<p><strong>ಜೈಪುರ: </strong>ರಾಜಸ್ಥಾನದ ಫಲೋಡಿ ಜಿಲ್ಲೆ ಮತೋಡಾ ಗ್ರಾಮದ ಬಳಿ ನಿಂತಿದ್ದ ಟ್ರಕ್ವೊಂದಕ್ಕೆ ಭಾನುವಾರ ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟು, ಇತರ ಇಬ್ಬರು ಗಾಯಗೊಂಡಿದ್ದಾರೆ.</p><p>ಭಾರತ್ ಮಾಲಾ ಹೆದ್ದಾರಿಯ ಮಾತೋಡಾ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಟೆಂಪೊ ಟ್ರಾವೆಲರ್ನಲ್ಲಿ ಯಾತ್ರಾರ್ಥಿಗಳು ಸಂಚರಿಸುತ್ತಿದ್ದರು. </p><p>‘ಮೃತರು ಜೋಧಪುರ ನಿವಾಸಿಗಳಾಗಿದ್ದು, ಬಿಕಾನೇರ್ನಲ್ಲಿರುವ ಕೋಲಾಯತ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜೋಧಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜೋಧಪುರ ಪೊಲೀಸ್ ಕಮಿಷನರ್ ಓಂ ಪ್ರಕಾಶ್ ತಿಳಿಸಿದ್ದಾರೆ.</p><p>ಘಟನೆಗೆ ರಾಜಸ್ಥಾನದ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಸೂಚಿಸಿದ್ದಾರೆ. </p>.ಮೂರೂವರೆ ವರ್ಷಗಳಲ್ಲಿ 1,463 ರಸ್ತೆ ಅಪಘಾತ ಪ್ರಕರಣ ದಾಖಲು:ಸಾವಿನ ಮನೆಗೆ 587 ಮಂದಿ.ಮಹಾರಾಷ್ಟ್ರದಲ್ಲಿ ಅಪಘಾತ: ಬೀದರ್ ತಾಲ್ಲೂಕಿನ ನಾಲ್ವರು ಸಾವು, ಇಬ್ಬರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ರಾಜಸ್ಥಾನದ ಫಲೋಡಿ ಜಿಲ್ಲೆ ಮತೋಡಾ ಗ್ರಾಮದ ಬಳಿ ನಿಂತಿದ್ದ ಟ್ರಕ್ವೊಂದಕ್ಕೆ ಭಾನುವಾರ ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟು, ಇತರ ಇಬ್ಬರು ಗಾಯಗೊಂಡಿದ್ದಾರೆ.</p><p>ಭಾರತ್ ಮಾಲಾ ಹೆದ್ದಾರಿಯ ಮಾತೋಡಾ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಟೆಂಪೊ ಟ್ರಾವೆಲರ್ನಲ್ಲಿ ಯಾತ್ರಾರ್ಥಿಗಳು ಸಂಚರಿಸುತ್ತಿದ್ದರು. </p><p>‘ಮೃತರು ಜೋಧಪುರ ನಿವಾಸಿಗಳಾಗಿದ್ದು, ಬಿಕಾನೇರ್ನಲ್ಲಿರುವ ಕೋಲಾಯತ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜೋಧಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜೋಧಪುರ ಪೊಲೀಸ್ ಕಮಿಷನರ್ ಓಂ ಪ್ರಕಾಶ್ ತಿಳಿಸಿದ್ದಾರೆ.</p><p>ಘಟನೆಗೆ ರಾಜಸ್ಥಾನದ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆಯೂ ಸೂಚಿಸಿದ್ದಾರೆ. </p>.ಮೂರೂವರೆ ವರ್ಷಗಳಲ್ಲಿ 1,463 ರಸ್ತೆ ಅಪಘಾತ ಪ್ರಕರಣ ದಾಖಲು:ಸಾವಿನ ಮನೆಗೆ 587 ಮಂದಿ.ಮಹಾರಾಷ್ಟ್ರದಲ್ಲಿ ಅಪಘಾತ: ಬೀದರ್ ತಾಲ್ಲೂಕಿನ ನಾಲ್ವರು ಸಾವು, ಇಬ್ಬರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>