<p><strong>ಜೈಪುರ</strong>: ರಾಜಸ್ಥಾನದ ಮಾಜಿ ಸಚಿವ ಹಾಗೂ ಬಿಜೆಪಿ ಬಂಡಾಯ ನಾಯಕ ರಾಜಪಾಲ್ ಸಿಂಗ್ ಶೇಖಾವತ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಝೋತ್ವಾರಾ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ಇಂದು (ಗುರುವಾರ) ಹಿಂಪಡೆದಿದ್ದಾರೆ.</p><p>‘ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವುದು ಅಗತ್ಯವಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು ಮುಖ್ಯವಾಗಿದೆ. ಆದ್ದರಿಂದ ನಾನು ನಾಮಪತ್ರವನ್ನು ಹಿಂಪಡೆದಿದ್ದೇನೆ. ಅಮಿತ್ ಶಾ ಅವರೊಂದಿಗೆ ಮಾತನಾಡಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದೇನೆ‘ ಎಂದು ಶೇಖಾವತ್ ಹೇಳಿದ್ದಾರೆ.</p><p>ಜೈಪುರ ಗ್ರಾಮಾಂತರ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಝೋತ್ವಾರಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿತ್ತು. ಇದು ಶೇಖಾವತ್ ಮತ್ತು ಅವರ ಬೆಂಬಲಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.</p><p>ರಾಜಸ್ಥಾನದಲ್ಲಿ ಇದೇ 25ರಂದು ಚುನಾವಣೆ ನಡೆಯಲಿದೆ. ಇಂದು ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನವಾಗಿದೆ.</p><p>ಮಾಜಿ ಸಿಎಂ ವಸುಂಧರಾ ರಾಜೇ ಅವರ ಆಪ್ತರಾಗಿದ್ದ ಶೇಖಾವತ್, ರಾಜೇ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದರು.</p><p>ಎನ್ಎಸ್ಯುಐ ರಾಜ್ಯಾಧ್ಯಕ್ಷ ಅಭಿಷೇಕ್ ಚೌಧರಿ ಅವರನ್ನು ಝೋತ್ವಾರಾ ಕ್ಷೇತ್ರದಿಂದ ಕಾಂಗ್ರೆಸ್ ಕಣಕ್ಕಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನದ ಮಾಜಿ ಸಚಿವ ಹಾಗೂ ಬಿಜೆಪಿ ಬಂಡಾಯ ನಾಯಕ ರಾಜಪಾಲ್ ಸಿಂಗ್ ಶೇಖಾವತ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಝೋತ್ವಾರಾ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ಇಂದು (ಗುರುವಾರ) ಹಿಂಪಡೆದಿದ್ದಾರೆ.</p><p>‘ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವುದು ಅಗತ್ಯವಾಗಿದ್ದು, ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು ಮುಖ್ಯವಾಗಿದೆ. ಆದ್ದರಿಂದ ನಾನು ನಾಮಪತ್ರವನ್ನು ಹಿಂಪಡೆದಿದ್ದೇನೆ. ಅಮಿತ್ ಶಾ ಅವರೊಂದಿಗೆ ಮಾತನಾಡಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದೇನೆ‘ ಎಂದು ಶೇಖಾವತ್ ಹೇಳಿದ್ದಾರೆ.</p><p>ಜೈಪುರ ಗ್ರಾಮಾಂತರ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರನ್ನು ಝೋತ್ವಾರಾ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿತ್ತು. ಇದು ಶೇಖಾವತ್ ಮತ್ತು ಅವರ ಬೆಂಬಲಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.</p><p>ರಾಜಸ್ಥಾನದಲ್ಲಿ ಇದೇ 25ರಂದು ಚುನಾವಣೆ ನಡೆಯಲಿದೆ. ಇಂದು ನಾಮಪತ್ರ ವಾಪಾಸ್ ಪಡೆಯಲು ಕೊನೆ ದಿನವಾಗಿದೆ.</p><p>ಮಾಜಿ ಸಿಎಂ ವಸುಂಧರಾ ರಾಜೇ ಅವರ ಆಪ್ತರಾಗಿದ್ದ ಶೇಖಾವತ್, ರಾಜೇ ಸಂಪುಟದಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದರು.</p><p>ಎನ್ಎಸ್ಯುಐ ರಾಜ್ಯಾಧ್ಯಕ್ಷ ಅಭಿಷೇಕ್ ಚೌಧರಿ ಅವರನ್ನು ಝೋತ್ವಾರಾ ಕ್ಷೇತ್ರದಿಂದ ಕಾಂಗ್ರೆಸ್ ಕಣಕ್ಕಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>