ಕಳೆದ ವಾರ ಮೊದಲ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದ ರಾಜ್ಯಪಾಲ ಮಿಶ್ರಾ ಅವರು, ತುರ್ತಾಗಿ ಅಧಿವೇಶನ ಕರೆಯುವ ಅಗತ್ಯ ಏನಿದೆ ಎಂಬುದು ಸೇರಿದಂತೆ ಕೆಲವು ಸ್ಪಷ್ಟೀಕರಣಗಳನ್ನು ಕೇಳಿದ್ದರು. ಹೀಗಾಗಿ ಗೆಹ್ಲೋಟ್ ಅವರು ಮತ್ತೊಮ್ಮೆ ಸಚಿವ ಸಂಪುಟ ಸಭೆ ಕರೆದು, ರಾಜ್ಯದಲ್ಲಿನ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿದ ಬಳಿಕ ಅಧಿವೇಶನ ಕರೆಯುವ ಬಗ್ಗೆ ಎರಡನೇ ಸಲ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ರಾಜ್ಯಪಾಲರು ಈಗ ಅದನ್ನೂ ತಿರಸ್ಕರಿಸಿದ್ದು, ಮತ್ತೆ ಕೆಲವು ಸ್ಪಷ್ಟೀಕರಣಗಳನ್ನು ಕೇಳಿದ್ದಾರೆ ಎನ್ನಲಾಗಿದೆ.