<p><strong>ನವದೆಹಲಿ</strong>: ರಾಜಸ್ಥಾನವು ಅತ್ಯಾಚಾರ ಪ್ರಕರಣಗಳ ರಾಜಧಾನಿಯಾಗಿ ಬದಲಾಗುತ್ತಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲು ಅಶೋಕ್ ಗೆಹಲೋತ್ ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಬಿಜೆಪಿ ಸಂಸದೆ ರಂಜಿತಾ ಕೊಲಿ ಆರೋಪಿಸಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವು ಮಹಿಳೆಯರನ್ನು ಗೌರವಿಸುವ ಸಂಪ್ರದಾಯ ಹೊಂದಿದೆ. ಆದರೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಸಂಸ್ಕೃತಿ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.</p><p>ಬಿಜೆಪಿಯ ಮತ್ತೊಬ್ಬ ಸಂಸದೆ ದಿಯಾ ಕುಮಾರಿ ಅವರು, ರಾಜ್ಯದ ಬಿಲ್ವಾರಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟ ಇತ್ತೀಚಿನ ಘಟನೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p><p>ಅತ್ಯಾಚಾರ ಪ್ರಕರಣಗಳ ಸಂಬಂಧ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ ನೀಡಿರುವ ಅಂಕಿಅಂಶಗಳ ಪ್ರಕಾರ, ರಾಜಸ್ಥಾನದಲ್ಲಿ ಮಹಿಳೆಯರು ಮನೆಗಳಲ್ಲಿಯೂ ಸುರಕ್ಷಿತವಾಗಿಲ್ಲ ಎಂದು ಕುಮಾರಿ ಕಳವಳ ವ್ಯಕ್ತಪಡಿಸಿದ್ದಾರೆ.</p><p>ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಅವರು ರಾಜಸ್ಥಾನಕ್ಕೆ ಕೇವಲ ಪ್ರವಾಸಕ್ಕೆ ಬರುತ್ತಾರೆ ವಿನಃ ಇಲ್ಲಿನ ಸಂತ್ರಸ್ತ ಮಹಿಳೆಯರ ಕುಟುಂಬದವರೊಂದಿಗೆ ಮಾತನಾಡುವುದಿಲ್ಲ ಎಂದು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜಸ್ಥಾನವು ಅತ್ಯಾಚಾರ ಪ್ರಕರಣಗಳ ರಾಜಧಾನಿಯಾಗಿ ಬದಲಾಗುತ್ತಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲು ಅಶೋಕ್ ಗೆಹಲೋತ್ ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಬಿಜೆಪಿ ಸಂಸದೆ ರಂಜಿತಾ ಕೊಲಿ ಆರೋಪಿಸಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವು ಮಹಿಳೆಯರನ್ನು ಗೌರವಿಸುವ ಸಂಪ್ರದಾಯ ಹೊಂದಿದೆ. ಆದರೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಸಂಸ್ಕೃತಿ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.</p><p>ಬಿಜೆಪಿಯ ಮತ್ತೊಬ್ಬ ಸಂಸದೆ ದಿಯಾ ಕುಮಾರಿ ಅವರು, ರಾಜ್ಯದ ಬಿಲ್ವಾರಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟ ಇತ್ತೀಚಿನ ಘಟನೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p><p>ಅತ್ಯಾಚಾರ ಪ್ರಕರಣಗಳ ಸಂಬಂಧ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ ನೀಡಿರುವ ಅಂಕಿಅಂಶಗಳ ಪ್ರಕಾರ, ರಾಜಸ್ಥಾನದಲ್ಲಿ ಮಹಿಳೆಯರು ಮನೆಗಳಲ್ಲಿಯೂ ಸುರಕ್ಷಿತವಾಗಿಲ್ಲ ಎಂದು ಕುಮಾರಿ ಕಳವಳ ವ್ಯಕ್ತಪಡಿಸಿದ್ದಾರೆ.</p><p>ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರಾ ಅವರು ರಾಜಸ್ಥಾನಕ್ಕೆ ಕೇವಲ ಪ್ರವಾಸಕ್ಕೆ ಬರುತ್ತಾರೆ ವಿನಃ ಇಲ್ಲಿನ ಸಂತ್ರಸ್ತ ಮಹಿಳೆಯರ ಕುಟುಂಬದವರೊಂದಿಗೆ ಮಾತನಾಡುವುದಿಲ್ಲ ಎಂದು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>