<p><strong>ಜೈಪುರ</strong>: ತಮ್ಮ ನೇತೃತ್ವದ ಸರ್ಕಾರ ಉರುಳಿಸುವುದಕ್ಕಾಗಿ ಕಾಂಗ್ರೆಸ್ನ ಬಂಡಾಯ ಮುಖಂಡ ಸಚಿನ್ ಪೈಲಟ್ ಅವರು ಬಿಜೆಪಿ ಜತೆಸೇರಿ ಶಾಸಕರ ಖರೀದಿ ಸಂಚು ನಡೆಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.</p>.<p>ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಮಂಗಳವಾರ ವಜಾ ಮಾಡಲಾಗಿದೆ.</p>.<p>‘ಪ್ರದೇಶ ಕಾಂಗ್ರೆಸ್ನ ಮಾಜಿ ಅಧ್ಯಕ್ಷರೇ ನೇರವಾಗಿ ವ್ಯವಹಾರ ನಡೆಸಿದ್ದಾರೆ’ ಎಂದು ಗೆಹ್ಲೋಟ್ ಹೇಳಿದ್ದಾರೆ.</p>.<p>‘ಶಾಸಕರ ಖರೀದಿ ನಡೆಸಲು ಯತ್ನಿಸಿದ್ದಕ್ಕೆ ನಮ್ಮಲ್ಲಿ ಪುರಾವೆ ಇದೆ. ಹಣ ವರ್ಗಾವಣೆಯೂ ಆಗಿದೆ. ಏನೂ ಆಗಿಯೇ ಇಲ್ಲ ಎಂದು ಸ್ಪಷ್ಟೀಕರಣ ಕೊಟ್ಟವರು ಯಾರು? ಸಂಚಿನ ಭಾಗವಾಗಿದ್ದವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ’ ಎಂದು ಅವರು ಹೇಳಿದರು.</p>.<p><strong>ಅನರ್ಹತೆ:</strong> ಪೈಲಟ್ ಮತ್ತು ಅವರ ಬೆಂಬಲಿಗರಾದ 18 ಶಾಸಕರಿಗೆ ಸಭಾಧ್ಯಕ್ಷ ಸಿ.ಪಿ.ಜೋಶಿ, ಅನರ್ಹತೆಯ ನೋಟಿಸ್ ಜಾರಿ ಮಾಡಿದ್ದಾರೆ. </p>.<p>‘ಪೈಲಟ್ ಅವರಿಗೆ ಪಕ್ಷದ ಬಾಗಿಲು ಮುಚ್ಚಿಲ್ಲ. ಅವರು ಬಿಜೆಪಿಯ ಭ್ರಮಾತ್ಮಕ ಬಲೆಯಿಂದ ಹೊರಗೆ ಬರುವುದಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ರಾಜಸ್ಥಾನ ಕಾಂಗ್ರೆಸ್ನ ಉಸ್ತುವಾರಿ ಹೊತ್ತಿರುವ ಅವಿನಾಶ್ ಪಾಂಡೆ ಟ್ವೀಟ್ ಮಾಡಿದ್ದಾರೆ.</p>.<p><strong>ತಳಮಟ್ಟದಲ್ಲೂ ಸಂಕಷ್ಟ</strong><br />ರಾಜಸ್ಥಾನ ಕಾಂಗ್ರೆಸ್ನ ಜಿಲ್ಲಾ ಮತ್ತು ತಾಲ್ಲೂಕು ಸಮಿತಿಗಳೆಲ್ಲವನ್ನೂ ಬರ್ಖಾಸ್ತು ಮಾಡಲಾಗಿದೆ. ಪಕ್ಷದ ತಳಮಟ್ಟದ ಪದಾಧಿಕಾರಿ ಸ್ಥಾನಗಳಲ್ಲಿ ಇರುವ ಪೈಲಟ್ ಬೆಂಬಲಿಗರನ್ನು ಹೊರಗೆ ಅಟ್ಟುವುದು ಇದರ ಉದ್ದೇಶ ಎಂದು ಮೂಲಗಳು ಹೇಳಿವೆ.</p>.<p>**</p>.<p>ಚಂದ ಇಂಗ್ಲಿಷ್ ಮಾತನಾಡುವುದು ಅಥವಾ ಹೇಳಿಕೆ ಕೊಡುವುದು ಎಲ್ಲವೂ ಅಲ್ಲ. ಹೃದಯದಲ್ಲಿ ಏನಿದೆ, ನಿಮ್ಮ ಬದ್ಧತೆ ಏನು ಎಂಬುದೆಲ್ಲವೂ ಈಗ ಬಯಲಾಗಿದೆ.