ಸೋಮವಾರ ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಪ್ರವೇಶವನ್ನು ಪ್ರಸ್ತಾಪಿಸಿದರಾದರೂ, ಪಕ್ಷಕ್ಕೆ ಚಾಲನೆ ನೀಡುವ ದಿನಾಂಕವನ್ನು ತಿಳಿಸಲಿಲ್ಲ. ಪವಾಡದಲ್ಲಿ ನಂಬಿಕೆ ಇರಿಸಿಕೊಂಡಿರುವ ಅವರು, ‘ತಮಿಳುನಾಡಿನಲ್ಲಿ ಸದ್ಯದ ರಾಜಕೀಯ ಸ್ಥಿತಿಯನ್ನು ಬದಲಾಯಿಸಿ, ಚುನಾವಣೆಯಲ್ಲಿ ಗೆಲ್ಲಬೇಕಾದರೆ ದೊಡ್ಡ ಅಲೆಯೊಂದು ಏಳುವ ಅಗತ್ಯವಿದೆ’ ಎಂದು ಹೇಳಿದರು.