<p><strong>ಜೈಪುರ</strong>: ಶಾಸಕ ಸ್ಥಾನದಿಂದ ಅನರ್ಹತೆಯ ತೂಗುಗತ್ತಿ ಎದುರಿಸುತ್ತಿರುವ ರಾಜಸ್ಥಾನ ಕಾಂಗ್ರೆಸ್ನ ಸಚಿನ್ ಪೈಲಟ್ ನೇತೃತ್ವದ ಬಣ ಸದ್ಯಕ್ಕೆ ನಿರಾಳವಾಗಿದೆ.</p>.<p>ರಾಜಸ್ಥಾನ ವಿಧಾನಸಭೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ವಿಚಾರದಲ್ಲಿ 19 ಶಾಸಕರ ವಿರುದ್ಧ ಮಂಗಳವಾರ<br />ದವರೆಗೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಸೂಚಿಸಿದೆ. ಸ್ಪೀಕರ್ ನೀಡಿದ್ದ ನೋಟಿಸ್ ಪ್ರಶ್ನಿಸಿ ಪೈಲಟ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ಬೆಳಗ್ಗೆ 10 ಗಂಟೆಗೆ ಮುಂದೂಡಲಾಗಿದೆ.</p>.<p>ಮಂಗಳವಾರ ಸಂಜೆ 5.30ರವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸ್ಪೀಕರ್ ಸಿ.ಪಿ. ಜೋಶಿ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ಕೊಟ್ಟರು.</p>.<p>ಸುಪ್ರೀಂ ಕೋರ್ಟ್ನ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ಮುಕುಲ್ ರೋಹಟಗಿ ಅವರು ಪೈಲಟ್ ಪರವಾಗಿ ವಾದಿಸಿದರು. ಸಾಳ್ವೆ ಅವರು ಹಲವು ಅಂತರರಾಷ್ಟ್ರೀಯ ವ್ಯಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಪರವಾಗಿ ವಾದಿಸಿದ್ದಾರೆ. ರೋಹಟಗಿ ಅವರು ಈ ಹಿಂದೆ ಅಟಾರ್ನಿ ಜನರಲ್ ಆಗಿದ್ದರು. ಸ್ಪೀಕರ್ ಪರವಾಗಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಅವರು ವಾದಿಸಿದ್ದಾರೆ.</p>.<p><strong>ಇಬ್ಬರು ಶಾಸಕರ ಅಮಾನತು</strong><br />ರಾಜಸ್ಥಾನ ರಾಜಕಾರಣದಲ್ಲಿ ಶುಕ್ರವಾರವೂ ಹಲವು ಬೆಳವಣಿಗೆಗಳು ನಡೆದಿವೆ. ರಾಜ್ಯ ಸರ್ಕಾರವನ್ನು ಉರುಳಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿ ಎಫ್ಐಆರ್ ದಾಖಲಿಸಲಾಗಿದೆ.</p>.<p>ಪೈಲಟ್ಗೆ ನಿಷ್ಠರಾಗಿರುವ ಶಾಸಕರಾದ ಭನ್ವರ್ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕಾಂಗ್ರೆಸ್ ಅಮಾನತು ಮಾಡಿದೆ.</p>.<p>ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಶರ್ಮಾ ಮತ್ತು ವಿಶ್ವೇಂದ್ರ ಜತೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೊ ಗುರುವಾರವೇ ಬಹಿರಂಗವಾಗಿದೆ. ಸರ್ಕಾರ ಉರುಳಿಸುವ ಸಂಚಿನಲ್ಲಿ ಶೇಖಾವತ್ ಭಾಗಿಯಾಗಿದ್ದಾರೆ ಎಂದು ಈ ಆಡಿಯೊವನ್ನು ಇರಿಸಿಕೊಂಡು ಕಾಂಗ್ರೆಸ್ ಆರೋಪಿಸಿದೆ. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ.</p>.<p>ಆಡಿಯೊದಲ್ಲಿ ಇರುವುದು ತಮ್ಮ ಧ್ವನಿ ಅಲ್ಲ, ಯಾವುದೇ ತನಿಖೆಗೆ ಸಿದ್ಧ ಎಂದು ಶೇಖಾವತ್ ಹೇಳಿದ್ದಾರೆ.</p>.<p>ಆಡಿಯೊ ಪ್ರಕರಣದ ತನಿಖೆಯನ್ನು ರಾಜಸ್ಥಾನದ ವಿಶೇಷ ಕಾರ್ಯಾಚರಣೆ ಪಡೆ (ಎಸ್ಒಜಿ) ಪೊಲೀಸರು ಚುರುಕುಗೊಳಿಸಿದ್ದಾರೆ. ಆಡಿಯೊದಲ್ಲಿರುವ ಧ್ವನಿಗಳ ದೃಢೀಕರಣಕ್ಕಾಗಿ ಶರ್ಮಾ ಮತ್ತು ವಿಶ್ವೇಂದ್ರ ಅವರ ಧ್ವನಿ ಮಾದರಿ ಪಡೆದುಕೊಳ್ಳಲುಪೈಲಟ್ ಬಣದ ಶಾಸಕರು ತಂಗಿರುವ ಹರಿಯಾಣದ ಮನೇಸರ್ನಲ್ಲಿರುವ ರಿಸಾರ್ಟ್ಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ರಿಸಾರ್ಟ್ ಹೊರಭಾಗವು ನಾಟಕೀಯ ದೃಶ್ಯಗಳಿಗೆ ಸಾಕ್ಷಿಯಾಯಿತು. ರಾಜಸ್ಥಾನ ಪೊಲೀಸರನ್ನು ಹರಿಯಾಣ ಪೊಲೀಸರು ತಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ಶಾಸಕ ಸ್ಥಾನದಿಂದ ಅನರ್ಹತೆಯ ತೂಗುಗತ್ತಿ ಎದುರಿಸುತ್ತಿರುವ ರಾಜಸ್ಥಾನ ಕಾಂಗ್ರೆಸ್ನ ಸಚಿನ್ ಪೈಲಟ್ ನೇತೃತ್ವದ ಬಣ ಸದ್ಯಕ್ಕೆ ನಿರಾಳವಾಗಿದೆ.