<p>ಚೆನ್ನೈ: ತನ್ನ ರಾಜಕೀಯ ಪ್ರವೇಶಕ್ಕಾಗಿಯೇ ಸ್ಥಾಪಿಸಲಾಗಿದ್ದ ‘ರಜನಿ ಮಕ್ಕಳ್ ಮಂದಿರಂ’ (ಆರ್ಎಂಎಂ) ವೇದಿಕೆಯನ್ನು ವಿಸರ್ಜಿಸುತ್ತಿರುವುದಾಗಿ ಸೋಮವಾರ ಘೋಷಿಸಿರುವ ಸೂಪರ್ಸ್ಟಾರ್ ರಜನಿಕಾಂತ್, ಭವಿಷ್ಯದಲ್ಲಿ ತಾವು ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಪುನರುಚ್ಛರಿಸಿದ್ದಾರೆ.</p>.<p>ಭವಿಷ್ಯದಲ್ಲಿ ರಜನಿ ರಾಜಕೀಯ ಪ್ರವೇಶಿಸುತ್ತಾರೋ ಅಥವಾ ಇಲ್ಲವೋ ಎಂಬ ಬಗ್ಗೆ ಅವರ ಅಭಿಮಾನಿಗಳು ಮತ್ತು ಆರ್ಆರ್ಎಂ ವೇದಿಕೆಯ ಪದಾಧಿಕಾರಿಗಳು ಸೋಮವಾರ ಪ್ರಶ್ನೆಗಳನ್ನು ಹುಟ್ಟು ಹಾಕಿದ ಕೆಲವೇ ಗಂಟೆಗಳಲ್ಲಿ, ರಜನಿಕಾಂತ್ ಅವರು, ‘ನಾನು ರಾಜಕೀಯ ಪ್ರವೇಶಿಸುವುದಿಲ್ಲ‘ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಕೆಲವು ಕಾರಣಗಳು, ಸನ್ನಿವೇಶಗಳಿಂದಾಗಿ ಅಂದುಕೊಂಡದ್ದು ಕಾರ್ಯರೂಪಕ್ಕೆ ಬರಲಿಲ್ಲ ಎಂದು ಹೇಳಿರುವ ರಜನಿಕಾಂತ್, ಆ ಕಾರಣದಿಂದಲೇ ಈ ಹಿಂದೆ ರಾಜಕೀಯ ಪ್ರವೇಶವನ್ನು ಕೈಬಿಟ್ಟಿದ್ದಾಗಿ ತಿಳಿಸಿದ್ದಾರೆ.</p>.<p>‘ನಾನು ಭವಿಷ್ಯದಲ್ಲಿ ರಾಜಕೀಯ ಸೇರಬೇಕೆಂಬ ಯಾವುದೇ ಉದ್ದೇಶವನ್ನೂ ಹೊಂದಿಲ್ಲ‘ ಎಂದು ರಜನಿ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ಆರ್ಎಂ ವೇದಿಕೆಯನ್ನು ವಿಸರ್ಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಜನಿಕಾಂತ್ ಫ್ಯಾನ್ಸ್ ಫೋರಂ (ರಜನಿಕಾಂತ್ ರಸಿಗರ್ ನರ್ಪಾನಿ ಮಂದ್ರಂ) ಈ ಮೊದಲಿನಂತೆಯೇ ಕಾರ್ಯನಿರ್ವಹಿಸಲಿದೆ. ಈ ವೇದಿಕೆಯ ಅಡಿಯಲ್ಲಿ ಅಭಿಮಾನಿಗಳು ಕಾರ್ಯಚಟುವಟಿಕೆಗಳನ್ನು ಮುಂದುವರಿಸಲಿದ್ದಾರೆ‘ ಎಂದು ಅವರು ತಿಳಿಸಿದ್ದಾರೆ.</p>.<p>‘ಕಳೆದ ವರ್ಷ ನಾನು ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಪ್ರಕಟಿಸಿದ ನಂತರ, ತನ್ನ ರಾಜಕೀಯ ಪ್ರವೇಶಕ್ಕಾಗಿಯೇ ರಚಿಸಲಾಗಿದ್ದ ಆರ್ಆರ್ಎಂ ವೇದಿಕೆಯ ಕರ್ತವ್ಯ ಮತ್ತು ಗುರಿಗಳು ಏನು ಎಂಬುದರ ಬಗ್ಗೆ ಸ್ಪಷ್ಟಪಡಿಸುವುದು ನನ್ನ ಕರ್ತವ್ಯವಾಗಿತ್ತು. ಆ ಕೆಲಸವನ್ನು ಈಗ ಮಾಡಿದ್ದೇನೆ ಎಂದು ರಜನಿ ಹೇಳಿದ್ದಾರೆ.</p>.<p>ರಾಜಕೀಯೇತರ ಕಲ್ಯಾಣ ಸಂಘಟನೆಯಾಗಿದ್ದ ರಜನಿಕಾಂತ್ ಅಭಿಮಾನಿಗಳ ಒಕ್ಕೂಟವನ್ನು 2018ರಲ್ಲಿ ‘ಆರ್ಎಂಎಂ‘ ವೇದಿಕೆಯಾಗಿ ಪರಿವರ್ತಿಸಲಾಗಿತ್ತು. ನಂತರ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಈ ವೇದಿಕೆಯ ಪದಾಧಿಕಾರಿಗಳನ್ನು ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ: