<p><strong>ಜೈಪುರ:</strong> ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. </p><p>ನ.25 ರಂದು ನಡೆಯುವ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲುವು ಸಾಧಿಸಿದರೆ, ‘ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅವಕಾಶ, ‘ಗೋಧನ್ ಸ್ಕೀಮ್’ ಅಡಿಯಲ್ಲಿ ಬೆರಣಿಯ ಬೆಲೆಯನ್ನು ಕೆ.ಜಿಗೆ ₹2 ನಿಗದಿಪಡಿಸಲಾಗುವುದು, ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನ ಅಂಗೀಕಾರ, ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ವರ್ಷದಲ್ಲಿ ಟ್ಯಾಬ್ಲೆಟ್ ಅಥವಾ ಲ್ಯಾಪ್ಟಾಪ್ ನೀಡಲಾಗುವುದು, ಪ್ರಾಕೃತಿಕ ವಿಕೋಪದಿಂದಾದ ಹಾನಿಗೆ ₹15 ಲಕ್ಷ ವಿಮೆ ಸೌಲಭ್ಯ ನೀಡಲಾಗುವುದು’ ಎಂದು ಭರವಸೆ ನೀಡಿದರು.</p><p>ಇವೆಲ್ಲದರ ಜತೆಗೆ ಇನ್ನೂ ಎರಡು ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಅವರು, 1.05 ಕೋಟಿ ಕುಟುಂಬಗಳಿಗೆ ₹500ಕ್ಕೆ ಅಡುಗೆ ಸಿಲಿಂಡರ್ ಅನ್ನು ನೀಡಲಾಗುವುದು, ವಾರ್ಷಿಕವಾಗಿ ಕುಟುಂಬದ ಮಹಿಳಾ ಯಜಮಾನಿಗೆ ₹10,000 ಗೌರವಧನವನ್ನು ಕಂತುಗಳಾಗಿ ನೀಡಲಾಗುವುದು. ಇದನ್ನು ಪ್ರಿಯಾಂಕಾ ಗಾಧಿ ವಾದ್ರಾ ಅವರು ಈಗಾಗಲೇ ಜುಂಜುನುದಲ್ಲಿ ನಡೆಸಿದ ಸಾರ್ವಜನಿಕ ರ್ಯಾಲಿಯಲ್ಲಿ ಘೋಷಿಸಿದ್ದಾರೆ ಎಂದರು.</p><p>ಪತ್ರಿಕಾಗೋಷ್ಠಿಯಲ್ಲಿ ಐದು ಭರವಸೆಗಳನ್ನು ಘೋಷಿಸುವ ವೇಳೆ ಕೇಂದ್ರ ಸರ್ಕಾರವು ಭದ್ರತಾ ಸಿಬ್ಬಂದಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವ ಹೇಳಿಕೆಯ ಬಗ್ಗೆ ಗೆಹಲೋತ್ ವಾಗ್ದಾಳಿ ನಡೆಸಿದರು.</p><p>ಇದೇ ವೇಳೆ ನಮ್ಮ ಗ್ಯಾರಂಟಿ ಮಾದರಿಯನ್ನು ಪ್ರಧಾನಿ ಮೋದಿ ಅನುಸರಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ವಿಧಾನಸಭೆ ಚುನಾವಣೆ ಸನ್ನಿಹಿತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. </p><p>ನ.25 ರಂದು ನಡೆಯುವ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲುವು ಸಾಧಿಸಿದರೆ, ‘ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅವಕಾಶ, ‘ಗೋಧನ್ ಸ್ಕೀಮ್’ ಅಡಿಯಲ್ಲಿ ಬೆರಣಿಯ ಬೆಲೆಯನ್ನು ಕೆ.ಜಿಗೆ ₹2 ನಿಗದಿಪಡಿಸಲಾಗುವುದು, ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನ ಅಂಗೀಕಾರ, ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ವರ್ಷದಲ್ಲಿ ಟ್ಯಾಬ್ಲೆಟ್ ಅಥವಾ ಲ್ಯಾಪ್ಟಾಪ್ ನೀಡಲಾಗುವುದು, ಪ್ರಾಕೃತಿಕ ವಿಕೋಪದಿಂದಾದ ಹಾನಿಗೆ ₹15 ಲಕ್ಷ ವಿಮೆ ಸೌಲಭ್ಯ ನೀಡಲಾಗುವುದು’ ಎಂದು ಭರವಸೆ ನೀಡಿದರು.</p><p>ಇವೆಲ್ಲದರ ಜತೆಗೆ ಇನ್ನೂ ಎರಡು ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಅವರು, 1.05 ಕೋಟಿ ಕುಟುಂಬಗಳಿಗೆ ₹500ಕ್ಕೆ ಅಡುಗೆ ಸಿಲಿಂಡರ್ ಅನ್ನು ನೀಡಲಾಗುವುದು, ವಾರ್ಷಿಕವಾಗಿ ಕುಟುಂಬದ ಮಹಿಳಾ ಯಜಮಾನಿಗೆ ₹10,000 ಗೌರವಧನವನ್ನು ಕಂತುಗಳಾಗಿ ನೀಡಲಾಗುವುದು. ಇದನ್ನು ಪ್ರಿಯಾಂಕಾ ಗಾಧಿ ವಾದ್ರಾ ಅವರು ಈಗಾಗಲೇ ಜುಂಜುನುದಲ್ಲಿ ನಡೆಸಿದ ಸಾರ್ವಜನಿಕ ರ್ಯಾಲಿಯಲ್ಲಿ ಘೋಷಿಸಿದ್ದಾರೆ ಎಂದರು.</p><p>ಪತ್ರಿಕಾಗೋಷ್ಠಿಯಲ್ಲಿ ಐದು ಭರವಸೆಗಳನ್ನು ಘೋಷಿಸುವ ವೇಳೆ ಕೇಂದ್ರ ಸರ್ಕಾರವು ಭದ್ರತಾ ಸಿಬ್ಬಂದಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವ ಹೇಳಿಕೆಯ ಬಗ್ಗೆ ಗೆಹಲೋತ್ ವಾಗ್ದಾಳಿ ನಡೆಸಿದರು.</p><p>ಇದೇ ವೇಳೆ ನಮ್ಮ ಗ್ಯಾರಂಟಿ ಮಾದರಿಯನ್ನು ಪ್ರಧಾನಿ ಮೋದಿ ಅನುಸರಿಸುತ್ತಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>