ಮುಂದುವರಿದು, 'ಭ್ರಷ್ಟಾಚಾರದಿಂದ ಕೂಡಿದ ಬಿಜೆಪಿಯ ದುರಾಡಳಿತವನ್ನೂ ಜನರು ನೆನಪಿಸಿಕೊಳ್ಳಬೇಕು. ಆ ಪಕ್ಷದ ನಾಯಕರು ಜಾತಿ–ಜಾತಿಗಳನ್ನು, ಧರ್ಮ–ಧರ್ಮಗಳನ್ನು ಎತ್ತಿಕಟ್ಟುವುದರಲ್ಲಿ ಹಾಗೂ ರಾಜ್ಯದ ಬೊಕ್ಕಸ ಲೂಟಿ ಮಾಡುವುದರಲ್ಲಿ ನಿರತರಾಗಿದ್ದರು' ಎಂದು ದೂರಿದ್ದಾರೆ.
'ಚುನಾವಣೆ ವೇಳೆ ನೀಡಿರುವ ಎಳೂ ಗ್ಯಾರಂಟಿಗಳನ್ನು ನಾವು ಅಧಿಕಾರಕ್ಕೆ ಮರಳುತ್ತಿದ್ದಂತೆ ಪೂರೈಸುತ್ತೇವೆ. ಕರ್ನಾಟದಲ್ಲಿ ಈಗಾಗಲೇ ಅದನ್ನು ಮಾಡಿದ್ದೇವೆ. ಅದೇರೀತಿ ರಾಜಸ್ಥಾನದಲ್ಲಿಯೂ ಮಾಡುತ್ತೇವೆ' ಎಂದಿದ್ದಾರೆ.
ಡಿಸೆಂಬರ್ 3ಕ್ಕೆ ಫಲಿತಾಂಶ
ರಾಜಸ್ಥಾನ ವಿಧಾನಸಭೆಯು 200 ಸದಸ್ಯ ಬಲ ಹೊಂದಿದ್ದು, ಒಂದು ಸ್ಥಾನ ಹೊರತುಪಡಿಸಿ ಉಳಿದ 199 ಕ್ಷೇತ್ರಗಳಿಗೆ ಇಂದು (ನವೆಂಬರ್ 25ರಂದು) ಮತದಾನ ನಡೆಯುತ್ತಿದೆ.
ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗುರ್ಮೀತ್ ಸಿಂಗ್ ಕೊನೂರ್ ಅವರು ನಿಧನರಾದ ಹಿನ್ನೆಲೆಯಲ್ಲಿ ಶ್ರೀಗಂಗಾನಗರದ ಕರಣ್ಪುರ ಕ್ಷೇತ್ರದಲ್ಲಿ ಮತದಾನ ಮುಂದೂಡಲಾಗಿದೆ. ಡಿಸೆಂಬರ್ 3ರಂದು ಫಲಿತಾಂಶ ಹೊರಬೀಳಲಿದೆ.