<p><strong>ನವದೆಹಲಿ:</strong> ರಾಜಸ್ಥಾನ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ಕಾಂಗ್ರೆಸ್ ಪಕ್ಷ ಜನರಿಗೆ 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ.</p><p>ಇಲ್ಲಿನ ಮೋತಿ ದುಂಗಾರಿ ಗಣೇಶ ದೇವಸ್ಥಾನದಲ್ಲಿ ಗ್ಯಾರಂಟಿ ಯಾತ್ರೆಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹಾಗೂ ರಾಜ್ಯ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಾಂಧವ ಚಾಲನೆ ನೀಡಿದರು. </p><p>ಈ ಯಾತ್ರೆಯ ವೇಳೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ಯಾತ್ರೆಯಲ್ಲಿ ಭಾಗವಹಿಸಿರುವ ಕಾಂಗ್ರೆಸ್ ಮುಖಂಡರು ಜೈಪುರದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪ್ರಚಾರ ನಡೆಸಿದರು.</p>.ಪಂಚ ರಾಜ್ಯಗಳ ಚುನಾವಣಾ ಕಣದಲ್ಲಿ: ರಾಜಸ್ಥಾನ ಸಿಎಂ ಗೆಹಲೋತ್ ನಾಮಪತ್ರ ಸಲ್ಲಿಕೆ.ರಾಜಸ್ಥಾನ ಚುನಾವಣೆ | ‘ಕೈ’ ಕಾರ್ಯಕರ್ತರಲ್ಲಿ ಭರವಸೆ ಮೂಡಿಸಿದ ಹೊಸಬರು.<h2>7 ಗ್ಯಾರಂಟಿಗಳು...</h2><p>1) ಕುಟುಂಬದ ಯಜಮಾನಿಗೆ ವಾರ್ಷಿಕ ₹ 10,000 ಗೌರವಧನ</p><p>2) 1.05 ಕೋಟಿ ಕುಟುಂಬಗಳಿಗೆ ₹ 500ಕ್ಕೆ ಅಡುಗೆ ಅನಿಲ ಸಿಲಿಂಡರ್ ನೀಡಿಕೆ</p><p>3) ಜಾನುವಾರು ಸಾಕಣೆದಾರರಿಂದ ಕೆ.ಜಿ.ಗೆ ₹ 2ಯಂತೆ ಸಗಣಿ ಖರೀದಿ</p><p>4) ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ</p><p>5) ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅಥವಾ ಟ್ಯಾಬ್ಲೆಟ್</p><p>6) ನೈಸರ್ಗಿಕ ವಿಪತ್ತುಗಳಿಂದ ಉಂಟಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ₹ 15 ಲಕ್ಷಗಳವರೆಗೆ ವಿಮಾ ರಕ್ಷಣೆ</p><p>7) ಇಂಗ್ಲಿಷ್ ಮಾಧ್ಯಮದಲ್ಲಿ ಶಾಲಾ ಶಿಕ್ಷಣ</p><p>ರಾಜ್ಯದ 200 ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 25ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.</p>.ಹೊಂದಾಣಿಕೆ ವಿಫಲ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢದಲ್ಲಿ ಎಡಪಕ್ಷಗಳು ಕಣಕ್ಕೆ.ರಾಜಸ್ಥಾನ ಚುನಾವಣೆ: ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜಸ್ಥಾನ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ಕಾಂಗ್ರೆಸ್ ಪಕ್ಷ ಜನರಿಗೆ 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ.</p><p>ಇಲ್ಲಿನ ಮೋತಿ ದುಂಗಾರಿ ಗಣೇಶ ದೇವಸ್ಥಾನದಲ್ಲಿ ಗ್ಯಾರಂಟಿ ಯಾತ್ರೆಗೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹಾಗೂ ರಾಜ್ಯ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಾಂಧವ ಚಾಲನೆ ನೀಡಿದರು. </p><p>ಈ ಯಾತ್ರೆಯ ವೇಳೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದರು. ಯಾತ್ರೆಯಲ್ಲಿ ಭಾಗವಹಿಸಿರುವ ಕಾಂಗ್ರೆಸ್ ಮುಖಂಡರು ಜೈಪುರದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಪ್ರಚಾರ ನಡೆಸಿದರು.</p>.ಪಂಚ ರಾಜ್ಯಗಳ ಚುನಾವಣಾ ಕಣದಲ್ಲಿ: ರಾಜಸ್ಥಾನ ಸಿಎಂ ಗೆಹಲೋತ್ ನಾಮಪತ್ರ ಸಲ್ಲಿಕೆ.ರಾಜಸ್ಥಾನ ಚುನಾವಣೆ | ‘ಕೈ’ ಕಾರ್ಯಕರ್ತರಲ್ಲಿ ಭರವಸೆ ಮೂಡಿಸಿದ ಹೊಸಬರು.<h2>7 ಗ್ಯಾರಂಟಿಗಳು...</h2><p>1) ಕುಟುಂಬದ ಯಜಮಾನಿಗೆ ವಾರ್ಷಿಕ ₹ 10,000 ಗೌರವಧನ</p><p>2) 1.05 ಕೋಟಿ ಕುಟುಂಬಗಳಿಗೆ ₹ 500ಕ್ಕೆ ಅಡುಗೆ ಅನಿಲ ಸಿಲಿಂಡರ್ ನೀಡಿಕೆ</p><p>3) ಜಾನುವಾರು ಸಾಕಣೆದಾರರಿಂದ ಕೆ.ಜಿ.ಗೆ ₹ 2ಯಂತೆ ಸಗಣಿ ಖರೀದಿ</p><p>4) ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ</p><p>5) ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅಥವಾ ಟ್ಯಾಬ್ಲೆಟ್</p><p>6) ನೈಸರ್ಗಿಕ ವಿಪತ್ತುಗಳಿಂದ ಉಂಟಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ₹ 15 ಲಕ್ಷಗಳವರೆಗೆ ವಿಮಾ ರಕ್ಷಣೆ</p><p>7) ಇಂಗ್ಲಿಷ್ ಮಾಧ್ಯಮದಲ್ಲಿ ಶಾಲಾ ಶಿಕ್ಷಣ</p><p>ರಾಜ್ಯದ 200 ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 25ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.</p>.ಹೊಂದಾಣಿಕೆ ವಿಫಲ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢದಲ್ಲಿ ಎಡಪಕ್ಷಗಳು ಕಣಕ್ಕೆ.ರಾಜಸ್ಥಾನ ಚುನಾವಣೆ: ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>