<p><strong>ಜೈಪುರ</strong>: ದೇಶದಾದ್ಯಂತ ತುರ್ತು ಪರಿಸ್ಥಿತಿ ಹೇರಿಕೆಯಾಗಿದ್ದ ಸಂದರ್ಭದಲ್ಲೂ ನ್ಯಾಯದ ತತ್ವಗಳನ್ನು ರಕ್ಷಿಸಿದ್ದ ನ್ಯಾಯಾಲಯಗಳಲ್ಲಿ ರಾಜಸ್ಥಾನ ಹೈಕೋರ್ಟ್ ಸಹ ಒಂದು ಎಂದು ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಭಾನುವಾರ ಹೇಳಿದ್ದಾರೆ.</p><p>ರಾಜಸ್ಥಾನ ಹೈಕೋರ್ಟ್ನ 'ಪ್ಲಾಟಿನಂ ಜುಬಿಲಿ' ಸಮಾರಂಭ ಜೋಧ್ಪುರದಲ್ಲಿ ಭಾನುವಾರ ನಡೆಯಿತು. ಈ ವೇಳೆ ಮಾತನಾಡಿದ ಶರ್ಮಾ, 'ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾಗರಿಕರ ಹಕ್ಕುಗಳಿಗೆ ಧಕ್ಕೆಯಾಗಿತ್ತು. ಆಗ, ಯಾರು ಬೇಕಾದರೂ ತಮ್ಮ ಬಂಧನವನ್ನು ಪ್ರಶ್ನಿಸಬಹುದು ಎಂಬ ಖಾತ್ರಿಯನ್ನು ನ್ಯಾಯಾಲಯ ನೀಡಿತ್ತು' ಎಂದು ಹೇಳಿದ್ದಾರೆ.</p><p>'ನ್ಯಾಯಾಲಯವು ಸದಾ ಕಾನೂನಿನ ನಿಯಮಗಳನ್ನು ಪಾಲಿಸುತ್ತಿದೆ, ಗೌರವಿಸುತ್ತಿದೆ ಮತ್ತು ಅದರ ರಕ್ಷಣೆಗೆ ನಿಂತಿದೆ ಎಂಬುದಕ್ಕೆ ಅದೇ ಸಾಕ್ಷಿ' ಎಂದು ಶ್ಲಾಘಿಸಿದ್ದಾರೆ.</p><p>ರಾಜಸ್ಥಾನದಲ್ಲಿ ಮೂರೂ ಅಂಗಗಳು (ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ) ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿವೆ. ಹಾಗಾಗಿಯೇ ಹಲವು ಪ್ರಕರಣಗಳು ಪರಸ್ಪರ ಸಹಕಾರದಿಂದ ಇತ್ಯರ್ಥಗೊಂಡಿವೆ. ಇದರಿಂದಾಗಿ, ದೀರ್ಘ ಕಾಲ ಜನರು ಕಾನೂನು ಸಂಘರ್ಷ ನಡೆಸುವುದು ತಪ್ಪಿದೆ ಎಂದು ಹೇಳಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಹಳೇ ಕಾನೂನುಗಳನ್ನು ರದ್ದುಪಡಿಸಿ, ಹೊಸ ಕಾನೂನುಗಳನ್ನು ರೂಪಿಸಿದ್ದಾರೆ. ಇದರಿಂದ ನ್ಯಾಯಾಂಗದ ಪ್ರಕ್ರಿಯೆ ಸರಳವಾಗಿದೆ ಎಂದಿರುವ ಮುಖ್ಯಮಂತ್ರಿ, 'ಮಿಷನ್ ಕರ್ಮಯೋಗಿ'ಯು ಕಾನೂನು ಸಂಬಂಧಿ ವಿಷಯಗಳಲ್ಲಿ ಪರಿಣತಿ ಹೊಂದಲು ಅಧಿಕಾರಿಗಳಿಗೆ ಅವಕಾಶ ಕಲ್ಪಿಸುತ್ತದೆ ಎಂದಿದ್ದಾರೆ.</p><p>ರಾಜಸ್ಥಾನದ ಸುಮಾರು 5.3 ಲಕ್ಷ ಸಿಬ್ಬಂದಿ 'ಮಿಷನ್ ಕರ್ಮಯೋಗಿ' ಅಡಿಯಲ್ಲಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 2.35 ಲಕ್ಷಕ್ಕೂ ಹೆಚ್ಚು ಮಂದಿ ಕೋರ್ಸ್ಗಳನ್ನು ಪೂರೈಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ದೇಶದಾದ್ಯಂತ ತುರ್ತು ಪರಿಸ್ಥಿತಿ ಹೇರಿಕೆಯಾಗಿದ್ದ ಸಂದರ್ಭದಲ್ಲೂ ನ್ಯಾಯದ ತತ್ವಗಳನ್ನು ರಕ್ಷಿಸಿದ್ದ ನ್ಯಾಯಾಲಯಗಳಲ್ಲಿ ರಾಜಸ್ಥಾನ ಹೈಕೋರ್ಟ್ ಸಹ ಒಂದು ಎಂದು ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಭಾನುವಾರ ಹೇಳಿದ್ದಾರೆ.