ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೆಘವಾಲ್, ಗಜೇಂದ್ರ ಸಿಂಗ್ ಶೇಖಾವತ್, ಅಶ್ವಿನಿ ವೈಷ್ಣವ್ ಸಿಎಂ ಗಾದಿ ರೇಸ್ನಲ್ಲಿದ್ದಾರೆ.
200 ಸದಸ್ಯ ಬಲದ ರಾಜಸ್ಥಾನದ ವಿಧಾನಸಭೆಯ 199 ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 115 ಕಡೆ ಗೆಲುವು ಸಾಧಿಸಿ, ಸರ್ಕಾರ ರಚಿಸಲು ಬಹುಮತ ಪಡೆದುಕೊಂಡಿದೆ.
ಶ್ರೀಗಂಗಾನಗರದ ಕರಣಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ, ಹಾಲಿ ಶಾಸಕ ಗುರ್ಮೀತ್ ಸಿಂಗ್ ಕೂನಾರ್ ನಿಧನದಿಂದಾಗಿ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.