<p>ಜೈಪುರ: ರಾಜಸ್ಥಾನದ ಕೋಟ್ಪುತಲಿ ಬಹರೋಡ್ ಜಿಲ್ಲೆಯ ಪ್ರಾಗ್ಪುರದಲ್ಲಿರುವ ಜವಾಹರ್ ನವೋದಯ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ, ದಲಿತ ಬಾಲಕ ತರಗತಿ ಒಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಬುಧವಾರ ಘಟನೆ ನಡೆದಿದ್ದು, ಬಾಲಕನ ಕುಟುಂಬಸ್ಥರು ಮೃತದೇಹವನ್ನು ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ. ಇಬ್ಬರು ಶಿಕ್ಷಕರು ತಮ್ಮ ಮಗನನ್ನು ಕೊಲೆ ಮಾಡಿ, ನಂತರ ಇದೊಂದು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದಿದ್ದಾರೆ ಎಂದು ಕುಟುಂಸ್ಥರು ಆರೋಪಿಸಿದ್ದಾರೆ. ಶಿಕ್ಷಕರನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.</p>.<p>‘ಇಬ್ಬರು ಶಿಕ್ಷಕರು ತಮ್ಮ ಮಗನಿಗೆ ಕಿರುಕುಳ ನೀಡಿರುವುದಾಗಿ ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಅವರು ಧರಣಿ ನಡೆಸುತ್ತಿರುವ ಕಾರಣದಿಂದ ಮರಣೋತ್ತರ ಪರೀಕ್ಷೆಯೂ ನಡೆದಿಲ್ಲ’ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಶರ್ಮಾ ಹೇಳಿದ್ದಾರೆ.</p>.<p>ಆರೋಪಿ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೈಪುರ: ರಾಜಸ್ಥಾನದ ಕೋಟ್ಪುತಲಿ ಬಹರೋಡ್ ಜಿಲ್ಲೆಯ ಪ್ರಾಗ್ಪುರದಲ್ಲಿರುವ ಜವಾಹರ್ ನವೋದಯ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ, ದಲಿತ ಬಾಲಕ ತರಗತಿ ಒಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p>.<p>ಬುಧವಾರ ಘಟನೆ ನಡೆದಿದ್ದು, ಬಾಲಕನ ಕುಟುಂಬಸ್ಥರು ಮೃತದೇಹವನ್ನು ಸ್ವೀಕರಿಸಲು ನಿರಾಕರಿಸುತ್ತಿದ್ದಾರೆ. ಇಬ್ಬರು ಶಿಕ್ಷಕರು ತಮ್ಮ ಮಗನನ್ನು ಕೊಲೆ ಮಾಡಿ, ನಂತರ ಇದೊಂದು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದಿದ್ದಾರೆ ಎಂದು ಕುಟುಂಸ್ಥರು ಆರೋಪಿಸಿದ್ದಾರೆ. ಶಿಕ್ಷಕರನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.</p>.<p>‘ಇಬ್ಬರು ಶಿಕ್ಷಕರು ತಮ್ಮ ಮಗನಿಗೆ ಕಿರುಕುಳ ನೀಡಿರುವುದಾಗಿ ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಅವರು ಧರಣಿ ನಡೆಸುತ್ತಿರುವ ಕಾರಣದಿಂದ ಮರಣೋತ್ತರ ಪರೀಕ್ಷೆಯೂ ನಡೆದಿಲ್ಲ’ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಶರ್ಮಾ ಹೇಳಿದ್ದಾರೆ.</p>.<p>ಆರೋಪಿ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>