<p><strong>ಜೈಪುರ:</strong> ಜೈಪುರ - ಚಕ್ಸು ಹೆದ್ದಾರಿಯಲ್ಲಿ ವ್ಯಾನ್- ಕಂಟೇನರ್ ಲಾರಿ ನಡುವೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆ(ರೀಟ್) ಬರೆಯಲು ಹೋಗುತ್ತಿದ್ದ ಆರು ಅಭ್ಯರ್ಥಿಗಳು ಸಾವನ್ನಪ್ಪಿದ್ದು,ಇತರೆ ಐವರು ಗಾಯಗೊಂಡಿದ್ದಾರೆ.</p>.<p>ಈ ಆರು ಮಂದಿ ಅಭ್ಯರ್ಥಿಗಳು ರೀಟ್ ಪರೀಕ್ಷೆ ಬರೆಯುಲು ಬಾರಾನ್ನಿಂದ ಸೀಕರ್ಗೆ ವ್ಯಾನ್ನಲ್ಲಿ ತೆರಳುತ್ತಿದ್ದರು. ವ್ಯಾನ್ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಫಾತ ಸಂಭವಿಸಿದೆ ಎಂದು ಠಾಣಾಧಿಕಾರಿ ಹೀರಾ ಲಾಲ್ ಸೈನಿ ತಿಳಿಸಿದ್ದಾರೆ.</p>.<p>ಮೃತರನ್ನು ವಿಷ್ಣು ನಗರ್, ತೇಜ್ರಾಜ್ ಮೇಘ್ವಾಲ್, ಸತ್ಯನಾರಾಯಣ್, ವೇದಪ್ರಕಾಶ್ ಮೀನಾ, ಸುರೇಶ್ ಬೈರ್ವಾ ಮತ್ತು ದಿಲೀಪ್ ಮೆಹ್ತಾ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬಾರಾನ್ ಜಿಲ್ಲೆಯ ನಿವಾಸಿಗಳಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಗಾಯಗೊಂಡಿರುವವರನ್ನು ನರೇಂದ್ರ, ಅನಿಲ್ ಬೈರ್ವಾ, ಭಗವಾನ್ ನಗರ್, ಹೇಮರಾಜ್ ಬೈರ್ವಾ ಮತ್ತು ಜೋರಾವರ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಸೈನಿ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಘಟನೆ ಕುರಿತು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂದವರಿಗೆ ತಲಾ ₹ 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರವನ್ನು ನೀಡುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಜೈಪುರ - ಚಕ್ಸು ಹೆದ್ದಾರಿಯಲ್ಲಿ ವ್ಯಾನ್- ಕಂಟೇನರ್ ಲಾರಿ ನಡುವೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ರಾಜಸ್ಥಾನ ಶಿಕ್ಷಕರ ಅರ್ಹತಾ ಪರೀಕ್ಷೆ(ರೀಟ್) ಬರೆಯಲು ಹೋಗುತ್ತಿದ್ದ ಆರು ಅಭ್ಯರ್ಥಿಗಳು ಸಾವನ್ನಪ್ಪಿದ್ದು,ಇತರೆ ಐವರು ಗಾಯಗೊಂಡಿದ್ದಾರೆ.</p>.<p>ಈ ಆರು ಮಂದಿ ಅಭ್ಯರ್ಥಿಗಳು ರೀಟ್ ಪರೀಕ್ಷೆ ಬರೆಯುಲು ಬಾರಾನ್ನಿಂದ ಸೀಕರ್ಗೆ ವ್ಯಾನ್ನಲ್ಲಿ ತೆರಳುತ್ತಿದ್ದರು. ವ್ಯಾನ್ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಫಾತ ಸಂಭವಿಸಿದೆ ಎಂದು ಠಾಣಾಧಿಕಾರಿ ಹೀರಾ ಲಾಲ್ ಸೈನಿ ತಿಳಿಸಿದ್ದಾರೆ.</p>.<p>ಮೃತರನ್ನು ವಿಷ್ಣು ನಗರ್, ತೇಜ್ರಾಜ್ ಮೇಘ್ವಾಲ್, ಸತ್ಯನಾರಾಯಣ್, ವೇದಪ್ರಕಾಶ್ ಮೀನಾ, ಸುರೇಶ್ ಬೈರ್ವಾ ಮತ್ತು ದಿಲೀಪ್ ಮೆಹ್ತಾ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬಾರಾನ್ ಜಿಲ್ಲೆಯ ನಿವಾಸಿಗಳಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಗಾಯಗೊಂಡಿರುವವರನ್ನು ನರೇಂದ್ರ, ಅನಿಲ್ ಬೈರ್ವಾ, ಭಗವಾನ್ ನಗರ್, ಹೇಮರಾಜ್ ಬೈರ್ವಾ ಮತ್ತು ಜೋರಾವರ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಸೈನಿ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಘಟನೆ ಕುರಿತು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂದವರಿಗೆ ತಲಾ ₹ 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50 ಸಾವಿರ ಪರಿಹಾರವನ್ನು ನೀಡುವುದಾಗಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>