ಈ ಬಗ್ಗೆ ಸೋಮವಾರ ಮಾತನಾಡಿದ್ದರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ಅವರು, ಕಾಂಗ್ರೆಸ್ ಸರ್ಕಾರವು ಬಹುಮತ ಹೊಂದಿದೆ. ಕೋವಿಡ್–19 ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ವಿಧಾನಸಭೆ ಅಧಿವೇಶನ ನಡೆಸಲು ಬಯಸುತ್ತದೆ ಎಂದಿದ್ದರು.
ಮುಖ್ಯಮಂತ್ರಿ ಗೆಹ್ಲೋಟ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ನಡುವಿನ ಭಿನ್ನಾಭಿಪ್ರಾಯ ಬಹಿರಂಗವಾದ ಬಳಿಕ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಪೈಲಟ್ ಅವರನ್ನು ಈಗಾಗಲೇ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕಲಾಗಿದೆ.