<p><strong>ಜೈಪುರ(ರಾಜಸ್ಥಾನ):</strong> ಅವರು 'ಕಾಂಗ್ರೆಸ್ ಮುಕ್ತ ಭಾರತ್ ' ಎಂದು ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದರು ಆದರೆ, ಈಗ ಅವರು<br />ಕಾಂಗ್ರೆಸ್ ಕಂಡರೆ ಭಯಪಡುವಂತಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.</p>.<p>ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಅವರು ಕಾಂಗ್ರೆಸ್ ಬಗ್ಗೆ ಹೆದರುತ್ತಾರೆ, ರಾಜಸ್ಥಾನದಲ್ಲಿ ಸರ್ಕಾರ ಸ್ಥಿರವಾಗಿದೆ, ಅದು ತನ್ನ ಪೂರ್ಣ ಅವಧಿಯನ್ನು ಪೂರ್ಣಗೊಳಿಸುತ್ತದೆ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ನಾವು ಸಿದ್ಧತೆಯಲ್ಲಿ ತೊಡಗಿದ್ದೇವೆ ಎಂದು ಹೇಳಿದ್ದಾರೆ.</p>.<p><strong>ಕೊರೊನಾ ನಿರ್ಮೂಲನೆ ಹೋರಾಟ ಮುಂದುವರಿದಿದೆ</strong></p>.<p>ಸರ್ಕಾರ ಈಗ ಕೊರೊನಾ ಸೋಂಕಿನ ವಿರುದ್ಧ ಹೋರಾಟ ಮುಂದುವರಿಸಿದೆ. ಇದು ನಾವು ಮಾಡಲೇಬೇಕಾದ ಕೆಲಸ ಮಾಡುತ್ತಿದ್ದೇವೆ. ಆದರೆ, ಅವರು (ಬಿಜೆಪಿ) ಮಾತ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಇದು ವಾಜಪೇಯಿ ಕಾಲದಲ್ಲಿ ನಡೆಯುತ್ತಿರಲಿಲ್ಲ. ಆದರೆ, 2014ರಿಂದ ಈಚೆಗೆ ಈ ಬೆಳವಣಿಗೆ ಕಂಡುಬಂದಿದೆ. ಅದೂ ಧರ್ಮದ ಆಧಾರದಲ್ಲಿ ಸರ್ಕಾರ ಒಡೆಯುವುದು ಮುಖ್ಯ ಕೆಲಸವಾಗಿ ಬಿಟ್ಟಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ(ರಾಜಸ್ಥಾನ):</strong> ಅವರು 'ಕಾಂಗ್ರೆಸ್ ಮುಕ್ತ ಭಾರತ್ ' ಎಂದು ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದರು ಆದರೆ, ಈಗ ಅವರು<br />ಕಾಂಗ್ರೆಸ್ ಕಂಡರೆ ಭಯಪಡುವಂತಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.</p>.<p>ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಅವರು ಕಾಂಗ್ರೆಸ್ ಬಗ್ಗೆ ಹೆದರುತ್ತಾರೆ, ರಾಜಸ್ಥಾನದಲ್ಲಿ ಸರ್ಕಾರ ಸ್ಥಿರವಾಗಿದೆ, ಅದು ತನ್ನ ಪೂರ್ಣ ಅವಧಿಯನ್ನು ಪೂರ್ಣಗೊಳಿಸುತ್ತದೆ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ನಾವು ಸಿದ್ಧತೆಯಲ್ಲಿ ತೊಡಗಿದ್ದೇವೆ ಎಂದು ಹೇಳಿದ್ದಾರೆ.</p>.<p><strong>ಕೊರೊನಾ ನಿರ್ಮೂಲನೆ ಹೋರಾಟ ಮುಂದುವರಿದಿದೆ</strong></p>.<p>ಸರ್ಕಾರ ಈಗ ಕೊರೊನಾ ಸೋಂಕಿನ ವಿರುದ್ಧ ಹೋರಾಟ ಮುಂದುವರಿಸಿದೆ. ಇದು ನಾವು ಮಾಡಲೇಬೇಕಾದ ಕೆಲಸ ಮಾಡುತ್ತಿದ್ದೇವೆ. ಆದರೆ, ಅವರು (ಬಿಜೆಪಿ) ಮಾತ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಇದು ವಾಜಪೇಯಿ ಕಾಲದಲ್ಲಿ ನಡೆಯುತ್ತಿರಲಿಲ್ಲ. ಆದರೆ, 2014ರಿಂದ ಈಚೆಗೆ ಈ ಬೆಳವಣಿಗೆ ಕಂಡುಬಂದಿದೆ. ಅದೂ ಧರ್ಮದ ಆಧಾರದಲ್ಲಿ ಸರ್ಕಾರ ಒಡೆಯುವುದು ಮುಖ್ಯ ಕೆಲಸವಾಗಿ ಬಿಟ್ಟಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>