‘ಅಕ್ಟೋಬರ್ 20ರಂದು ದೌಸಾದಲ್ಲಿ ನಡೆದ ಸಭೆಯಲ್ಲಿ ಪ್ರಿಯಾಂಕಾ ಅವರು, ಬಿಜೆಪಿಯು ಜನರ ಕಲ್ಯಾಣದ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂದು ಆರೋಪಿಸಿದ್ದರು. ಪ್ರಧಾನಿ ವಿರುದ್ಧ ದುರುದ್ದೇಶಪೂರಿತ ಸುಳ್ಳು ಹೇಳಿಕೆಗಳನ್ನು ನೀಡಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಚುನಾವಣಾ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ಆಗ್ರಹಿಸಿದ್ದಾರೆ.