</p><p>ರಾಜಸ್ಥಾನ ಹೈಕೋರ್ಟ್ನ 'ಪ್ಲಾಟಿನಂ ಜುಬಿಲಿ' ಸಮಾರಂಭ ಜೋಧ್ಪುರದಲ್ಲಿ ಭಾನುವಾರ ನಡೆಯಿತು. ಈ ವೇಳೆ ಮಾತನಾಡಿದ ಶರ್ಮಾ, 'ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾಗರಿಕರ ಹಕ್ಕುಗಳಿಗೆ ಧಕ್ಕೆಯಾಗಿತ್ತು. ಆಗ, ಯಾರು ಬೇಕಾದರೂ ತಮ್ಮ ಬಂಧನವನ್ನು ಪ್ರಶ್ನಿಸಬಹುದು ಎಂಬ ಖಾತ್ರಿಯನ್ನು ನ್ಯಾಯಾಲಯ ನೀಡಿತ್ತು' ಎಂದು ಹೇಳಿದ್ದಾರೆ.</p><p>'ನ್ಯಾಯಾಲಯವು ಸದಾ ಕಾನೂನಿನ ನಿಯಮಗಳನ್ನು ಪಾಲಿಸುತ್ತಿದೆ, ಗೌರವಿಸುತ್ತಿದೆ ಮತ್ತು ಅದರ ರಕ್ಷಣೆಗೆ ನಿಂತಿದೆ ಎಂಬುದಕ್ಕೆ ಅದೇ ಸಾಕ್ಷಿ' ಎಂದು ಶ್ಲಾಘಿಸಿದ್ದಾರೆ.</p><p>ರಾಜಸ್ಥಾನದಲ್ಲಿ ಮೂರೂ ಅಂಗಗಳು (ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ) ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿವೆ. ಹಾಗಾಗಿಯೇ ಹಲವು ಪ್ರಕರಣಗಳು ಪರಸ್ಪರ ಸಹಕಾರದಿಂದ ಇತ್ಯರ್ಥಗೊಂಡಿವೆ. ಇದರಿಂದಾಗಿ, ದೀರ್ಘ ಕಾಲ ಜನರು ಕಾನೂನು ಸಂಘರ್ಷ ನಡೆಸುವುದು ತಪ್ಪಿದೆ ಎಂದು ಹೇಳಿದ್ದಾರೆ.</p><p>ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಹಳೇ ಕಾನೂನುಗಳನ್ನು ರದ್ದುಪಡಿಸಿ, ಹೊಸ ಕಾನೂನುಗಳನ್ನು ರೂಪಿಸಿದ್ದಾರೆ. ಇದರಿಂದ ನ್ಯಾಯಾಂಗದ ಪ್ರಕ್ರಿಯೆ ಸರಳವಾಗಿದೆ ಎಂದಿರುವ ಮುಖ್ಯಮಂತ್ರಿ, 'ಮಿಷನ್ ಕರ್ಮಯೋಗಿ'ಯು ಕಾನೂನು ಸಂಬಂಧಿ ವಿಷಯಗಳಲ್ಲಿ ಪರಿಣತಿ ಹೊಂದಲು ಅಧಿಕಾರಿಗಳಿಗೆ ಅವಕಾಶ ಕಲ್ಪಿಸುತ್ತದೆ ಎಂದಿದ್ದಾರೆ.</p><p>ರಾಜಸ್ಥಾನದ ಸುಮಾರು 5.3 ಲಕ್ಷ ಸಿಬ್ಬಂದಿ 'ಮಿಷನ್ ಕರ್ಮಯೋಗಿ' ಅಡಿಯಲ್ಲಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 2.35 ಲಕ್ಷಕ್ಕೂ ಹೆಚ್ಚು ಮಂದಿ ಕೋರ್ಸ್ಗಳನ್ನು ಪೂರೈಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>