<p><strong>ಜೈಪುರ:</strong> ಕೋವಿಡ್ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನದಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಹೈಯರ್ ಸೆಕೆಂಡರಿ(10, 12ನೇ ತರಗತಿ) ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.</p>.<p>ಕೇಂದ್ರ ಸರ್ಕಾರವು ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಾಜ್ಯಗಳು ಪರೀಕ್ಷೆಯ ಕುರಿತು ತೀರ್ಮಾನ ಸ್ಪಷ್ಟಪಡಿಸಿಕೊಂಡಿವೆ.</p>.<p>ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ಪರೀಕ್ಷೆಗಳನ್ನು ನಡೆಸದಿರಲು ಅಲ್ಲಿನ ರಾಜ್ಯ ಸರ್ಕಾರಗಳು ಬುಧವಾರ ನಿರ್ಧರಿಸಿವೆ.</p>.<p>‘ಕೋವಿಡ್–19 ಮೂರನೇ ಅಲೆಯಿಂದ ಮಕ್ಕಳು ಹೆಚ್ಚಾಗಿ ಸೋಂಕಿಗೆ ಒಳಗಾಗಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ರಾಜಸ್ಥಾನ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೊಸ್ತಾರ ತಿಳಿಸಿದ್ದಾರೆ.</p>.<p>ಈಗಾಗಲೇ ಹರಿಯಾಣ, ಉತ್ತರಾಖಂಡದಲ್ಲಿ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.</p>.<p><strong>ಇದನ್ನೂ ಓದಿ... </strong><a href="https://www.prajavani.net/india-news/cbse-narendra-modi-examination-students-covid-coronavirus-lockdown-835330.html" target="_blank">ಸಿಬಿಎಸ್ಇಯ 12ನೇ ತರಗತಿ ಪರೀಕ್ಷೆ ಇಲ್ಲ: ಪ್ರಧಾನಿ ನೇತೃತ್ವದ ಸಭೆಯಲ್ಲಿ ನಿರ್ಧಾರ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕೋವಿಡ್ ಹರಡುವಿಕೆಯನ್ನು ಗಮನದಲ್ಲಿಟ್ಟುಕೊಂಡು ರಾಜಸ್ಥಾನದಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಹೈಯರ್ ಸೆಕೆಂಡರಿ(10, 12ನೇ ತರಗತಿ) ಪರೀಕ್ಷೆಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ ಎಂದು ಸರ್ಕಾರ ಹೇಳಿದೆ.</p>.<p>ಕೇಂದ್ರ ಸರ್ಕಾರವು ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಾಜ್ಯಗಳು ಪರೀಕ್ಷೆಯ ಕುರಿತು ತೀರ್ಮಾನ ಸ್ಪಷ್ಟಪಡಿಸಿಕೊಂಡಿವೆ.</p>.<p>ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ಪರೀಕ್ಷೆಗಳನ್ನು ನಡೆಸದಿರಲು ಅಲ್ಲಿನ ರಾಜ್ಯ ಸರ್ಕಾರಗಳು ಬುಧವಾರ ನಿರ್ಧರಿಸಿವೆ.</p>.<p>‘ಕೋವಿಡ್–19 ಮೂರನೇ ಅಲೆಯಿಂದ ಮಕ್ಕಳು ಹೆಚ್ಚಾಗಿ ಸೋಂಕಿಗೆ ಒಳಗಾಗಬಹುದು ಎಂದು ವೈದ್ಯಕೀಯ ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಪರೀಕ್ಷೆಗಳನ್ನು ರದ್ದುಪಡಿಸುವ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ರಾಜಸ್ಥಾನ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೊಸ್ತಾರ ತಿಳಿಸಿದ್ದಾರೆ.</p>.<p>ಈಗಾಗಲೇ ಹರಿಯಾಣ, ಉತ್ತರಾಖಂಡದಲ್ಲಿ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.</p>.<p><strong>ಇದನ್ನೂ ಓದಿ... </strong><a href="https://www.prajavani.net/india-news/cbse-narendra-modi-examination-students-covid-coronavirus-lockdown-835330.html" target="_blank">ಸಿಬಿಎಸ್ಇಯ 12ನೇ ತರಗತಿ ಪರೀಕ್ಷೆ ಇಲ್ಲ: ಪ್ರಧಾನಿ ನೇತೃತ್ವದ ಸಭೆಯಲ್ಲಿ ನಿರ್ಧಾರ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>