<p><strong>ಜೈಪುರ/ನೋಯ್ಡಾ:</strong> ಟಿವಿ ಚಾನೆಲ್ವೊಂದರ ಪತ್ರಕರ್ತ ಅಮನ್ ಚೋಪ್ರಾ ಅವರನ್ನು ಬಂಧಿಸಲು ರಾಜಸ್ಥಾನ ಪೊಲೀಸರನ್ನು ಒಳಗೊಂಡ ತಂಡ ಉತ್ತರ ಪ್ರದೇಶದ ನೋಯ್ಡಾಕ್ಕೆ ತೆರಳಿದೆ.</p>.<p>ಚೋಪ್ರಾ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಗೂ ಸಮುದಾಯಗಳ ನಡುವೆ ವೈರತ್ವ ಮೂಡಿಸಿದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಚೋಪ್ರಾ ವಿರುದ್ಧ ಬೂಂದಿ, ಆಲ್ವಾರ್ ಹಾಗೂ ಡುಂಗರಪುರ ಠಾಣೆಗಳಲ್ಲಿ ಈ ಸಂಬಂಧ ಎಫ್ಐಆರ್ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬೂಂದಿ ಹಾಗೂ ಆಲ್ವಾರ್ಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿ ಚೋಪ್ರಾ ಅವರು ರಾಜಸ್ಥಾನ ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಆದರೆ, ಡುಂಗರಪುರ ಕೋರ್ಟ್ ಅವರ ಬಂಧನಕ್ಕೆ ವಾರಂಟ್ ಹೊರಡಿಸಿದೆ ಎಂದು ತಿಳಿಸಿದ್ದಾರೆ.</p>.<p>‘ಪೊಲೀಸರ ತಂಡ ನೋಯ್ಡಾದಲ್ಲಿ ಬೀಡು ಬಿಟ್ಟಿದ್ದು, ಚೋಪ್ರಾ ಪತ್ತೆಗಾಗಿ ಎಲ್ಲ ಸ್ಥಳಗಳಲ್ಲಿ ಶೋಧ ಕೈಗೊಂಡಿದೆ. ಅವರ ಮನೆಗೂ ಭೇಟಿ ನೀಡಲಾಗಿತ್ತು. ಆದರೆ, ಮನೆಗೆ ಬೀಗ ಹಾಕಲಾಗಿದೆ’ ಎಂದು ಡುಂಗರಪುರ ಎಸ್ಪಿ ಸುಧೀರ್ ಜೋಶಿ ತಿಳಿಸಿದ್ದಾರೆ.</p>.<p>ನೋಯ್ಡಾ ಪೊಲೀಸರಿಂದ ಸಹಕಾರ ಸಿಗುತ್ತಿದೆ ಎಂಬ ಪ್ರಶ್ನೆಗೆ, ‘ವಾರಂಟ್ ಅನುಸಾರ ಆರೋಪಿಯನ್ನು ಬಂಧಿಸಲು ತೆರಳುವ ಮುನ್ನ ಸ್ಥಳೀಯ ಠಾಣೆಗೆ ಬರುವಂತೆ ನಮ್ಮ ತಂಡಕ್ಕೆ ತಿಳಿಸಲಾಯಿತು. ಈ ನಡೆಯನ್ನು ಸಂಪೂರ್ಣ ಸಹಕಾರ ಎನ್ನಲಾಗದು’ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ.</p>.<p>‘ರಾಜಸ್ಥಾನ ಪೊಲೀಸರ ಕಾರ್ಯಾಚರಣೆಗೆ ನಾವು ಯಾವುದೇ ರೀತಿ ಅಡ್ಡಿಪಡಿಸಿಲ್ಲ. ನಿಯಮಗಳಿಗೆ ಅನುಸಾರವಾಗಿಯೇ ಅವರಿಗೆ ನೆರವು ನೀಡಿದ್ದೇವೆ’ ಎಂದು ನೋಯ್ಡಾದ (ಸೆಂಟ್ರಲ್) ಹೆಚ್ಚುವರಿ ಡಿಸಿಪಿ ಎಲಾಮಾರಾನ್ ಜಿ. ತಿಳಿಸಿದ್ದಾರೆ.</p>.<p>‘ದೆಹಲಿಯ ಜಹಾಂಗಿರ್ಪುರಿಯಲ್ಲಿ ನಡೆದ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಗೆ ಪ್ರತೀಕಾರವಾಗಿ ರಾಜಸ್ಥಾನ ಸರ್ಕಾರ ಆಲ್ವಾರ್ ಜಿಲ್ಲೆಯ ರಾಜಗಡದಲ್ಲಿನ ದೇವಸ್ಥಾನವನ್ನು ಕೆಡವಿ ಹಾಕಿತು ಎಂಬುದಾಗಿ ಸುಳ್ಳು ಮಾಹಿತಿಯನ್ನು ಚೋಪ್ರಾ ಪ್ರಸಾರ ಮಾಡಿದ್ದರು. ಈ ಸಂಬಂಧ ಡುಂಗರಪುರದ ಕೊತ್ವಾಲಿ ಠಾಣೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ/ನೋಯ್ಡಾ:</strong> ಟಿವಿ ಚಾನೆಲ್ವೊಂದರ ಪತ್ರಕರ್ತ ಅಮನ್ ಚೋಪ್ರಾ ಅವರನ್ನು ಬಂಧಿಸಲು ರಾಜಸ್ಥಾನ ಪೊಲೀಸರನ್ನು ಒಳಗೊಂಡ ತಂಡ ಉತ್ತರ ಪ್ರದೇಶದ ನೋಯ್ಡಾಕ್ಕೆ ತೆರಳಿದೆ.