‘ರೈತರು ಅತ್ಯಂತ ಅಪಾಯಕಾರಿ ಶತ್ರುಗಳು ಎಂಬಂತೆ ಕೇಂದ್ರ ಸರ್ಕಾರವು ರೈತರ ವಿರುದ್ಧ ಯುದ್ಧ ಸಾರಿದೆ. ನಾವು ಬೆಳೆದ ಬೆಳೆಗೆ ಎಂಎಸ್ಪಿ ಕೇಳುತ್ತಿದ್ದೇವೆ. ಈ ಕುರಿತಂತೆ ರಚನೆಯಾದ ಸಮಿತಿಯು ಸರಿಯಾಗಿ ಕೆಲಸ ಮಾಡಿಲ್ಲ. ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ಇಷ್ಟೊಂದು ವಿಳಂಬ ಏಕೆ? ಬೆವರು ಹರಿಸಿ ಬೆಳೆದ ಬೆಳೆಗಳನ್ನು ಕಡಿಮೆ ದರಕ್ಕೆ ಮಾರಾಟ ಮಾಡುವ ಮೂಲಕ ರೈತರು ಶೋಷಣೆಗೆ ಒಳಗಾಗುತ್ತಿದ್ದಾರೆ’ ಎಂದು ಹೇಳಿದರು.