<br />-<em><strong>ಅಶೋಕ್ ಗೆಹ್ಲೋಟ್, ರಾಜಸ್ಥಾನ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ತಮ್ಮ ನೇತೃತ್ವದ ಸರ್ಕಾರ ಉರುಳಿಸುವುದಕ್ಕಾಗಿ ಕಾಂಗ್ರೆಸ್ನ ಬಂಡಾಯ ಮುಖಂಡ ಸಚಿನ್ ಪೈಲಟ್ ಅವರು ಬಿಜೆಪಿ ಜತೆಸೇರಿ ಶಾಸಕರ ಖರೀದಿ ಸಂಚು ನಡೆಸಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.</p>.<p>ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದ ಪೈಲಟ್ ಅವರನ್ನು ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಮಂಗಳವಾರ ವಜಾ ಮಾಡಲಾಗಿದೆ.</p>.<p>‘ಪ್ರದೇಶ ಕಾಂಗ್ರೆಸ್ನ ಮಾಜಿ ಅಧ್ಯಕ್ಷರೇ ನೇರವಾಗಿ ವ್ಯವಹಾರ ನಡೆಸಿದ್ದಾರೆ’ ಎಂದು ಗೆಹ್ಲೋಟ್ ಹೇಳಿದ್ದಾರೆ.</p>.<p>‘ಶಾಸಕರ ಖರೀದಿ ನಡೆಸಲು ಯತ್ನಿಸಿದ್ದಕ್ಕೆ ನಮ್ಮಲ್ಲಿ ಪುರಾವೆ ಇದೆ. ಹಣ ವರ್ಗಾವಣೆಯೂ ಆಗಿದೆ. ಏನೂ ಆಗಿಯೇ ಇಲ್ಲ ಎಂದು ಸ್ಪಷ್ಟೀಕರಣ ಕೊಟ್ಟವರು ಯಾರು? ಸಂಚಿನ ಭಾಗವಾಗಿದ್ದವರೇ ಸ್ಪಷ್ಟೀಕರಣ ಕೊಟ್ಟಿದ್ದಾರೆ’ ಎಂದು ಅವರು ಹೇಳಿದರು.</p>.<p><strong>ಅನರ್ಹತೆ:</strong> ಪೈಲಟ್ ಮತ್ತು ಅವರ ಬೆಂಬಲಿಗರಾದ 18 ಶಾಸಕರಿಗೆ ಸಭಾಧ್ಯಕ್ಷ ಸಿ.ಪಿ.ಜೋಶಿ, ಅನರ್ಹತೆಯ ನೋಟಿಸ್ ಜಾರಿ ಮಾಡಿದ್ದಾರೆ. </p>.<p>‘ಪೈಲಟ್ ಅವರಿಗೆ ಪಕ್ಷದ ಬಾಗಿಲು ಮುಚ್ಚಿಲ್ಲ. ಅವರು ಬಿಜೆಪಿಯ ಭ್ರಮಾತ್ಮಕ ಬಲೆಯಿಂದ ಹೊರಗೆ ಬರುವುದಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ರಾಜಸ್ಥಾನ ಕಾಂಗ್ರೆಸ್ನ ಉಸ್ತುವಾರಿ ಹೊತ್ತಿರುವ ಅವಿನಾಶ್ ಪಾಂಡೆ ಟ್ವೀಟ್ ಮಾಡಿದ್ದಾರೆ.</p>.<p><strong>ತಳಮಟ್ಟದಲ್ಲೂ ಸಂಕಷ್ಟ</strong><br />ರಾಜಸ್ಥಾನ ಕಾಂಗ್ರೆಸ್ನ ಜಿಲ್ಲಾ ಮತ್ತು ತಾಲ್ಲೂಕು ಸಮಿತಿಗಳೆಲ್ಲವನ್ನೂ ಬರ್ಖಾಸ್ತು ಮಾಡಲಾಗಿದೆ. ಪಕ್ಷದ ತಳಮಟ್ಟದ ಪದಾಧಿಕಾರಿ ಸ್ಥಾನಗಳಲ್ಲಿ ಇರುವ ಪೈಲಟ್ ಬೆಂಬಲಿಗರನ್ನು ಹೊರಗೆ ಅಟ್ಟುವುದು ಇದರ ಉದ್ದೇಶ ಎಂದು ಮೂಲಗಳು ಹೇಳಿವೆ.</p>.<p>**</p>.<p>ಚಂದ ಇಂಗ್ಲಿಷ್ ಮಾತನಾಡುವುದು ಅಥವಾ ಹೇಳಿಕೆ ಕೊಡುವುದು ಎಲ್ಲವೂ ಅಲ್ಲ. ಹೃದಯದಲ್ಲಿ ಏನಿದೆ, ನಿಮ್ಮ ಬದ್ಧತೆ ಏನು ಎಂಬುದೆಲ್ಲವೂ ಈಗ ಬಯಲಾಗಿದೆ.<br />-<em><strong>ಅಶೋಕ್ ಗೆಹ್ಲೋಟ್, ರಾಜಸ್ಥಾನ ಮುಖ್ಯಮಂತ್ರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>