</p>.<p>ರಾಜಸ್ಥಾನ ವಿಧಾನಸಭೆ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ವಿಚಾರದಲ್ಲಿ 19 ಶಾಸಕರ ವಿರುದ್ಧ ಮಂಗಳವಾರ<br />ದವರೆಗೆ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಸೂಚಿಸಿದೆ. ಸ್ಪೀಕರ್ ನೀಡಿದ್ದ ನೋಟಿಸ್ ಪ್ರಶ್ನಿಸಿ ಪೈಲಟ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ಬೆಳಗ್ಗೆ 10 ಗಂಟೆಗೆ ಮುಂದೂಡಲಾಗಿದೆ.</p>.<p>ಮಂಗಳವಾರ ಸಂಜೆ 5.30ರವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸ್ಪೀಕರ್ ಸಿ.ಪಿ. ಜೋಶಿ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ಕೊಟ್ಟರು.</p>.<p>ಸುಪ್ರೀಂ ಕೋರ್ಟ್ನ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ಮುಕುಲ್ ರೋಹಟಗಿ ಅವರು ಪೈಲಟ್ ಪರವಾಗಿ ವಾದಿಸಿದರು. ಸಾಳ್ವೆ ಅವರು ಹಲವು ಅಂತರರಾಷ್ಟ್ರೀಯ ವ್ಯಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಪರವಾಗಿ ವಾದಿಸಿದ್ದಾರೆ. ರೋಹಟಗಿ ಅವರು ಈ ಹಿಂದೆ ಅಟಾರ್ನಿ ಜನರಲ್ ಆಗಿದ್ದರು. ಸ್ಪೀಕರ್ ಪರವಾಗಿ ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಅವರು ವಾದಿಸಿದ್ದಾರೆ.</p>.<p><strong>ಇಬ್ಬರು ಶಾಸಕರ ಅಮಾನತು</strong><br />ರಾಜಸ್ಥಾನ ರಾಜಕಾರಣದಲ್ಲಿ ಶುಕ್ರವಾರವೂ ಹಲವು ಬೆಳವಣಿಗೆಗಳು ನಡೆದಿವೆ. ರಾಜ್ಯ ಸರ್ಕಾರವನ್ನು ಉರುಳಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿ ಎಫ್ಐಆರ್ ದಾಖಲಿಸಲಾಗಿದೆ.</p>.<p>ಪೈಲಟ್ಗೆ ನಿಷ್ಠರಾಗಿರುವ ಶಾಸಕರಾದ ಭನ್ವರ್ಲಾಲ್ ಶರ್ಮಾ ಮತ್ತು ವಿಶ್ವೇಂದ್ರ ಸಿಂಗ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಕಾಂಗ್ರೆಸ್ ಅಮಾನತು ಮಾಡಿದೆ.</p>.<p>ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಶರ್ಮಾ ಮತ್ತು ವಿಶ್ವೇಂದ್ರ ಜತೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೊ ಗುರುವಾರವೇ ಬಹಿರಂಗವಾಗಿದೆ. ಸರ್ಕಾರ ಉರುಳಿಸುವ ಸಂಚಿನಲ್ಲಿ ಶೇಖಾವತ್ ಭಾಗಿಯಾಗಿದ್ದಾರೆ ಎಂದು ಈ ಆಡಿಯೊವನ್ನು ಇರಿಸಿಕೊಂಡು ಕಾಂಗ್ರೆಸ್ ಆರೋಪಿಸಿದೆ. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದೆ.</p>.<p>ಆಡಿಯೊದಲ್ಲಿ ಇರುವುದು ತಮ್ಮ ಧ್ವನಿ ಅಲ್ಲ, ಯಾವುದೇ ತನಿಖೆಗೆ ಸಿದ್ಧ ಎಂದು ಶೇಖಾವತ್ ಹೇಳಿದ್ದಾರೆ.</p>.<p>ಆಡಿಯೊ ಪ್ರಕರಣದ ತನಿಖೆಯನ್ನು ರಾಜಸ್ಥಾನದ ವಿಶೇಷ ಕಾರ್ಯಾಚರಣೆ ಪಡೆ (ಎಸ್ಒಜಿ) ಪೊಲೀಸರು ಚುರುಕುಗೊಳಿಸಿದ್ದಾರೆ. ಆಡಿಯೊದಲ್ಲಿರುವ ಧ್ವನಿಗಳ ದೃಢೀಕರಣಕ್ಕಾಗಿ ಶರ್ಮಾ ಮತ್ತು ವಿಶ್ವೇಂದ್ರ ಅವರ ಧ್ವನಿ ಮಾದರಿ ಪಡೆದುಕೊಳ್ಳಲುಪೈಲಟ್ ಬಣದ ಶಾಸಕರು ತಂಗಿರುವ ಹರಿಯಾಣದ ಮನೇಸರ್ನಲ್ಲಿರುವ ರಿಸಾರ್ಟ್ಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ರಿಸಾರ್ಟ್ ಹೊರಭಾಗವು ನಾಟಕೀಯ ದೃಶ್ಯಗಳಿಗೆ ಸಾಕ್ಷಿಯಾಯಿತು. ರಾಜಸ್ಥಾನ ಪೊಲೀಸರನ್ನು ಹರಿಯಾಣ ಪೊಲೀಸರು ತಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>