ತನ್ನ ರಾಜಕೀಯ ಪ್ರವೇಶಕ್ಕಾಗಿಯೇ ಸ್ಥಾಪಿಸಲಾಗಿದ್ದ ‘ರಜನಿ ಮಕ್ಕಳ್ ಮಂದಿರಂ’ (ಆರ್ಎಂಎಂ) ವೇದಿಕೆಯನ್ನು ವಿಸರ್ಜಿಸುತ್ತಿರುವುದಾಗಿ ಸೋಮವಾರ ಘೋಷಿಸಿರುವ ಸೂಪರ್ಸ್ಟಾರ್ ರಜನಿಕಾಂತ್, ಭವಿಷ್ಯದಲ್ಲಿ ತಾವು ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಪುನರುಚ್ಛರಿಸಿದ್ದಾರೆ.</p>.<p>ಭವಿಷ್ಯದಲ್ಲಿ ರಜನಿ ರಾಜಕೀಯ ಪ್ರವೇಶಿಸುತ್ತಾರೋ ಅಥವಾ ಇಲ್ಲವೋ ಎಂಬ ಬಗ್ಗೆ ಅವರ ಅಭಿಮಾನಿಗಳು ಮತ್ತು ಆರ್ಆರ್ಎಂ ವೇದಿಕೆಯ ಪದಾಧಿಕಾರಿಗಳು ಸೋಮವಾರ ಪ್ರಶ್ನೆಗಳನ್ನು ಹುಟ್ಟು ಹಾಕಿದ ಕೆಲವೇ ಗಂಟೆಗಳಲ್ಲಿ, ರಜನಿಕಾಂತ್ ಅವರು, ‘ನಾನು ರಾಜಕೀಯ ಪ್ರವೇಶಿಸುವುದಿಲ್ಲ‘ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಕೆಲವು ಕಾರಣಗಳು, ಸನ್ನಿವೇಶಗಳಿಂದಾಗಿ ಅಂದುಕೊಂಡದ್ದು ಕಾರ್ಯರೂಪಕ್ಕೆ ಬರಲಿಲ್ಲ ಎಂದು ಹೇಳಿರುವ ರಜನಿಕಾಂತ್, ಆ ಕಾರಣದಿಂದಲೇ ಈ ಹಿಂದೆ ರಾಜಕೀಯ ಪ್ರವೇಶವನ್ನು ಕೈಬಿಟ್ಟಿದ್ದಾಗಿ ತಿಳಿಸಿದ್ದಾರೆ.</p>.<p>‘ನಾನು ಭವಿಷ್ಯದಲ್ಲಿ ರಾಜಕೀಯ ಸೇರಬೇಕೆಂಬ ಯಾವುದೇ ಉದ್ದೇಶವನ್ನೂ ಹೊಂದಿಲ್ಲ‘ ಎಂದು ರಜನಿ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ಆರ್ಎಂ ವೇದಿಕೆಯನ್ನು ವಿಸರ್ಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಜನಿಕಾಂತ್ ಫ್ಯಾನ್ಸ್ ಫೋರಂ (ರಜನಿಕಾಂತ್ ರಸಿಗರ್ ನರ್ಪಾನಿ ಮಂದ್ರಂ) ಈ ಮೊದಲಿನಂತೆಯೇ ಕಾರ್ಯನಿರ್ವಹಿಸಲಿದೆ. ಈ ವೇದಿಕೆಯ ಅಡಿಯಲ್ಲಿ ಅಭಿಮಾನಿಗಳು ಕಾರ್ಯಚಟುವಟಿಕೆಗಳನ್ನು ಮುಂದುವರಿಸಲಿದ್ದಾರೆ‘ ಎಂದು ಅವರು ತಿಳಿಸಿದ್ದಾರೆ.</p>.<p>‘ಕಳೆದ ವರ್ಷ ನಾನು ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಪ್ರಕಟಿಸಿದ ನಂತರ, ತನ್ನ ರಾಜಕೀಯ ಪ್ರವೇಶಕ್ಕಾಗಿಯೇ ರಚಿಸಲಾಗಿದ್ದ ಆರ್ಆರ್ಎಂ ವೇದಿಕೆಯ ಕರ್ತವ್ಯ ಮತ್ತು ಗುರಿಗಳು ಏನು ಎಂಬುದರ ಬಗ್ಗೆ ಸ್ಪಷ್ಟಪಡಿಸುವುದು ನನ್ನ ಕರ್ತವ್ಯವಾಗಿತ್ತು. ಆ ಕೆಲಸವನ್ನು ಈಗ ಮಾಡಿದ್ದೇನೆ ಎಂದು ರಜನಿ ಹೇಳಿದ್ದಾರೆ.</p>.<p>ರಾಜಕೀಯೇತರ ಕಲ್ಯಾಣ ಸಂಘಟನೆಯಾಗಿದ್ದ ರಜನಿಕಾಂತ್ ಅಭಿಮಾನಿಗಳ ಒಕ್ಕೂಟವನ್ನು 2018ರಲ್ಲಿ ‘ಆರ್ಎಂಎಂ‘ ವೇದಿಕೆಯಾಗಿ ಪರಿವರ್ತಿಸಲಾಗಿತ್ತು. ನಂತರ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಈ ವೇದಿಕೆಯ ಪದಾಧಿಕಾರಿಗಳನ್ನು ನೇಮಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>