<p><strong>ಜೈಪುರ: </strong>ಪಕ್ಷದ ಶಾಸಕಾಂಗ ಸಭೆಗೆ ಗೈರಾದರು ಎಂಬ ಕಾರಣಕ್ಕೆ ಕಾಂಗ್ರೆಸ್ನ ಬಂಡಾಯ ಮುಖಂಡ ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿಗರಿಗೆ ಸಭಾಧ್ಯಕ್ಷರು ಅನರ್ಹತೆಯ ನೋಟಿಸ್ ಜಾರಿ ಮಾಡಿರುವುದನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಪ್ರಶ್ನಿಸಿದ್ದಾರೆ.</p>.<p>ಕಾಂಗ್ರೆಸ್ ಪಕ್ಷದ ಆಗ್ರಹದ ಮೇರೆಗೆ ರಾಜಸ್ಥಾನದ ಸಭಾಧ್ಯಕ್ಷರು ಅನರ್ಹತೆಯ ನೋಟಿಸ್ ನೀಡಿದ್ದರು. ಈ ನೋಟಿಸ್ಗೆ ಶುಕ್ರವಾರದೊಳಗೆ ಉತ್ತರಿಸಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ‘ಶಾಸಕಾಂಗ ಸಭೆಗೆ ಹಾಜರಾಗಿಲ್ಲ ಎಂಬ ಕಾರಣಕ್ಕೆ ಅನರ್ಹತೆಯ ನೋಟಿಸ್ ನೀಡಿದ್ದಾರೆ. ಇದು ಕಾರಣವೇ ಅಲ್ಲ. ವಿಧಾನಸಭೆ ಸಭಾಧ್ಯಕ್ಷರ ದುರುದ್ದೇಶವನ್ನು ತೋರಿಸುತ್ತದೆ. ಸಾಂವಿಧಾನಿಕ ಮಿತಿ ಮೀರದಂತೆ ಬಿಜೆಪಿ ನೋಡಿಕೊಳ್ಳಲಿದೆ’ ಎಂದರು.</p>.<p>ಪಕ್ಷದವಿಪ್ ಉಲ್ಲಂಘನೆಯಾದಲ್ಲಿ ಮಾತ್ರ ಸಭಾಧ್ಯಕ್ಷರು ಶಾಸಕರ ಮೇಲೆ ಕ್ರಮ ಕೈಗೊಳ್ಳಲು ಅವಕಾಶವಿರುತ್ತದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಗುಲಾಬ್ ಚಂದ್ ಕಠಾರಿಯಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ಪಕ್ಷದ ಶಾಸಕಾಂಗ ಸಭೆಗೆ ಗೈರಾದರು ಎಂಬ ಕಾರಣಕ್ಕೆ ಕಾಂಗ್ರೆಸ್ನ ಬಂಡಾಯ ಮುಖಂಡ ಸಚಿನ್ ಪೈಲಟ್ ಹಾಗೂ ಅವರ ಬೆಂಬಲಿಗರಿಗೆ ಸಭಾಧ್ಯಕ್ಷರು ಅನರ್ಹತೆಯ ನೋಟಿಸ್ ಜಾರಿ ಮಾಡಿರುವುದನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಪ್ರಶ್ನಿಸಿದ್ದಾರೆ.</p>.<p>ಕಾಂಗ್ರೆಸ್ ಪಕ್ಷದ ಆಗ್ರಹದ ಮೇರೆಗೆ ರಾಜಸ್ಥಾನದ ಸಭಾಧ್ಯಕ್ಷರು ಅನರ್ಹತೆಯ ನೋಟಿಸ್ ನೀಡಿದ್ದರು. ಈ ನೋಟಿಸ್ಗೆ ಶುಕ್ರವಾರದೊಳಗೆ ಉತ್ತರಿಸಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ‘ಶಾಸಕಾಂಗ ಸಭೆಗೆ ಹಾಜರಾಗಿಲ್ಲ ಎಂಬ ಕಾರಣಕ್ಕೆ ಅನರ್ಹತೆಯ ನೋಟಿಸ್ ನೀಡಿದ್ದಾರೆ. ಇದು ಕಾರಣವೇ ಅಲ್ಲ. ವಿಧಾನಸಭೆ ಸಭಾಧ್ಯಕ್ಷರ ದುರುದ್ದೇಶವನ್ನು ತೋರಿಸುತ್ತದೆ. ಸಾಂವಿಧಾನಿಕ ಮಿತಿ ಮೀರದಂತೆ ಬಿಜೆಪಿ ನೋಡಿಕೊಳ್ಳಲಿದೆ’ ಎಂದರು.</p>.<p>ಪಕ್ಷದವಿಪ್ ಉಲ್ಲಂಘನೆಯಾದಲ್ಲಿ ಮಾತ್ರ ಸಭಾಧ್ಯಕ್ಷರು ಶಾಸಕರ ಮೇಲೆ ಕ್ರಮ ಕೈಗೊಳ್ಳಲು ಅವಕಾಶವಿರುತ್ತದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಗುಲಾಬ್ ಚಂದ್ ಕಠಾರಿಯಾ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>