆರೆ ಬಿದ್ದಂತಾಗಿದೆ.</p><p>2008ರಲ್ಲಿ ಈ ಘಟನೆ ನಡೆದಿತ್ತು. ಠಾಣೆ ಜಿಲ್ಲೆಯ ಕಲ್ಯಾಣ ರೈಲ್ವೆ ನಿಲ್ದಾಣದಲ್ಲಿ ಎಂಎನ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಉತ್ತರ ಭಾರತದ ಉದ್ಯೋಗಾಂಕ್ಷಿಗಳ ಮೇಲೆ ಅವರು ದಾಳಿ ನಡೆಸಿದ್ದರು. ಈ ಘಟನೆ ನಡೆದಾಗ ರಾಜ್ ಠಾಕ್ರೆ ಅವರು ತಮ್ಮ ಪಕ್ಷ ಆರಂಭಿಸಿ ಎರಡು ವರ್ಷವಾಗಿತ್ತಷ್ಟೆ.</p><p>ರಾಜ್ ಠಾಕ್ರೆ ಸೇರಿ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಯುತ್ತಿದ್ದ ಇಷ್ಟು ವರ್ಷಗಳಲ್ಲಿ ಅವಧಿಯಲ್ಲಿ ಇಬ್ಬರು ಆರೋಪಿಗಳು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ರೈಲ್ವೆ ನೇಮಕಾತಿ ಪರೀಕ್ಷೆ ವೇಳೆ ಹಿಂಸಾಚಾರ ನಡೆಸಿ ಆಕಾಂಕ್ಷಿಗಳ ಮೇಲೆ ದಾಳಿ ನಡೆಸಿದ್ದ ಪ್ರಕರಣದಲ್ಲಿ ಎಂಎನ್ಎಸ್ ಸ್ಥಾಪಕ ರಾಜ್ ಠಾಕ್ರೆ ಖುಲಾಸೆಗೊಂಡಿದ್ದಾರೆ. </p><p>ಎರಡು ದಶಕಗಳ ಹಳೆಯದಾದ ಈ ಪ್ರಕರಣದಲ್ಲಿ ರಾಜ್ ಠಾಕ್ರೆ ಅವರ ಹೆಸರನ್ನು ಕೈಬಿಡಲಾಗಿದೆ. ಈ ಮೂಲಕ ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಘಟನೆಗೆ ಕಾನೂನಾತ್ಮಕ ತೆರೆ ಬಿದ್ದಂತಾಗಿದೆ.</p><p>2008ರಲ್ಲಿ ಈ ಘಟನೆ ನಡೆದಿತ್ತು. ಠಾಣೆ ಜಿಲ್ಲೆಯ ಕಲ್ಯಾಣ ರೈಲ್ವೆ ನಿಲ್ದಾಣದಲ್ಲಿ ಎಂಎನ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಉತ್ತರ ಭಾರತದ ಉದ್ಯೋಗಾಂಕ್ಷಿಗಳ ಮೇಲೆ ಅವರು ದಾಳಿ ನಡೆಸಿದ್ದರು. ಈ ಘಟನೆ ನಡೆದಾಗ ರಾಜ್ ಠಾಕ್ರೆ ಅವರು ತಮ್ಮ ಪಕ್ಷ ಆರಂಭಿಸಿ ಎರಡು ವರ್ಷವಾಗಿತ್ತಷ್ಟೆ.</p><p>ರಾಜ್ ಠಾಕ್ರೆ ಸೇರಿ ಎಂಟು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಯುತ್ತಿದ್ದ ಇಷ್ಟು ವರ್ಷಗಳಲ್ಲಿ ಅವಧಿಯಲ್ಲಿ ಇಬ್ಬರು ಆರೋಪಿಗಳು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>