</p>.<p>ಚೋಪ್ರಾ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಗೂ ಸಮುದಾಯಗಳ ನಡುವೆ ವೈರತ್ವ ಮೂಡಿಸಿದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಚೋಪ್ರಾ ವಿರುದ್ಧ ಬೂಂದಿ, ಆಲ್ವಾರ್ ಹಾಗೂ ಡುಂಗರಪುರ ಠಾಣೆಗಳಲ್ಲಿ ಈ ಸಂಬಂಧ ಎಫ್ಐಆರ್ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬೂಂದಿ ಹಾಗೂ ಆಲ್ವಾರ್ಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿ ಚೋಪ್ರಾ ಅವರು ರಾಜಸ್ಥಾನ ಹೈಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಆದರೆ, ಡುಂಗರಪುರ ಕೋರ್ಟ್ ಅವರ ಬಂಧನಕ್ಕೆ ವಾರಂಟ್ ಹೊರಡಿಸಿದೆ ಎಂದು ತಿಳಿಸಿದ್ದಾರೆ.</p>.<p>‘ಪೊಲೀಸರ ತಂಡ ನೋಯ್ಡಾದಲ್ಲಿ ಬೀಡು ಬಿಟ್ಟಿದ್ದು, ಚೋಪ್ರಾ ಪತ್ತೆಗಾಗಿ ಎಲ್ಲ ಸ್ಥಳಗಳಲ್ಲಿ ಶೋಧ ಕೈಗೊಂಡಿದೆ. ಅವರ ಮನೆಗೂ ಭೇಟಿ ನೀಡಲಾಗಿತ್ತು. ಆದರೆ, ಮನೆಗೆ ಬೀಗ ಹಾಕಲಾಗಿದೆ’ ಎಂದು ಡುಂಗರಪುರ ಎಸ್ಪಿ ಸುಧೀರ್ ಜೋಶಿ ತಿಳಿಸಿದ್ದಾರೆ.</p>.<p>ನೋಯ್ಡಾ ಪೊಲೀಸರಿಂದ ಸಹಕಾರ ಸಿಗುತ್ತಿದೆ ಎಂಬ ಪ್ರಶ್ನೆಗೆ, ‘ವಾರಂಟ್ ಅನುಸಾರ ಆರೋಪಿಯನ್ನು ಬಂಧಿಸಲು ತೆರಳುವ ಮುನ್ನ ಸ್ಥಳೀಯ ಠಾಣೆಗೆ ಬರುವಂತೆ ನಮ್ಮ ತಂಡಕ್ಕೆ ತಿಳಿಸಲಾಯಿತು. ಈ ನಡೆಯನ್ನು ಸಂಪೂರ್ಣ ಸಹಕಾರ ಎನ್ನಲಾಗದು’ ಎಂದು ಜೋಶಿ ಪ್ರತಿಕ್ರಿಯಿಸಿದ್ದಾರೆ.</p>.<p>‘ರಾಜಸ್ಥಾನ ಪೊಲೀಸರ ಕಾರ್ಯಾಚರಣೆಗೆ ನಾವು ಯಾವುದೇ ರೀತಿ ಅಡ್ಡಿಪಡಿಸಿಲ್ಲ. ನಿಯಮಗಳಿಗೆ ಅನುಸಾರವಾಗಿಯೇ ಅವರಿಗೆ ನೆರವು ನೀಡಿದ್ದೇವೆ’ ಎಂದು ನೋಯ್ಡಾದ (ಸೆಂಟ್ರಲ್) ಹೆಚ್ಚುವರಿ ಡಿಸಿಪಿ ಎಲಾಮಾರಾನ್ ಜಿ. ತಿಳಿಸಿದ್ದಾರೆ.</p>.<p>‘ದೆಹಲಿಯ ಜಹಾಂಗಿರ್ಪುರಿಯಲ್ಲಿ ನಡೆದ ಕಟ್ಟಡಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಗೆ ಪ್ರತೀಕಾರವಾಗಿ ರಾಜಸ್ಥಾನ ಸರ್ಕಾರ ಆಲ್ವಾರ್ ಜಿಲ್ಲೆಯ ರಾಜಗಡದಲ್ಲಿನ ದೇವಸ್ಥಾನವನ್ನು ಕೆಡವಿ ಹಾಕಿತು ಎಂಬುದಾಗಿ ಸುಳ್ಳು ಮಾಹಿತಿಯನ್ನು ಚೋಪ್ರಾ ಪ್ರಸಾರ ಮಾಡಿದ್ದರು. ಈ ಸಂಬಂಧ ಡುಂಗರಪುರದ ಕೊತ್ವಾಲಿ ಠಾಣೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>