ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ಸಿಎಂ ಭಜನ್‌ ಲಾಲ್‌ ಶರ್ಮಾಗೆ ಜೀವ ಬೆದರಿಕೆ ಕರೆ ಮಾಡಿದ ಕೈದಿ

Published 18 ಜನವರಿ 2024, 9:54 IST
Last Updated 18 ಜನವರಿ 2024, 9:54 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಭಜನ್‌ ಲಾಲ್‌ ಶರ್ಮಾ ಅವರಿಗೆ ಜೈಪುರದ ಕೇಂದ್ರ ಕಾರಾಗೃಹದ ಕೈದಿಯೊಬ್ಬನಿಂದ ಜೀವ ಬೆದರಿಕೆ ಕರೆ ಬಂದಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ಕಾರಾಗೃಹದಿಂದ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಜತೆಗೆ ಜೈಲಿನೊಳಗೆ ಮೊಬೈಲ್‌ ಫೋನ್‌ ಹೋಗಿರುವುದಾದರೂ ಹೇಗೆ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಜವಾಹರ್ ಸಿಂಗ್ ಬೇಧಮ್ ಮಾಹಿತಿ ನೀಡಿದ್ದಾರೆ.

ಜೈಲಿನೊಳಗೆ ಮೊಬೈಲ್‌ ಫೋನ್‌ಗಳ ತಪಾಸಣೆಯನ್ನು ಶೀಘ್ರದಲ್ಲಿ ಮಾಡಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಬೆಧಮ್‌ ತಿಳಿಸಿದ್ದಾರೆ.

ಭಜನ್‌ ಲಾಲ್‌ ಶರ್ಮಾ ಅವರನ್ನು ಕೊಲೆ ಮಾಡುವುದಾಗಿ ಬುಧವಾರ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ದೂರವಾಣಿ ಕರೆ ಬಂದಿತ್ತು. ಮೊಬೈಲ್‌ ನಂಬರ್‌ ಲೊಕೇಶನ್‌ ಕೇಂದ್ರ ಕಾರಾಗೃಹದಲ್ಲಿ ಪತ್ತೆಯಾಗಿದೆ. ಅದನ್ನು ಆಧರಿಸಿ ತನಿಖೆ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT