<p><strong>ಇಂದೋರ್ (ಮಧ್ಯಪ್ರದೇಶ):</strong> ತಿರುವನಂತಪುರಂ-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ಪ್ರೆಸ್ನ ಎಸಿ ಬೋಗಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ ರೈಲು ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.</p><p>68 ಪ್ರಯಾಣಿಕರಿದ್ದ ರೈಲಿನ (12431) ಬಿ-1 ಬೋಗಿಯಲ್ಲಿ ಬೆಳಿಗ್ಗೆ 5.15ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ. ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಎಂದು ರೈಲ್ವೆಯ ಹಿರಿಯ ವಾಣಿಜ್ಯ ವ್ಯವಸ್ಥಾಪಕಿ ಸೌರ್ಬಾ ಜೈನ್ ತಿಳಿಸಿದ್ದಾರೆ.</p><p>ರೈಲ್ವೆಯ ಕೋಟ ವಿಭಾಗದ ಅಡಿಯಲ್ಲಿ ಅಲೋಟ್ ಮತ್ತು ಲುನಿರಿಚಾ ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ ಎಂದು ರತ್ಲಂ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮುಖೇಶ್ ಕುಮಾರ್ ತಿಳಿಸಿದ್ದಾರೆ.</p><p>ಬೆಂಕಿ ಹೊತ್ತಿಕೊಂಡಿದ್ದ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಓವರ್ಹೆಡ್ ವಿದ್ಯುತ್ ಸರಬರಾಜನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು ಎಂದೂ ತಿಳಿಸಿದ್ದಾರೆ.</p><p>ಬೋಗಿಯಲ್ಲಿದ್ದ ಯಾವುದೇ ಪ್ರಯಾಣಿಕನಿಗೆ ಗಾಯಗಳಾಗಿಲ್ಲ. ಕೋಟವರೆಗೆ ಅವರ ಪ್ರಯಾಣಕ್ಕೆ ಪರ್ಯಾಯ ಮಾರ್ಗ ಹುಡುಕಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್ (ಮಧ್ಯಪ್ರದೇಶ):</strong> ತಿರುವನಂತಪುರಂ-ಹಜರತ್ ನಿಜಾಮುದ್ದೀನ್ ರಾಜಧಾನಿ ಎಕ್ಸ್ಪ್ರೆಸ್ನ ಎಸಿ ಬೋಗಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಬೆಳಿಗ್ಗೆ ರೈಲು ಮಧ್ಯಪ್ರದೇಶದ ರತ್ಲಂ ಜಿಲ್ಲೆಯಲ್ಲಿ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.</p><p>68 ಪ್ರಯಾಣಿಕರಿದ್ದ ರೈಲಿನ (12431) ಬಿ-1 ಬೋಗಿಯಲ್ಲಿ ಬೆಳಿಗ್ಗೆ 5.15ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ. ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ ಎಂದು ರೈಲ್ವೆಯ ಹಿರಿಯ ವಾಣಿಜ್ಯ ವ್ಯವಸ್ಥಾಪಕಿ ಸೌರ್ಬಾ ಜೈನ್ ತಿಳಿಸಿದ್ದಾರೆ.</p><p>ರೈಲ್ವೆಯ ಕೋಟ ವಿಭಾಗದ ಅಡಿಯಲ್ಲಿ ಅಲೋಟ್ ಮತ್ತು ಲುನಿರಿಚಾ ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ ಎಂದು ರತ್ಲಂ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮುಖೇಶ್ ಕುಮಾರ್ ತಿಳಿಸಿದ್ದಾರೆ.</p><p>ಬೆಂಕಿ ಹೊತ್ತಿಕೊಂಡಿದ್ದ ಕೋಚ್ ಅನ್ನು ರೈಲಿನಿಂದ ಬೇರ್ಪಡಿಸಲಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಓವರ್ಹೆಡ್ ವಿದ್ಯುತ್ ಸರಬರಾಜನ್ನು ತಕ್ಷಣವೇ ಸ್ಥಗಿತಗೊಳಿಸಲಾಯಿತು ಎಂದೂ ತಿಳಿಸಿದ್ದಾರೆ.</p><p>ಬೋಗಿಯಲ್ಲಿದ್ದ ಯಾವುದೇ ಪ್ರಯಾಣಿಕನಿಗೆ ಗಾಯಗಳಾಗಿಲ್ಲ. ಕೋಟವರೆಗೆ ಅವರ ಪ್ರಯಾಣಕ್ಕೆ ಪರ್ಯಾಯ ಮಾರ್ಗ ಹುಡುಕಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>