<p><strong>ಚೆನ್ನೈ </strong>: ‘ಲೋಕಸಭೆ ಹಾಗೂ ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾಪಕ್ಕೆ ಸೂಪರ್ಸ್ಟಾರ್ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಇದರಿಂದ ಸಮಯ ಹಾಗೂ ಹಣ ಉಳಿತಾಯವಾಗಲಿದೆ’ ಎಂದು ತಿಳಿಸಿದ್ದಾರೆ.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಏಕಕಾಲಕ್ಕೆ ಚುನಾವಣೆ ನಡೆಸುವುದು ಸ್ವಾಗತಾರ್ಹ ನಿರ್ಧಾರ. ಇದು ಜಾರಿಯಾಗಬೇಕು’ ಎಂದು ತಿಳಿಸಿದರು.</p>.<p>ಕಳೆದ ಡಿಸೆಂಬರ್ನಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ರಜನಿಕಾಂತ್ ಘೋಷಿಸಿದ್ದರು. ಇದೀಗ ಏಕಕಾಲಕ್ಕೆ ಚುನಾವಣೆ ನಡೆಸಲು ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>‘ಏಕಕಾಲಕ್ಕೆ ಚುನಾವಣೆ ನಡೆಸುವುದು ಒಳ್ಳೆಯ ನಿರ್ಧಾರವಾಗಿದ್ದು, ಇದರ ಲಾಭಗಳನ್ನು ಎಲ್ಲ ರಾಜಕೀಯ ಪಕ್ಷಗಳು ಅರಿತುಕೊಂಡು, ಸಹಕಾರ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.</p>.<p>ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಂತೆ ಅಭಿಪ್ರಾಯ ಸಂಗ್ರಹದ ವೇಳೆ 9 ರಾಜಕೀಯ ಪಕ್ಷಗಳು ವಿರೋಧಿಸಿದ್ದರೆ, ಬಿಜು ಜನತಾದಳ, ಎಐಎಡಿಎಂಕೆ. ಶಿರೋಮಣಿ ಅಕಾಲಿದಳ ಬೆಂಬಲಿಸಿದ್ದವು.</p>.<p>‘10 ಸಾವಿರ ಕೋಟಿ ವೆಚ್ಚದ ಚೆನ್ನೈ ಸಲೇಂ ನಡುವಿನ ಅಷ್ಟಪಥ ಯೋಜನೆಯನ್ನು ರಜನಿಕಾಂತ್ ಬೆಂಬಲಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ಇಂತಹ ಯೋಜನೆ ಜಾರಿಯಾಗುವುದು ಅಗತ್ಯ. ಇದರಿಂದ ದೊಡ್ಡ ಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ </strong>: ‘ಲೋಕಸಭೆ ಹಾಗೂ ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾಪಕ್ಕೆ ಸೂಪರ್ಸ್ಟಾರ್ ರಜನಿಕಾಂತ್ ಅವರು ಬೆಂಬಲ ವ್ಯಕ್ತಪಡಿಸಿದ್ದು, ಇದರಿಂದ ಸಮಯ ಹಾಗೂ ಹಣ ಉಳಿತಾಯವಾಗಲಿದೆ’ ಎಂದು ತಿಳಿಸಿದ್ದಾರೆ.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಏಕಕಾಲಕ್ಕೆ ಚುನಾವಣೆ ನಡೆಸುವುದು ಸ್ವಾಗತಾರ್ಹ ನಿರ್ಧಾರ. ಇದು ಜಾರಿಯಾಗಬೇಕು’ ಎಂದು ತಿಳಿಸಿದರು.</p>.<p>ಕಳೆದ ಡಿಸೆಂಬರ್ನಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ರಜನಿಕಾಂತ್ ಘೋಷಿಸಿದ್ದರು. ಇದೀಗ ಏಕಕಾಲಕ್ಕೆ ಚುನಾವಣೆ ನಡೆಸಲು ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>‘ಏಕಕಾಲಕ್ಕೆ ಚುನಾವಣೆ ನಡೆಸುವುದು ಒಳ್ಳೆಯ ನಿರ್ಧಾರವಾಗಿದ್ದು, ಇದರ ಲಾಭಗಳನ್ನು ಎಲ್ಲ ರಾಜಕೀಯ ಪಕ್ಷಗಳು ಅರಿತುಕೊಂಡು, ಸಹಕಾರ ನೀಡಬೇಕು’ ಎಂದು ಮನವಿ ಮಾಡಿದ್ದಾರೆ.</p>.<p>ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಂತೆ ಅಭಿಪ್ರಾಯ ಸಂಗ್ರಹದ ವೇಳೆ 9 ರಾಜಕೀಯ ಪಕ್ಷಗಳು ವಿರೋಧಿಸಿದ್ದರೆ, ಬಿಜು ಜನತಾದಳ, ಎಐಎಡಿಎಂಕೆ. ಶಿರೋಮಣಿ ಅಕಾಲಿದಳ ಬೆಂಬಲಿಸಿದ್ದವು.</p>.<p>‘10 ಸಾವಿರ ಕೋಟಿ ವೆಚ್ಚದ ಚೆನ್ನೈ ಸಲೇಂ ನಡುವಿನ ಅಷ್ಟಪಥ ಯೋಜನೆಯನ್ನು ರಜನಿಕಾಂತ್ ಬೆಂಬಲಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ಇಂತಹ ಯೋಜನೆ ಜಾರಿಯಾಗುವುದು ಅಗತ್ಯ. ಇದರಿಂದ ದೊಡ್ಡ ಮಟ್ಟದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ’ ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>