<p><strong>ಜೈಪುರ</strong>: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು, ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ಫೋನ್ ವಿತರಿಸುವ ಮೂಲಕ ಹೊಸ ಯೋಜನೆಗೆ ಚಾಲನೆ ನೀಡಿದರು.</p><p> ಬಿರ್ಲಾ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಸ್ಮಾರ್ಟ್ಫೋನ್ ಯೋಜನೆಯ ಫಲಾನುಭವಿಗಳಿಗೆ ಮುಖ್ಯಮಂತ್ರಿ ಮೊಬೈಲ್ಗಳನ್ನು ವಿತರಿಸಿದರು.</p><p>ಈ ಯೋಜನೆ ಅನ್ವಯ ಇಂಟರ್ನೆಟ್ ಸಂಪರ್ಕವಿರುವ ಸ್ಮಾರ್ಟ್ಫೋನ್ಗಳನ್ನು ಕುಟುಂಬದ ಮುಖ್ಯಸ್ಥೆಗೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಜ್ಞಾನವೇ ಶಕ್ತಿ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಮಹಿಳೆಯರಿಗೆ ಸ್ಮಾರ್ಟ್ಫೋನ್ಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯು ಮಹಿಳೆಯರನ್ನು ಸಬಲೀಕರಣಗೊಳಿಸಲಿದೆ’ ಎಂದು ಗೆಹಲೋತ್ ಹೇಳಿದರು.</p><p>ಯೋಜನೆಯ ಮೊದಲ ಹಂತದಲ್ಲಿ ವಿಧವೆಯರು, ಪಿಂಚಣಿ ಪಡೆಯುವ ಒಂಟಿ ಮಹಿಳೆಯರು, ವಿದ್ಯಾರ್ಥಿನಿಯನ್ನು ಹೊಂದಿರುವ ಕುಟುಂಬಗಳನ್ನು ಯೋಜನೆಯ ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.</p><p>ವಿತರಣಾ ಶಿಬಿರದಲ್ಲಿ ಫಲಾನುಭವಿಗಳು ತಮಗೆ ಬೇಕಾದ ಬ್ರ್ಯಾಂಡ್ನ ಸ್ಮಾರ್ಟ್ಫೋನ್ ಆಯ್ಕೆಗೆ ಅವಕಾಶವಿದೆ. ನೇರ ಸೌಲಭ್ಯ ವರ್ಗಾವಣೆ(ಡಿಬಿಟಿ) ವಿಧಾನದಡಿ ಫಲಾನುಭವಿಗಳ ಖಾತೆಗೆ ₹6,800 ವರ್ಗಾವಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.</p><p>ಯೋಜನೆಯ ಆರಂಭಿಕ ಹಂತದಲ್ಲಿ 40 ಲಕ್ಷ ಫಲಾನುಭವಿಗಳು ಸ್ಮಾರ್ಟ್ಫೋನ್ ಪಡೆಯಲಿದ್ದಾರೆ ಎಂದು ತಿಳಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು, ಮಹಿಳೆಯರಿಗೆ ಸಾಂಕೇತಿಕವಾಗಿ ಸ್ಮಾರ್ಟ್ಫೋನ್ ವಿತರಿಸುವ ಮೂಲಕ ಹೊಸ ಯೋಜನೆಗೆ ಚಾಲನೆ ನೀಡಿದರು.</p><p> ಬಿರ್ಲಾ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಸ್ಮಾರ್ಟ್ಫೋನ್ ಯೋಜನೆಯ ಫಲಾನುಭವಿಗಳಿಗೆ ಮುಖ್ಯಮಂತ್ರಿ ಮೊಬೈಲ್ಗಳನ್ನು ವಿತರಿಸಿದರು.</p><p>ಈ ಯೋಜನೆ ಅನ್ವಯ ಇಂಟರ್ನೆಟ್ ಸಂಪರ್ಕವಿರುವ ಸ್ಮಾರ್ಟ್ಫೋನ್ಗಳನ್ನು ಕುಟುಂಬದ ಮುಖ್ಯಸ್ಥೆಗೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಜ್ಞಾನವೇ ಶಕ್ತಿ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಮಹಿಳೆಯರಿಗೆ ಸ್ಮಾರ್ಟ್ಫೋನ್ಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯು ಮಹಿಳೆಯರನ್ನು ಸಬಲೀಕರಣಗೊಳಿಸಲಿದೆ’ ಎಂದು ಗೆಹಲೋತ್ ಹೇಳಿದರು.</p><p>ಯೋಜನೆಯ ಮೊದಲ ಹಂತದಲ್ಲಿ ವಿಧವೆಯರು, ಪಿಂಚಣಿ ಪಡೆಯುವ ಒಂಟಿ ಮಹಿಳೆಯರು, ವಿದ್ಯಾರ್ಥಿನಿಯನ್ನು ಹೊಂದಿರುವ ಕುಟುಂಬಗಳನ್ನು ಯೋಜನೆಯ ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.</p><p>ವಿತರಣಾ ಶಿಬಿರದಲ್ಲಿ ಫಲಾನುಭವಿಗಳು ತಮಗೆ ಬೇಕಾದ ಬ್ರ್ಯಾಂಡ್ನ ಸ್ಮಾರ್ಟ್ಫೋನ್ ಆಯ್ಕೆಗೆ ಅವಕಾಶವಿದೆ. ನೇರ ಸೌಲಭ್ಯ ವರ್ಗಾವಣೆ(ಡಿಬಿಟಿ) ವಿಧಾನದಡಿ ಫಲಾನುಭವಿಗಳ ಖಾತೆಗೆ ₹6,800 ವರ್ಗಾವಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.</p><p>ಯೋಜನೆಯ ಆರಂಭಿಕ ಹಂತದಲ್ಲಿ 40 ಲಕ್ಷ ಫಲಾನುಭವಿಗಳು ಸ್ಮಾರ್ಟ್ಫೋನ್ ಪಡೆಯಲಿದ್ದಾರೆ ಎಂದು ತಿಳಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>